Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....