Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...