Homeಕರ್ನಾಟಕವಿಶ್ಲೇಷಣೆ: ಎಕ್ಸಿಟ್ ಪೋಲ್ ಉಲ್ಟಾ ಹೊಡೆದ ಪ್ರಸಂಗಗಳಿವು

ವಿಶ್ಲೇಷಣೆ: ಎಕ್ಸಿಟ್ ಪೋಲ್ ಉಲ್ಟಾ ಹೊಡೆದ ಪ್ರಸಂಗಗಳಿವು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ. ಕಾಂಗ್ರೆಸ್ ಮೈಲುಗೈ ಸಾಧಿಸುತ್ತದೆ ಎಂದು ಕೆಲವು ಸಮೀಕ್ಷೆ ಹೇಳಿದರೆ, ಕೆಲವು ಬಿಜೆಪಿಗೆ ಹೆಚ್ಚಿನ ಸ್ಥಾನವನ್ನು ನೀಡಿವೆ. ಎರಡು ಪಕ್ಷಕ್ಕೂ ಸರಳ ಬಹುಮತದ ಅವಕಾಶ ಇರುವುದನ್ನು ಕೆಲವು ಸಮೀಕ್ಷೆ ಸೂಚಿಸಿವೆ. ಆದರೆ ಈ ಸಮೀಕ್ಷೆಗಳು ಕೆಲವೊಮ್ಮೆ ನಿಜವೂ ಆಗಬಹುದು ಅಥವಾ ಹುಸಿಯೂ ಆಗಬಹುದು. ಈಗ ತೋರಿಸಿರುವ ಅಂಕಿ- ಅಂಶಗಳಿಗಿಂತ ಕಾಂಗ್ರೆಸ್ ಅಥವಾ ಬಿಜೆಪಿ ಇನ್ನು ಹೆಚ್ಚಿನ ಸ್ಥಾನಗಳನ್ನು ಪಡೆಯಬಹುದು ಅಥವಾ ಕಡಿಮೆಯೂ ಆಗಬಹುದು. ಯಾಕೆಂದರೆ ಮತಗಟ್ಟೆ ಸಮೀಕ್ಷೆಗಳು ಅನೇಕ ಸಲ ಉಲ್ಟಾ ಹೊಡೆದಿರುವುದನ್ನು ಇತಿಹಾಸ ಹೇಳುತ್ತದೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

ಇದನ್ನೂ ಓದಿರಿ: ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಇದನ್ನೂ ಓದಿರಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...