Homeಮುಖಪುಟವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

- Advertisement -
- Advertisement -

ಜನಪ್ರಿಯ ನಾಟಕವಾದ`ಚಿಂತಾಮಣಿ’ಯನ್ನು ಆಂಧ್ರಪ್ರದೇಶ ಸರ್ಕಾರ ಜನವರಿ 17ರಂದು ರಾಜ್ಯಾದ್ಯಂತ ನಿಷೇಧಿಸಿ ಆದೇಶ ಹೊರಡಿಸಿದೆ. ಈ ನಾಟಕವು ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಚಾಲ್ತಿಯಲ್ಲಿದೆ.

100 ವರ್ಷಗಳಷ್ಟು ಹಳೆಯದಾದ ನಾಟಕವನ್ನು ಆರ್ಯ ವೈಶ್ಯ ಸಮುದಾಯವು ವಿರೋಧಿಸಿದ ನಂತರ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ತಮ್ಮ ಸಮುದಾಯದ ಕುರಿತು ಆಕ್ಷೇಪಾರ್ಹ ವಿಷಯವನ್ನು ಒಳಗೊಂಡಿದೆ ಎಂದು ಆರ್ಯವೈಶ್ಯ ಸಮುದಾಯ ಆರೋಪಿಸಿದೆ. ಈ ನಾಟಕವನ್ನು ನಿಷೇಧಿಸಬೇಕೆಂದು 2020ರಿಂದಲೂ ಸಮುದಾಯವು ಒತ್ತಾಯಿಸುತ್ತಿತ್ತು. ವೈಶ್ಯ ಸಮುದಾಯದ ವ್ಯಾಪಾರಿ ಸುಬ್ಬಿ ಸೆಟ್ಟಿಯ ಪಾತ್ರವನ್ನು ನಾಟಕದಲ್ಲಿ ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ವೇಶ್ಯಾಗೃಹಕ್ಕೆ ನಿಯಮಿತವಾಗಿ ಭೇಟಿ ನೀಡುವ ದುಷ್ಕೃತ್ಯದಿಂದಾಗಿ ತನ್ನೆಲ್ಲ ಸಂಪತ್ತನ್ನು ಕಳೆದುಕೊಳ್ಳುವ ಹಾಸ್ಯ ಪ್ರಧಾನ ಪಾತ್ರವಾಗಿ ಸುಬ್ಬಿಸೆಟ್ಟಿಯನ್ನು ಇಲ್ಲಿ ಚಿತ್ರಿಸಲಾಗಿದೆ ಎಂಬುದು ಸಮುದಾಯದ ಆಕ್ಷೇಪ.

ಸರ್ಕಾರದ ನಿರ್ಧಾರದಿಂದ ಸಂತೋಷಗೊಂಡಿರುವ ಆಂಧ್ರಪ್ರದೇಶ ಆರ್ಯ-ವೈಶ್ಯ ಮಹಾಸಭಾದ ಅಧ್ಯಕ್ಷ ಎಂ. ದ್ವಾರಕಾನಾಥ್, “ಹಲವು ವರ್ಷಗಳಿಂದ ನಮ್ಮ ಸಮುದಾಯವು ನಾಟಕವನ್ನು ಆಕ್ಷೇಪಿಸುತ್ತಿದೆ. ಆದರೆ ಯಾವುದೇ ಸರ್ಕಾರವು ಇದನ್ನು ಗಮನಿಸಿರಲಿಲ್ಲ. ಈಗಿನ ಸರ್ಕಾರ ನಾಟಕವನ್ನು ಪರಿಶೀಲಿಸಿ ಸರಿಯಾದ ನಿರ್ಧಾರ ಕೈಗೊಂಡಿದೆ” ಎಂದಿದ್ದಾರೆ.

