Homeಮುಖಪುಟವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

- Advertisement -
- Advertisement -

ಆಜಾದ್ ಸಮಾಜ ಪಕ್ಷದ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ನೆಲದಲ್ಲಿ ಸವಾಲು ಹಾಕಿದ್ದಾರೆ. ಆದಿತ್ಯನಾಥ್ ಅವರ ವಿರುದ್ಧ ಸ್ಪರ್ಧಿಸಿರುವ ರಾವಣ್ ಅವರಿಗೆ ಯಶಸ್ಸು ಸಾಧ್ಯವೆ ಎಂಬ ವಿಶ್ಲೇಷಣೆಯನ್ನು ‘ದಿ ಕ್ವಿಂಟ್‌’ ಜಾಲತಾಣ ಮಾಡಿದೆ.

ರಾವಣ್‌ ಅವರು ಯೋಗಿ ವಿರುದ್ಧ ಗೋರಖ್‌ಪುರ ನಗರ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿಯ ಬಗ್ಗೆ ಮಾತನಾಡುವಾಗ ಚಂದ್ರಶೇಖರ್‌ ಈ ಹಿಂದೆ ಈ ವಿಚಾರವಾಗಿಯೇ ಪ್ರಸ್ತಾಪಿಸಿದ್ದರು. ಆದರೆ ಆ ಮಾತುಕತೆ ಯಶಸ್ಸು ಕಾಣಲಿಲ್ಲ. “ಅಖಿಲೇಶ್ ಅವರು ನನ್ನನ್ನು ಕೇಳಿದರೆ, ನಾನು ಯೋಗಿ ವಿರುದ್ಧ ಚುನಾವಣೆ ಎದುರಿಸಲು ಸಿದ್ಧ” ಎಂದು ರಾವಣ್‌ ಘೋಷಿಸಿದ್ದರು.

ರಾವಣ್‌ ಈಗ ಯೋಗಿ ಆದಿತ್ಯನಾಥ್ ವಿರುದ್ಧ ಕಣಕ್ಕಿಳಿದಿದ್ದಾರೆ. ಗೋರಖ್‌ಪುರ ಕ್ಷೇತ್ರದಲ್ಲಿ ಕೇಸರಿ ರಾಜಕಾರಣಿಯನ್ನು ಸೋಲಿಸಲು ಸಾಧ್ಯವಾಗುತ್ತದೆಯೇ? ಇದರಾಚೆಗೆ ಚಂದ್ರಶೇಖರ್‌ ಆಜಾದ್ ಯಾವುದಾದರೂ ವಿಷಯದ ಮೇಲೆ ಕಣ್ಣಿಟ್ಟಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಶೋಧಿಸುವ ಯತ್ನವನ್ನು ದಿ ಕ್ವಿಂಟ್ ಮಾಡಿದೆ.

ಗೋರಖನಾಥ ನಾಡಿನಲ್ಲಿ ದಲಿತ ಶಕ್ತಿ

ಕಳೆದ ಕೆಲವು ಚುನಾವಣೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಾಧನೆಯು ಗೋರಖ್‌ಪುರ ನಗರ ಕ್ಷೇತ್ರದಲ್ಲಿ ದಲಿತ ಮತಗಳ ರಾಜಕೀಯ ಬಲವನ್ನು ಸೂಚಿಸುತ್ತದೆ. ಕುತೂಹಲಕಾರಿಯಾಗಿ, ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‌ಪಿ ಎರಡನೇ ರನ್ನರ್‌ ಅಪ್‌ ಆಗುತ್ತಿರುವುದನ್ನು ಗಮನಿಸಬಹುದು.

2017ರಲ್ಲಿ ಬಿಎಸ್‌ಪಿಯ ಜನಾರ್ದನ್ ಚೌಧರಿ ಶೇ.11ರಷ್ಟು ಮತಗಳನ್ನು ಪಡೆದಿದ್ದರೆ, 2012ರಲ್ಲಿ ದೇವೇಂದ್ರ ಚಂದ್ರ ಶ್ರೀವಾಸ್ತವ ಶೇ.14ರಷ್ಟು ಮತಗಳನ್ನು ಗಳಿಸಿ 23,000 ಮತಗಳನ್ನು ಪಡೆದಿದ್ದರು. 2007 ರಲ್ಲಿ, ವಿನೋದ್ ಕುಮಾರ್ ಉಪಾಧ್ಯಾಯ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದರು. ಕೇವಲ 5,000 ಮತಗಳನ್ನು ಪಡೆದಿದ್ದರು.

