Homeಕರ್ನಾಟಕವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

- Advertisement -
- Advertisement -

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ಯು ಸೆಪ್ಟೆಂಬರ್‌ 30ರಂದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಿತು. ಆನಂತರದಲ್ಲಿ ಕರ್ನಾಟಕ ಬಿಜೆಪಿ ಘಟಕವು ಕನಿಷ್ಠ ಸೌಜನ್ಯವನ್ನು ಪಾಲಿಸದೆ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದು ರಾಜಕೀಯ ಸ್ವಾಸ್ಥ್ಯದ ಪ್ರಶ್ನೆಯನ್ನು ಹುಟ್ಟಿಹಾಕಿದೆ.

ರಾಹುಲ್ ಗಾಂಧಿಯವರೊಂದಿಗೆ ಸಾವಿರಾರು ಜನರು ಹೆಜ್ಜೆಹಾಕತೊಡಗಿದ್ದಾರೆ. ಈ ಯಾತ್ರೆಯ ಪರಿಣಾಮಗಳೇನು ಎಂಬುದು ಈಗಲೇ ನಿರ್ಧರಿಸಲಾಗದು. “ಜನರನ್ನು ಒಂದುಗೂಡಿಸುವುದು, ಪ್ರೀತಿಯನ್ನು ಪಸರಿಸುವುದು ನನ್ನ ಗುರಿ” ಎಂದು ರಾಹುಲ್‌ ಹೇಳುತ್ತಿದ್ದಾರೆ. ಕಾಂಗ್ರೆಸ್ಸೇತರ ಅನೇಕ ಸಂಘಟನೆಗಳೂ ಭಾರತ್‌ ಜೋಡೋ ಯಾತ್ರೆಗೆ ಬೆಂಬಲ ನೀಡಿವೆ. ಮತ್ತೊಂದೆಡೆ ರಾಹುಲ್ ಮತ್ತು ಕಾಂಗ್ರೆಸ್‌ಗೆ ಕೌಂಟರ್‌ ನೀಡುವ ಭರದಲ್ಲಿ ಕರ್ನಾಟಕ ಬಿಜೆಪಿ ನಂಜು ಕಾರುತ್ತಿರುವುದು ಸ್ಪಷ್ಟವಾಗಿದೆ. ರಾಜಕೀಯದಲ್ಲಿ ಆರೋಪ, ಪ್ರತ್ಯಾರೋಪಗಳು ಇದ್ದೇ ಇರುತ್ತವೆ. ಎಲ್ಲಕ್ಕೂ ಸಾಂವಿಧಾನಿಕ ಚೌಕಟ್ಟು ಇರುತ್ತದೆ. ಆದರೆ ಅವುಗಳನ್ನು ಮೀರಿ, ವ್ಯಕ್ತಿತ್ವ ಹರಣ ಮಾಡುವುದು ಕರ್ನಾಟಕದ ರಾಜಕೀಯ ಗುಣಕ್ಕೆ ಸರಿಹೊಂದುವುದಿಲ್ಲ. ಆದರೆ ಇಂತಹ ಬೆಳವಣಿಗೆಗೆ ಮಾಧ್ಯಮಗಳೂ ಪ್ರೋತ್ಸಾಹಿಸಿರುವುದು ಆಘಾತಕಾರಿ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್‌ 30ರಂದು ಕರ್ನಾಟಕಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದಾಗ, ಕರ್ನಾಟಕ ಬಿಜೆಪಿ ಮಾಡಿದ ಟ್ವೀಟ್, “ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ” ಎಂಬುದಾಗಿತ್ತು.

ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್‌ ಜೋಡೋ ಯಾತ್ರೆ ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿಯವರಿಗೆ ಆತ್ಮೀಯ ಸ್ವಾಗತ” ಎಂದು ಮತ್ತೊಂದು ಟ್ವೀಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ಅಮಿತ್ ಶಾ ಹಾಗೂ ಬಿ.ಎಸ್.ಯಡಿಯೂರಪ್ಪನವರ ಮೇಲೂ ಪ್ರಕರಣಗಳಿವೆ. ಅನೇಕ ಬಿಜೆಪಿ ನಾಯಕರು ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿರಿ: ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ, “ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್‌ ಗಾಂಧಿ ಅವರಿಗೆ ಸ್ವಾಗತ. ರಾಹುಲ್ ಗಾಂಧಿ‌ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು” ಎಂದಿತ್ತು.