ನಾಟಕದ ಆಕ್ಷೇಪಣೆಗಳನ್ನು ವಿವರಿಸಿದ ಅವರು, ನಾಟಕವು ನಮ್ಮ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದರು. ಸುಬ್ಬಿ ಸೆಟ್ಟಿ ಪಾತ್ರವನ್ನು ಉಲ್ಲೇಖಿಸಿದ ಅವರು, “ನಮ್ಮನ್ನು ಕಪ್ಪಗಿನ, ಕುಳ್ಳಗಿನ ಮತ್ತು ತಮಾಷೆಯಾಗಿ ಮಾತನಾಡುವ ಜನರೆಂದು ತೋರಿಸಲಾಗಿದೆ. ಇದು 100 ವರ್ಷಗಳ ಹಿಂದೆ ಸ್ವೀಕಾರಾರ್ಹವಾಗಿರಬಹುದು, ಆದರೆ ಇನ್ನು ಮುಂದೆ ಅಲ್ಲ. ಇದು ಈಗ ಅಪರಾಧವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

“ಸುಬ್ಬಿ ಸೆಟ್ಟಿ ಪಾತ್ರವನ್ನು ತೆಗೆದುಹಾಕಲು, ಕೆಲವು ಬದಲಾವಣೆಗಳನ್ನು ಮಾಡಲು ಮತ್ತು ನಾಟಕವನ್ನು ಮುಂದುವರಿಸಲು ಅವಕಾಶ ಮಾಡಿಕೊಡಲು ಕಲಾವಿದರನ್ನು ಏಕೆ ಕೇಳಬಾರದು ಎಂದು ಕೆಲವರು ಕೇಳುತ್ತಿದ್ದಾರೆ … ಆದರೆ ಇಡೀ ನಾಟಕವು ಸುಬ್ಬಿಯ ಪಾತ್ರವನ್ನು ಆಧರಿಸಿದೆ” ಎಂದಿದ್ದಾರೆ.

ಸಮಾಜ ಸುಧಾರಕ ಕಲ್ಲಕೂರಿ ನಾರಾಯಣ ರಾವ್ ಅವರು 1920ರಲ್ಲಿ ಬರೆದ ಈ ನಾಟಕವು ಕೃಷ್ಣನ ಮೇಲಿನ ಭಕ್ತಿಯಿಂದ ಮುಕ್ತಿಯನ್ನು ಪಡೆಯುವ ‘ಚಿಂತಾಮಣಿ’ ಎಂಬ ವೇಶ್ಯೆಯ ಕುರಿತ್ತಾದ್ದಾಗಿದೆ.

“ಮೂಲತಃ, ನಾಟಕವನ್ನು ಸಾಮಾಜಿಕ ಸಂದೇಶದೊಂದಿಗೆ ಸುಧಾರಣಾ ಭಾಗವಾಗಿ ಬರೆಯಲಾಗಿದೆ. ಆದರೆ ನಂತರದಲ್ಲಿ ಈ ನಾಟಕವನ್ನು ಹೆಚ್ಚು ಮನರಂಜನೆಗಾಗಿ ಹಲವಾರು ರೂಪಾಂತರಗಳನ್ನು ಮಾಡಲಾಯಿತು. ವಿಶೇಷವಾಗಿ ‘ರೆಕಾರ್ಡಿಂಗ್ ಡ್ಯಾನ್ಸ್’ (ಜಾನಪದ ನೃತ್ಯದಿಂದ ಕವಲೊಡೆದ ಕಾಮಪ್ರಚೋದಕ ಮನರಂಜನೆ) ಪ್ರವೇಶದ ನಂತರ, ನಾಟಕವು ಸಂಪೂರ್ಣವಾಗಿ ಅಸಭ್ಯವಾಗಿ ಹೊರಹೊಮ್ಮಿತು” ಎಂದು ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಗತಿಪರ ಥಿಯೇಟರ್ ಗ್ರೂಪ್‌ನ ಸ್ಥಾಪಕ ಸದಸ್ಯ ಶೇಕ್ ಜಾನ್ ಬಶೀರ್ ವಿಶ್ಲೇಷಿಸುತ್ತಾರೆ.