ಬಿಎಸ್‌ಪಿಯ ವೋಟ್ ಬ್ಯಾಂಕ್‌ನ ಮೇಲೆ ಚಂದ್ರಶೇಖರ್‌ ಆಜಾದ್ ಕಣ್ಣಿಟ್ಟಿದ್ದಾರೆ. ಹಾಗಾಗಿ, ಬಿಎಸ್‌ಪಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿದರೆ, ದಲಿತ ಮತಗಳು ವಿಭಜನೆಯಾಗುವುದು ಖಚಿತ ಎನ್ನಲಾಗಿದೆ.

ಆದಿತ್ಯನಾಥ್‌ಗೆ ಸವಾಲೆಸೆಯುವ ಅಗಾಧ ಶಕ್ತಿ ರಾವಣ್‌‌ ಅವರಿಗೆ ಇಲ್ಲವೆಂದಾದರೆ, ಆದಿತ್ಯನಾಥ್‌ ಅವರನ್ನು ಏಕೆ ಎದುರಿಸಲು ನಿಂತಿದ್ದಾರೆ ಎಂಬುದು ರಾಜಕೀಯ ಪಂಡಿತರಿಗೆ ಕುತೂಹಲದ ಸಂಗತಿಯಾಗಿದೆ.

ಗೋರಖ್‌ಪುರ ಗ್ರಾಮಾಂತರ ಕ್ಷೇತ್ರದಲ್ಲಿ ದಲಿತ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ಪ್ರದೇಶಗಳನ್ನು ಸೇರಿಸಿದ ಕಾರಣ ದಲಿತ ಮತ್ತು ಅಲ್ಪಸಂಖ್ಯಾತ ಮತದಾರರ ಶಕ್ತಿ ಬದಲಾಗಿದೆ. ಮುಖ್ಯವಾಗಿ ವೈಶ್ಯ, ಕಾಯಸ್ಥ, ರಜಪೂತ ಮತ್ತು ಬ್ರಾಹ್ಮಣ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅನುಕೂಲಕರ ವಾತಾವರಣವಿದೆ.

ಅಖಿಲೇಶ್ ಯಾದವ್ ಅವರೊಂದಿಗಿನ ಮೈತ್ರಿ ಮುರಿದುಬಿದ್ದ ನಂತರ ರಾವಣ್‌ ಮತ್ತು ಯೋಗಿ ನಡುವಿನ ಸಂಭಾವ್ಯ ರಹಸ್ಯ ಒಪ್ಪಂದದ ಬಗ್ಗೆ ವದಂತಿಗಳು ಹರಡಿಕೊಂಡಿವೆ ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಕುಮಾರ್ ಸಿಂಗ್ ಹೇಳುತ್ತಾರೆ.

ಚುನಾವಣೆಯ ಹೋರಾಟವು ಆ ಆರೋಪದಿಂದ ಅವರನ್ನು ಮುಕ್ತಗೊಳಿಸಬಹುದು. ಆದರೆ ಇತರ ಪಕ್ಷಗಳಾದ ಎಸ್‌ಪಿ ಅಥವಾ ಕಾಂಗ್ರೆಸ್ – ರಾವಣ್ ಅವರನ್ನು ಬೆಂಬಲಿಸಿದರೆ ಮಾತ್ರ ಅವರ ರಾವಣ್‌ ಅವರಿಗೆ ಹೆಚ್ಚಿನ ಅವಕಾಶ ದೊರಕಬಹುದು.

ಮೇಲಾಗಿ, ಯೋಗಿ ಅವರು ದಲಿತ ಮತಗಳ ಕಡೆಗೂ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ. ಬಲಪಂಥೀಯ ಅಂಗಸಂಸ್ಥೆಯಾದ ಯುವ ವಾಹಿನಿಗೆ ಸ್ಲಂಗಳಲ್ಲಿ ಅನೇಕ ದಲಿತ ಯುವಕರು ಸೇರಿಕೊಂಡಿದ್ದಾರೆ. ಸ್ಲಂ ನಿವಾಸಿಗಳನ್ನು ನಿಯಮಿತವಾಗಿ ಯೋಗಿ ಆದಿತ್ಯನಾಥ್‌ ಅವರ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಚುನಾವಣೆಯಲ್ಲಿ ದಲಿತ ಮತದಾರರ ನಿರ್ಧಾರ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಮಾಯಾವತಿಯವರ ಪ್ರಾಬಲ್ಯ?

