Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...