“ಗ್ರಾಮೀಣ ಹಬ್ಬಗಳ ಸಮಯದಲ್ಲಿ ಜನಸಾಮಾನ್ಯರನ್ನು ಆಕರ್ಷಿಸಲು, ನಾಟಕದಲ್ಲಿ ಹಲವಾರು ಲೈಂಗಿಕ ಒಳನೋಟಗಳು ಮತ್ತು ಲೈಂಗಿಕ ಉಲ್ಲೇಖಗಳನ್ನು ನಾಟಕದ ಗುಂಪುಗಳು ಸೇರಿಸಿ, ನಾಟಕದ ನಿಜವಾದ ಉದ್ದೇಶವನ್ನು ಅಪವಿತ್ರಗೊಳಿಸಿದ್ದಾರೆ” ಎಂದು ಬಶೀರ್ ಉಲ್ಲೇಖಿಸಿದ್ದಾರೆ.

ಆದರೆ, ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಶೀರ್‌, “ಸೆನ್ಸಾರ್ಶಿಪ್ ಅನ್ನು ಎಂದಿಗೂ ಪ್ರೋತ್ಸಾಹಿಸಬಾರದು. ಕಲೆಯ ಮೂಲಕ ವ್ಯಕ್ತಪಡಿಸಿದ ಭಿನ್ನಾಭಿಪ್ರಾಯವನ್ನು ಮೊಟಕುಗೊಳಿಸಲು ನಾಟಕೀಯ ಪ್ರದರ್ಶನಗಳ ಕಾಯಿದೆಯನ್ನು 1876​ರಲ್ಲಿ ಬ್ರಿಟಿಷರು ಪರಿಚಯಿಸಿದರು. ಪ್ರಸ್ತುತ ಆಂಧ್ರ ಸರ್ಕಾರದ ನಿರ್ಧಾರವನ್ನು ಅದರ ವಿಸ್ತರಣೆಯಾಗಿ ನೋಡಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಟಕದ ಮೇಲೆ ನಿಷೇಧ ಹೇರುವ ಬದಲು ಸರ್ಕಾರವು ಬದಲಾವಣೆಗಳನ್ನು ಕೇಳಬೇಕಿತ್ತು ಎಂದು ಕೆಲವರು ವಾದಿಸಿದ್ದಾರೆ. ನಾಟಕಕಾರ ಮತ್ತು ನಟ ಗೋವಡ ವೆಂಕಟ್ `ದಿ ಹಿಂದೂ’ ಉಲ್ಲೇಖಿಸಿ, “ಎಲ್ಲಾ ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ಒಳಗೊಂಡಿರುತ್ತವೆ. ನಾಟಕದಲ್ಲಿ ಕೆಲವು ಪಾತ್ರಗಳನ್ನು ಮಾತ್ರ ಎತ್ತಿ ತೋರಿಸುವುದು ಸರಿಯಲ್ಲ” ಎಂದಿದ್ದಾರೆ. “ಒಂದು ಪಾತ್ರವನ್ನು ತೆಗೆದುಹಾಕಲು ಅಥವಾ ಆಕ್ಷೇಪಾರ್ಹ ಸಂಭಾಷಣೆಗಳನ್ನು ಸಂಪಾದಿಸಲು ಸರ್ಕಾರಕ್ಕೆ ಹಕ್ಕಿದೆ. ಆದರೆ ಐತಿಹಾಸಿಕ ನಾಟಕದ ಮೇಲೆ ನಿಷೇಧ ಹೇರುವುದು ಸರಿಯಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಿರ್ಧಾರವು ನ್ಯಾಯಾಲಯಲ್ಲಿ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಡುವ ಸಮಾಜ ವಿಜ್ಞಾನಿ ಕಾಂಚ ಐಲಯ್ಯ ಶೆಫರ್ಡ್, “ಸಂತ್ರಸ್ತ ಕಲಾವಿದರು ಹೈಕೋರ್ಟ್‌ನ ಮೊರೆ ಹೋಗಬೇಕು” ಎಂದು ಒತ್ತಾಯಿಸಿದ್ದಾರೆ. “ಇದನ್ನು ನಾವು ಉತ್ತೇಜಿಸಬಾರದು. ನಿಮಗೆ ನಾಟಕ ಅಥವಾ ಚಲನಚಿತ್ರ ಇಷ್ಟವಾಗದಿದ್ದರೆ, ಅದನ್ನು ನೋಡಬೇಡಿ. ನಿಮಗೆ ಪುಸ್ತಕ ಇಷ್ಟವಾಗದಿದ್ದರೆ, ಅದನ್ನು ಓದಬೇಡಿ. ನಿಷೇಧವು ನಮ್ಮ ಪ್ರಧಾನ ಉದ್ದೇಶವಾಗಬಾರದು” ಎಂದು ಕಾಂಶ ಐಲಯ್ಯ ಪ್ರತಿಕ್ರಿಯಿಸಿದ್ದಾರೆ.

