Homeಕರ್ನಾಟಕವಿಶ್ಲೇಷಣೆ: ಎಕ್ಸಿಟ್ ಪೋಲ್ ಉಲ್ಟಾ ಹೊಡೆದ ಪ್ರಸಂಗಗಳಿವು

ವಿಶ್ಲೇಷಣೆ: ಎಕ್ಸಿಟ್ ಪೋಲ್ ಉಲ್ಟಾ ಹೊಡೆದ ಪ್ರಸಂಗಗಳಿವು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ. ಕಾಂಗ್ರೆಸ್ ಮೈಲುಗೈ ಸಾಧಿಸುತ್ತದೆ ಎಂದು ಕೆಲವು ಸಮೀಕ್ಷೆ ಹೇಳಿದರೆ, ಕೆಲವು ಬಿಜೆಪಿಗೆ ಹೆಚ್ಚಿನ ಸ್ಥಾನವನ್ನು ನೀಡಿವೆ. ಎರಡು ಪಕ್ಷಕ್ಕೂ ಸರಳ ಬಹುಮತದ ಅವಕಾಶ ಇರುವುದನ್ನು ಕೆಲವು ಸಮೀಕ್ಷೆ ಸೂಚಿಸಿವೆ. ಆದರೆ ಈ ಸಮೀಕ್ಷೆಗಳು ಕೆಲವೊಮ್ಮೆ ನಿಜವೂ ಆಗಬಹುದು ಅಥವಾ ಹುಸಿಯೂ ಆಗಬಹುದು. ಈಗ ತೋರಿಸಿರುವ ಅಂಕಿ- ಅಂಶಗಳಿಗಿಂತ ಕಾಂಗ್ರೆಸ್ ಅಥವಾ ಬಿಜೆಪಿ ಇನ್ನು ಹೆಚ್ಚಿನ ಸ್ಥಾನಗಳನ್ನು ಪಡೆಯಬಹುದು ಅಥವಾ ಕಡಿಮೆಯೂ ಆಗಬಹುದು. ಯಾಕೆಂದರೆ ಮತಗಟ್ಟೆ ಸಮೀಕ್ಷೆಗಳು ಅನೇಕ ಸಲ ಉಲ್ಟಾ ಹೊಡೆದಿರುವುದನ್ನು ಇತಿಹಾಸ ಹೇಳುತ್ತದೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

ಇದನ್ನೂ ಓದಿರಿ: ಕರ್ನಾಟಕ ಚುನಾವಣೆ ಎಕ್ಸಿಟ್ ಪೋಲ್: ಮತದಾನೋತ್ತರ ಸಮೀಕ್ಷೆಗಳು ಹೀಗೆ ಹೇಳುತ್ತಿವೆ

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಇದನ್ನೂ ಓದಿರಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...