ಪೇಸಿಎಂ ಪೋಸ್ಟರ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗಷ್ಟೇ, “ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್‌ ಮಾಡುತ್ತಿದೆ” ಎಂದು ದೂರಿದ್ದರು. ಆದರೆ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿ ಆರಂಭಿಸಿದ ‘ಡರ್ಟಿ ಪಾಲಿಟಿಕ್ಸ್‌’ ಸಾರ್ವಜನಿಕ ವಲಯದಿಂದ ಟೀಕೆಗಳನ್ನು ಎದುರಿಸಿತು. ‘ಕನ್ನಡಪ್ರಭ’ ದಿನಪತ್ರಿಕೆಗೆ ಬಿಜೆಪಿ ನೀಡಿದ ಜಾಹೀರಾತಿನ ಮೂಲಕ ಬಿಜೆಪಿಯ ಅಸಹನೆ ಢಾಳಾಗಿ ವ್ಯಕ್ತವಾಗಿತ್ತು. ‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಯಿತು. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಬಳಸಲಾಗಿತ್ತು.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಜಾಹೀರಾತಿನಲ್ಲಿ ಹೇಳಲಾಗಿತ್ತು.

ಭಾರತ್ ಜೋಡೋ ಯಾತ್ರೆಯಿಂದಾಗಿ ಬಿಜೆಪಿ ಆತಂಕಗೊಂಡಿದೆ ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದರು. ಕನ್ನಡದಲ್ಲಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದರು.

ರಾಹುಲ್ ಗಾಂಧಿಯವರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಯತ್ನವನ್ನು ಬಿಜೆಪಿ ಸತತ ಮಾಡುತ್ತಲೇ ಇದೆ. “ರಾಹುಲ್ ಗಾಂಧಿ ಯಾತ್ರೆ ಹಿಂದೂ ವಿರೋಧಿ ಯಾತ್ರೆಯಾಗಿ ಬದಲಾಗುತ್ತಿದೆ. ತಮಿಳುನಾಡಿನಿಂದ ಆರಂಭಗೊಂಡ ಯಾತ್ರೆ ಹೆಜ್ಜೆಹೆಜ್ಜೆಗೂ ಹಿಂದೂಗಳನ್ನು ಅವಮಾನಿಸುತ್ತಿದೆ. ಹಿಂದೂ ಸಮಾಜವನ್ನು ಕೆಣಕಿ ನಿಮ್ಮ ಮತಬ್ಯಾಂಕ್‌ ಗಟ್ಟಿಗೊಳಿಸುವ ಹುನ್ನಾರವೇ ಇದು? ಕೇರಳದಲ್ಲೂ ಹಿಂದೂ ದ್ವೇಷವನ್ನು ರಾಹುಲ್ ಗಾಂಧಿ ಮಂದುವರಿಸಿದರು. ನಡುಬೀದಿಯಲ್ಲಿ ಗೋವಿನ ತಲೆ ಕಡಿದ ಯುವ ಕಾಂಗ್ರೆಸ್‌ ಮುಖಂಡನೊಂದಿಗೆ ಪಾದಯಾತ್ರೆ ಮಾಡುವ ಮೂಲಕ ರಾಹುಲ್‌ ಗಾಂಧಿ ಬಹುಸಂಖ್ಯಾತ ಹಿಂದೂಗಳನ್ನು ಅಪಮಾನಿಸಿದ್ದಾರೆ. ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್‌ ಗಾಂಧಿ ಅವರ ಸಮ್ಮತಿಯಿದೆಯೇ?” ಎಂದು ಪ್ರಶ್ನಿಸಿತು.

ಬಿಜೆಪಿ ಇಷ್ಟಕ್ಕೆ ಸುಮ್ಮನಾಗದೆ ಒಂದಿಷ್ಟು ರಾಜಕೀಯ ಸೌಜನ್ಯವಿಲ್ಲದ, ದ್ವೇಷವನ್ನೇ ಕಾರುವ ಪೂರ್ಣ ಪುಟದ ಜಾಹೀರಾತನ್ನು ಸುದ್ದಿರೂಪದಲ್ಲಿ ನಾಲ್ಕು ಪತ್ರಿಕೆಗಳಿಗೆ (ಕನ್ನಡಪ್ರಭ, ಹೊಸದಿಗಂತ, ವಿಶ್ವವಾಣಿ, ಸಂಯುಕ್ತ ಕರ್ನಾಟಕ) ನೀಡಿತು. ಎಷ್ಟೋ ಓದುಗರು ಇದನ್ನು ಸುದ್ದಿಯೆಂದೇ ಭಾವಿಸಿರುವ ಸಾಧ್ಯತೆ ಇದೆ. ಜನರು ಬಿಜೆಪಿ ಹಾಗೂ ಪತ್ರಿಕೆಗಳ ನೈತಿಕ ಕುಸಿತವನ್ನು ತರಾಟೆಗೆ ತೆಗೆದುಕೊಂಡರು.

