Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...