Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...