Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...