ಚಂದ್ರಶೇಖರ್ ಆಜಾದ್ ರಾವಣ್‌ ಅವರ ಪ್ರಯತ್ನಗಳು ದಲಿತ ರಾಜಕಾರಣದಲ್ಲಿ ಮಾಯಾವತಿಗೆ ಪರ್ಯಾಯವಾಗಲು ಯತ್ನಿಸಿವೆ. ಇತ್ತ ರಾವಣ್‌ ಅವರಿಗೆ ದಲಿತ ಯುವಕರಲ್ಲಿ ಸಾಕಷ್ಟು ಅನುಯಾಯಿಗಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಮಾಯಾವತಿಯವರು ಸಾರ್ವಜನಿಕವಾಗಿ ಮಾತನಾಡುತ್ತಿರುವುದು ಕಡಿಮೆಯಾದಂತೆ ಚಂದ್ರಶೇಖರ್‌ ಆಜಾದ್‌ ಅವರೇ ದಲಿತ ಸಮಸ್ಯೆಗಳನ್ನು ಉತ್ಸಾಹದಿಂದ ಕೈಗೆತ್ತಿಕೊಂಡು ಬೀದಿಗಿಳಿದಿದ್ದಾರೆ. ಪ್ರಭಾವಿ ಆದಿತ್ಯನಾಥ್‌ ವಿರುದ್ಧ ಸ್ಪರ್ಧಿಸಿರುವುದು ಆಜಾ‌ದ್ ಅವರನ್ನು ದೊಡ್ಡ ಮಟ್ಟದಲ್ಲಿ ಗುರುತಿಸಲಿದೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಬಿಎಸ್‌ಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆದರೆ ರಾವಣ್‌ ಹೆಚ್ಚು ಮತಗಳನ್ನು ಪಡೆಯಲು ಯಶಸ್ವಿಯಾದರೆ, ಇಲ್ಲಿಯವರೆಗೆ ಬಹುತೇಕ ಅವಿರೋಧವಾಗಿ ದಲಿತ ಇಮೇಜ್‌ ಆಗಿ ಉಳಿದಿರುವ ‘ಬೆಹೆನ್‌ಜಿ’ ಚಿತ್ರಣ ಬದಲಾಗಬಹುದು ಎನ್ನಲಾಗುತ್ತಿದೆ.

ಆದರೆ, ಮಾಯಾವತಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಚಂದ್ರಶೇಖರ್ ಆಜಾದ್ ಎಚ್ಚರಿಕೆ ವಹಿಸಿದ್ದಾರೆ. ದಲಿತ ಮತಗಳ ಮೇಲಿನ ಮಾಯಾವತಿಯವರ ‘ಅಧಿಪತ್ಯ’ದ ವಿರುದ್ಧ ಅವರು ಯಾವುದೇ ಕಹಳೆ ಊದುತ್ತಿಲ್ಲ. ಚಂದ್ರಶೇಖರ್‌‌ ನಡೆಗಳು ದಲಿತ ಮತದಾರರನ್ನು ಬಿಎಸ್‌ಪಿಯಿಂದ ಹೊರತರುವ ಯತ್ನಗಳಂತೆ ಭಾಸವಾಗುತ್ತಿವೆ.

ಗೋರಖ್‌ಪುರ ನಗರ ಕ್ಷೇತ್ರದಿಂದ ಚಂದ್ರಶೇಖರ್ ಆಜಾದ್ ರಾವಣ ಗೆಲ್ಲಬಹುದು ಅಥವಾ ಗೆಲ್ಲದೇ ಇರಬಹುದು. ಆದರೆ ಆದಿತ್ಯನಾಥ್‌ ತವರು ನೆಲದಲ್ಲಿ ಅವರ ವಿರುದ್ಧ ಹೋರಾಡುವ ಮೂಲಕ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ಕ್ವಿಂಟ್ ವರದಿ ಹೇಳುತ್ತದೆ


ಇದನ್ನೂ ಓದಿರಿ: ಭಾರತದ ‘ಅತ್ಯಂತ ಎತ್ತರದ ವ್ಯಕ್ತಿ’ ಸಮಾಜವಾದಿ ಪಾರ್ಟಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...