Homeಕರ್ನಾಟಕಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

- Advertisement -
- Advertisement -

ಕರ್ನಾಟಕ ಮತದಾರರು ಇತರೆ ರಾಜ್ಯಗಳ ಮತದಾರರಂತೆ ಅಲ್ಲ. ಕಾಲಕಾಲಕ್ಕೆ ಆಡಳಿತರೂಢ ಸರ್ಕಾರಕ್ಕೆ ಪಾಠ ಕಲಿಸುತ್ತಾ ಬಂದಿರುವ ಇಲ್ಲಿನ ಜನತೆ, 37 ವರ್ಷಗಳ ಇತಿಹಾಸವನ್ನೇ ಈಗಲೂ ಮುಂದುವರಿಸಿದ್ದಾರೆ.

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸಿದ್ದಾರೆ. ಆಪರೇಷನ್ ಕಮಲದ ಮೂಲಕ ಬಂದ ಬಿಜೆಪಿ ಸರ್ಕಾರವನ್ನು ಕೆಡವಿ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ. 135+ ಸ್ಥಾನಗಳನ್ನು ಕಾಂಗ್ರೆಸ್ ಗಳಿಸಿದೆ. ಬಿಜೆಪಿ 66 ಸ್ಥಾನಗಳಿಗೆ ಕುಸಿದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3.5, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ಬಲಾಢ್ಯ ಜಾತಿಗಳ ಪ್ರಾಬಲ್ಯವನ್ನು ಡಿ.ದೇವರಾಜ ಅರಸು (ಮುಖ್ಯಮಂತ್ರಿ, 1972-1980) ಅವರು ಮುರಿದಿದ್ದರು. ಲಿಂಗಾಯತರು ಮತ್ತು ಒಕ್ಕಲಿಗರನ್ನು ಬಿಟ್ಟು ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಜಾತಿಗಳನ್ನು ಸಂಘಟಿಸಿ ಚುನಾವಣಾ ನಿಯಮಗಳನ್ನು ಅರಸು ಬದಲಿಸಿದ್ದರು.

ಆದರೆ ಸಾಂಪ್ರದಾಯಿಕವಾಗಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಪಡೆಯುತ್ತಾರೆ. ಈ ಸಮುದಾಯಗಳ ಸಂಖ್ಯಾ ಬಲಕ್ಕಿಂತ ಹೆಚ್ಚಿನ ರಾಜಕೀಯ ಸ್ಥಾನಮಾನ ಈ ಜಾತಿಗಳಿಗೆ ಇದೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು.

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಮತ್ತೆ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಯಿತು.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ರಾಜ್ಯ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ತೀವ್ರವಾಗಿ ಎದುರಿಸುತ್ತಿತ್ತು. ರಾಜ್ಯ ನಾಯಕತ್ವವನ್ನು ಕಡೆಗಣಿಸಿ, ಕೇಂದ್ರಕ್ಕೆ ಜೋತು ಬಿದ್ದ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಶೇ. 40 ಕಮಿಷನ್ ಆರೋಪ ಏಟು ನೀಡಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿತ್ತು. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸಿತ್ತು. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸಿದ್ದವು. ಇದೆಲ್ಲವನ್ನೂ ಅದೃಶ್ಯ ಮತದಾರ ತಿರಸ್ಕರಿಸಿ ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿರುವುದು ಸ್ಪಷ್ಟವಾಗಿದೆ. ಸರ್ಕಾರಗಳಿಗೆ ಬುದ್ಧಿ ಕಲಿಸುವ ಪ್ರಬುದ್ಧತೆಯನ್ನು ಕರ್ನಾಟಕ ಮತದಾರರು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...