Homeಮುಖಪುಟಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ: ರಾಹುಲ್ ಗಾಂಧಿ

ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ: ರಾಹುಲ್ ಗಾಂಧಿ

- Advertisement -
- Advertisement -

“ಹರಿಯಾಣ ಚುನಾವಣಾ ಫಲಿತಾಂಶವನ್ನು ಕಾಂಗ್ರೆಸ್ ವಿಶ್ಲೇಷಿಸುತ್ತಿದೆ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಂದಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ತಮ್ಮ ಪಕ್ಷದ ಆಘಾತಕಾರಿ ಸೋಲಿನ ನಂತರ ಮೊದಲ ಹೇಳಿಕೆ ನೀಡಿದ್ದಾರೆ.

“ನಾವು ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ತಿಳಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹರಿಯಾಣದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ, “ಜನರ ಹಕ್ಕುಗಳು ಮತ್ತು ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಹೋರಾಟವನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಫಲಿತಾಂಶವನ್ನು ಉಲ್ಲೇಖಿಸಿ, “ಇದು ಪ್ರಜಾಪ್ರಭುತ್ವದ ಸ್ವಾಭಿಮಾನದ ವಿಜಯ” ಎಂದರು.

ಹರಿಯಾಣದಲ್ಲಿ ಕಾಂಗ್ರೆಸ್ 37 ಸ್ಥಾನ ಪಡೆಯುವ ಮೂಲಕ ಅಂತಿಮವಾಗಿ ಸೋಲೊಪ್ಪುಕೊಂಡಿತು. ಬಹುಮತದ 46ಕ್ಕೆ ಒಂಬತ್ತು ಸ್ಥಾನಗಳ ಕೊರತೆಯಿದೆ. ಬಿಜೆಪಿ 48 ಸ್ಥಾನಗಳನ್ನು ಗಳಿಸಿದರೆ ಐಎನ್‌ಡಿಎಲ್ ಎರಡು ಸ್ಥಾನಗಳನ್ನು ಗೆದ್ದಿತು.

ಕಾಂಗ್ರೆಸ್ ಪಕ್ಷವು ನಿನ್ನೆಯ ಎಣಿಕೆ ಪ್ರಕ್ರಿಯೆಯ ಮೇಲೆ ಗಂಭೀರವಾದ ಅನುಮಾನಗಳನ್ನು ಎತ್ತಿದೆ. ಫಲಿತಾಂಶಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ. ಫಲಿತಾಂಶಗಳು ವಾಸ್ತವಕ್ಕೆ ವಿರುದ್ಧವಾಗಿವೆ ಮತ್ತು ಕನಿಷ್ಠ ಮೂರು ಜಿಲ್ಲೆಗಳಲ್ಲಿ ಮತ ಯಂತ್ರಗಳ ಎಣಿಕೆ ಮತ್ತು ಕಾರ್ಯನಿರ್ವಹಣೆಯ ಪ್ರಕ್ರಿಯೆಯಲ್ಲಿ ಪಕ್ಷವು “ಅತ್ಯಂತ ಗಂಭೀರ ದೂರುಗಳನ್ನು” ಸ್ವೀಕರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಹರಿಯಾಣದಲ್ಲಿ ಎಣಿಕೆ ಅಂಕಿಅಂಶಗಳ ನವೀಕರಣದಲ್ಲಿ ನಿಧಾನಗತಿಯನ್ನು ಆರೋಪಿಸಿದ ಕಾಂಗ್ರೆಸ್ ಜ್ಞಾಪಕ ಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದ ನಂತರ ಈ ಆರೋಪ ಮಾಡಿದೆ.

ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಂದು ಸಂಸ್ಥೆಯನ್ನು ಕಳಂಕಗೊಳಿಸಲು ಕಾಂಗ್ರೆಸ್ ಬಯಸುತ್ತಿದೆ ಎಂದು ಗೇಲಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಫಲಿತಾಂಶ:

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 49 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 29 ಸ್ಥಾನಗಳೊಂದಿಗೆ ಎರಡನೇ ಸ್ಥಾನ ಗಳಿಸಿದೆ. 49 ಸ್ಥಾನಗಳ ಪೈಕಿ ಆರು ಕಾಂಗ್ರೆಸ್ ಪಾಳಯದಲ್ಲಿದ್ದರೆ, ಎನ್‌ಸಿ 42 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ಫಲಿತಾಂಶಗಳು “ಸಂವಿಧಾನದ ವಿಜಯ” ಎಂದು ರಾಹುಲ್ ಗಾಂಧಿ ಹೇಳಿದರು. “ಜಮ್ಮು ಮತ್ತು ಕಾಶ್ಮೀರದ ಜನರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ರಾಜ್ಯದಲ್ಲಿ ಇಂಡಿಯಾ ಕೂಟ ವಿಜಯವು ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಸ್ವಾಭಿಮಾನದ ಗೆಲುವು” ಎಂದು ಹೇಳಿದರು.

ಒಟ್ಟಾರೆ ಪಕ್ಷದ ನಿರಾಶಾದಾಯಕ ಪ್ರದರ್ಶನವು ಈಗಾಗಲೇ ವಿರೋಧ ಪಕ್ಷಗಳ ಕಾಂಗ್ರೆಸ್ ನಾಯಕತ್ವದ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಮಿತ್ರಪಕ್ಷಗಳು ಈಗ ಮುಂಬರುವ ಚುನಾವಣೆಯ ಬಿಸಿಯನ್ನು ತಿರುಗಿಸುತ್ತಿವೆ. ಇದು ಸೀಟು ಹಂಚಿಕೆ ಮತ್ತು ಕಾಂಗ್ರೆಸ್ ಚುನಾವಣಾ ತಂತ್ರದ ಮೇಲೆ ಪರಿಣಾಮ ಬೀರಬಹುದು.

ಉದ್ಧವ್ ಠಾಕ್ರೆ ಅವರ ಶಿವಸೇನಾ ಬಣವು ಹರಿಯಾಣದಲ್ಲಿ ಆಪ್‌ನಂತಹ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದಕ್ಕಾಗಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಸೀಟು ಹಂಚಿಕೆಯ ಮಾತುಕತೆಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ; ದುರಹಂಕಾರ ವಿಪತ್ತಿಗೆ ಕಾರಣ: ಕಾಂಗ್ರೆಸ್‌ ಸೋಲಿಗೆ ಟಿಎಂಸಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...