ಕಾಂಚ ಐಲಯ್ಯ ಅವರ ‘ಸಾಮಾಜಿಕ ಸ್ಮಗ್ಮರಲು: ಕೊಮಟೊಲ್ಲು’ ಕೃತಿಯನ್ನು ಬ್ಯಾನ್‌ ಮಾಡಬೇಕೆಂಬ ವಿರೋಧ ಕೇಳಿಬಂದಿದ್ದಾಗ ಐಲಯ್ಯ ಅವರು ಈ ಹಿಂದೆ ‘ಬನಿಯಾಸ್’ ಎಂದು ಕರೆಯಲ್ಪಡುವ ವೈಶ್ಯರ ಬಲವಾದ ವಿರೋಧವನ್ನು ಎದುರಿಸಿದ್ದರು. ‘ಸಾಮಾಜಿಕ ಕಳ್ಳಸಾಗಾಣಿಕೆದಾರರು: ವೈಶ್ಯರು’ ಎಂಬ ಶೀರ್ಷಿಕೆಯ ಪುಸ್ತಕ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ ವೈಶ್ಯರು, ಕಾಂಚ ಐಲಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿದ್ದರು, ಅವರ ಪ್ರತಿಕೃತಿ ಮತ್ತು ಪುಸ್ತಕಗಳನ್ನು ಸುಟ್ಟುಹಾಕಿದ್ದರು. ವಿವಿಧ ರೀತಿಯ ಕಿರುಕುಳಗಳನ್ನು ನೀಡಿದ್ದರು.

ಈ ಹಿಂದೆ ವೈಶ್ಯ ಸಮುದಾಯದಿಂದ ತಮಗಾದ ತೊಂದರೆಯನ್ನು ಉಲ್ಲೇಖಿಸಿದ ಕಾಂಚ ಐಲಯ್ಯ, “ಮೂಲಭೂತವಾಗಿ ಬಂಡವಾಳದ ಮೇಲೆ ಏಕಸ್ವಾಮ್ಯ ಸಾಧಿಸಿರುವ ವೈಶ್ಯರು ತಮ್ಮ ಜಾತಿಯ ಶಕ್ತಿಯಿಂದಾಗಿ ಸರ್ಕಾರದ ಮೇಲೆ ಪ್ರಭಾವ ಬೀರಿದ್ದಾರೆ” ಎಂದು ಅಭಿಪ್ರಾಯಪಡುತ್ತಾರೆ. “ವೈಶ್ಯರು ಬಹಳ ಶ್ರೀಮಂತ ಸಮುದಾಯ. ಆದ್ದರಿಂದ ಪ್ರತಿಯೊಬ್ಬ ರಾಜಕಾರಣಿಯೂ ವೈಶ್ಯರ ಕುರಿತು ಒಳ್ಳೆಯ ಪುಸ್ತಕಗಳು ಇರಬೇಕೆಂದು ಬಯಸುತ್ತಾರೆ. ಸರ್ಕಾರಗಳು ವೈಶ್ಯರನ್ನು ಸಂತೋಷಪಡಿಸಲು ಬಯಸುವುದು ಮತಕ್ಕಾಗಿ ಅಲ್ಲ, ಅವರ ಹಣಕ್ಕಾಗಿ” ಎಂದಿದ್ದಾರೆ.

ಮೂಲ: ‘ದಿ ವೈರ್‌’ (ಲೇಖಕ: ಬಾಲಕೃಷ್ಣ ಗಣೇಶನ್)


ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...