Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...