Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...