“ಇದು ಅತ್ಯಂತ ನೀಚ ಜಾಹೀರಾತು. ಪತ್ರಿಕೋದ್ಯಮ ಪಾತಾಳಕ್ಕೆ ತಲುಪಿರುವುದಕ್ಕೆ ಸಾಕ್ಷಿ. ಮೂರೂ ಪತ್ರಿಕೆಗಳಿಗೆ ಲೀಡ್ ಸುದ್ದಿ ಜಾಹೀರಾತನ್ನು ಡಿಜೈನ್, ಹೆಡಿಂಗ್ ಸಮೇತ ನೀಡಿದೆ ಬಿಜೆಪಿ. ಬಿಲ್ಲು ಸಹ ದುಬಾರಿಯೇ ಇರಬಹುದು. ಉಳಿದೆರಡು ಪತ್ರಿಕೆಗಳ ವಿಷಯ ಹಾಗಿರಲಿ, ಕನ್ನಡಪ್ರಭ ಹೀಗೆ ಬೀದಿಯಲ್ಲಿ ಬೆತ್ತಲಾಗಬಾರದಿತ್ತು‌” ಎಂಬ ಟೀಕೆಗಳು ವ್ಯಕ್ತವಾಗಿವೆ.

ರಾಜಕೀಯ ಸೌಜನ್ಯವನ್ನು ಮೀರಿ ಇತ್ತೀಚೆಗೆ ಬಿಜೆಪಿ ವರ್ತಿಸಿರುವ ರೀತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ  ಚಿಂತಕ ಶ್ರೀಪಾದ್ ಭಟ್‌ ಅವರು, “ಬಿಜೆಪಿಯ ನಿಘಂಟಿನಲ್ಲಿ ನೈತಿಕ ರಾಜಕಾರಣ ಎಂಬುದಿಲ್ಲ. ಈ ಯಾತ್ರೆಯ ಬಗ್ಗೆ ಬಿಜೆಪಿಯವರು ಹತಾಶರಾದಂತೆ ಕಾಣುತ್ತಿದೆ. ಈ ಕಾರ್ಯಕ್ರಮ ಯಶಸ್ವಿಯಾಗುವುದಿಲ್ಲ ಎಂದು ಬಿಜೆಪಿಯವರು ಭಾವಿಸಿದಂತಿತ್ತು. ಆದರೆ ಸ್ವತಃ ಕಾಂಗ್ರೆಸ್‌ಗೆ ಆಶ್ಚರ್ಯವಾಗುವ ರೀತಿಯ ಯಾತ್ರೆ ಬೆಳೆಯುತ್ತಿದೆ. ಪತ್ರಿಕೆಗಳು ಹೆಚ್ಚಿನ ಸ್ಪೇಸ್ ನೀಡದಿದ್ದರೂ ಸಾಮಾಜಿಕ ಮಾಧ್ಯಮಗಳ ಮೂಲಕ ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ. ಬಿಜೆಪಿ ಅಚ್ಚರಿ ಹಾಗೂ ಹತಾಶೆಗೊಂಡು ಕೆಟ್ಟದ್ದಾಗಿ ಜಾಹೀರಾತುಗಳನ್ನು ನೀಡಿದೆ” ಎಂದರು.

ಇದನ್ನೂ ಓದಿರಿ: ಗೌರಿ ಲಂಕೇಶ್ ಹೋರಾಟ ಸ್ಮರಿಸಿದ ರಾಹುಲ್ ಗಾಂಧಿ: ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆಹಾಕಿದ ಕವಿತಾ, ಇಂದಿರಾ ಲಂಕೇಶ್

“ಮುಖ್ಯವಾಗಿ ಮಾಧ್ಯಮಗಳ ವರ್ತನೆ ಅಪಾಯಕಾರಿಯಾಗಿದೆ. ಇದಕ್ಕಿಂತ ಕೆಳಗೆ ಮಾಧ್ಯಮಗಳು ಇಳಿಯುವುದಿಲ್ಲ ಎಂದು ಸೋಮವಾರ ನಾವು ಅಂದುಕೊಂಡಿದ್ದರೆ, ಮಂಗಳವಾರ ನಮ್ಮ ನಂಬಿಕೆಯನ್ನು ಹುಸಿಗೊಳಿಸುತ್ತವೆ. ಹಣಕ್ಕಾಗಿ ಈ ರೀತಿಯ ಜಾಹೀರಾತುಗಳನ್ನು ಹಾಕುವುದು ನಾಚಿಗೆಗೇಡಿನ ಸಂಗತಿ. ಮಾಧ್ಯಮಗಳು ಬಿಜೆಪಿ ಜೊತೆ ನಿಂತಂತೆ ಕಾಣುತ್ತಿದೆ” ಎಂದು ತಿಳಿಸಿದರು.

“ಕಾಂಗ್ರೆಸ್‌ ಯಾತ್ರೆಗೆ ಹೆಚ್ಚಿನ ಬೆಂಬಲ ಸಿಗುತ್ತಿದೆ. ಹಾಗೆಂದು ಇದು ಮತವಾಗಿ ಪರಿವರ್ತನೆಯಾಗುತ್ತದೆ ಎಂದು ಸದ್ಯಕ್ಕೆ ಕಾಂಗ್ರೆಸ್ಸಿಗರು ಭಾವಿಸುವಂತಿಲ್ಲ. ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿದರೆ ಮಾತ್ರ ಕಾಂಗ್ರೆಸ್ ಯಶಸ್ಸು ಪಡೆಯಬಹುದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...