Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...