Homeಮುಖಪುಟಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ: ರಾಹುಲ್ ಗಾಂಧಿ

ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ: ರಾಹುಲ್ ಗಾಂಧಿ

- Advertisement -
- Advertisement -

“ಹರಿಯಾಣ ಚುನಾವಣಾ ಫಲಿತಾಂಶವನ್ನು ಕಾಂಗ್ರೆಸ್ ವಿಶ್ಲೇಷಿಸುತ್ತಿದೆ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಂದಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ತಮ್ಮ ಪಕ್ಷದ ಆಘಾತಕಾರಿ ಸೋಲಿನ ನಂತರ ಮೊದಲ ಹೇಳಿಕೆ ನೀಡಿದ್ದಾರೆ.

“ನಾವು ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳನ್ನು ವಿಶ್ಲೇಷಿಸುತ್ತಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುವ ದೂರುಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ತಿಳಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಹರಿಯಾಣದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ, “ಜನರ ಹಕ್ಕುಗಳು ಮತ್ತು ಸಾಮಾಜಿಕ ಮತ್ತು ಆರ್ಥಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಹೋರಾಟವನ್ನು ಮುಂದುವರೆಸುತ್ತದೆ” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಫಲಿತಾಂಶವನ್ನು ಉಲ್ಲೇಖಿಸಿ, “ಇದು ಪ್ರಜಾಪ್ರಭುತ್ವದ ಸ್ವಾಭಿಮಾನದ ವಿಜಯ” ಎಂದರು.

ಹರಿಯಾಣದಲ್ಲಿ ಕಾಂಗ್ರೆಸ್ 37 ಸ್ಥಾನ ಪಡೆಯುವ ಮೂಲಕ ಅಂತಿಮವಾಗಿ ಸೋಲೊಪ್ಪುಕೊಂಡಿತು. ಬಹುಮತದ 46ಕ್ಕೆ ಒಂಬತ್ತು ಸ್ಥಾನಗಳ ಕೊರತೆಯಿದೆ. ಬಿಜೆಪಿ 48 ಸ್ಥಾನಗಳನ್ನು ಗಳಿಸಿದರೆ ಐಎನ್‌ಡಿಎಲ್ ಎರಡು ಸ್ಥಾನಗಳನ್ನು ಗೆದ್ದಿತು.

ಕಾಂಗ್ರೆಸ್ ಪಕ್ಷವು ನಿನ್ನೆಯ ಎಣಿಕೆ ಪ್ರಕ್ರಿಯೆಯ ಮೇಲೆ ಗಂಭೀರವಾದ ಅನುಮಾನಗಳನ್ನು ಎತ್ತಿದೆ. ಫಲಿತಾಂಶಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ. ಫಲಿತಾಂಶಗಳು ವಾಸ್ತವಕ್ಕೆ ವಿರುದ್ಧವಾಗಿವೆ ಮತ್ತು ಕನಿಷ್ಠ ಮೂರು ಜಿಲ್ಲೆಗಳಲ್ಲಿ ಮತ ಯಂತ್ರಗಳ ಎಣಿಕೆ ಮತ್ತು ಕಾರ್ಯನಿರ್ವಹಣೆಯ ಪ್ರಕ್ರಿಯೆಯಲ್ಲಿ ಪಕ್ಷವು “ಅತ್ಯಂತ ಗಂಭೀರ ದೂರುಗಳನ್ನು” ಸ್ವೀಕರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಹರಿಯಾಣದಲ್ಲಿ ಎಣಿಕೆ ಅಂಕಿಅಂಶಗಳ ನವೀಕರಣದಲ್ಲಿ ನಿಧಾನಗತಿಯನ್ನು ಆರೋಪಿಸಿದ ಕಾಂಗ್ರೆಸ್ ಜ್ಞಾಪಕ ಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದ ನಂತರ ಈ ಆರೋಪ ಮಾಡಿದೆ.

ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಂದು ಸಂಸ್ಥೆಯನ್ನು ಕಳಂಕಗೊಳಿಸಲು ಕಾಂಗ್ರೆಸ್ ಬಯಸುತ್ತಿದೆ ಎಂದು ಗೇಲಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಫಲಿತಾಂಶ:

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 49 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 29 ಸ್ಥಾನಗಳೊಂದಿಗೆ ಎರಡನೇ ಸ್ಥಾನ ಗಳಿಸಿದೆ. 49 ಸ್ಥಾನಗಳ ಪೈಕಿ ಆರು ಕಾಂಗ್ರೆಸ್ ಪಾಳಯದಲ್ಲಿದ್ದರೆ, ಎನ್‌ಸಿ 42 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ಫಲಿತಾಂಶಗಳು “ಸಂವಿಧಾನದ ವಿಜಯ” ಎಂದು ರಾಹುಲ್ ಗಾಂಧಿ ಹೇಳಿದರು. “ಜಮ್ಮು ಮತ್ತು ಕಾಶ್ಮೀರದ ಜನರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ರಾಜ್ಯದಲ್ಲಿ ಇಂಡಿಯಾ ಕೂಟ ವಿಜಯವು ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಸ್ವಾಭಿಮಾನದ ಗೆಲುವು” ಎಂದು ಹೇಳಿದರು.

ಒಟ್ಟಾರೆ ಪಕ್ಷದ ನಿರಾಶಾದಾಯಕ ಪ್ರದರ್ಶನವು ಈಗಾಗಲೇ ವಿರೋಧ ಪಕ್ಷಗಳ ಕಾಂಗ್ರೆಸ್ ನಾಯಕತ್ವದ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಮಿತ್ರಪಕ್ಷಗಳು ಈಗ ಮುಂಬರುವ ಚುನಾವಣೆಯ ಬಿಸಿಯನ್ನು ತಿರುಗಿಸುತ್ತಿವೆ. ಇದು ಸೀಟು ಹಂಚಿಕೆ ಮತ್ತು ಕಾಂಗ್ರೆಸ್ ಚುನಾವಣಾ ತಂತ್ರದ ಮೇಲೆ ಪರಿಣಾಮ ಬೀರಬಹುದು.

ಉದ್ಧವ್ ಠಾಕ್ರೆ ಅವರ ಶಿವಸೇನಾ ಬಣವು ಹರಿಯಾಣದಲ್ಲಿ ಆಪ್‌ನಂತಹ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದಿದ್ದಕ್ಕಾಗಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಸೀಟು ಹಂಚಿಕೆಯ ಮಾತುಕತೆಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ; ದುರಹಂಕಾರ ವಿಪತ್ತಿಗೆ ಕಾರಣ: ಕಾಂಗ್ರೆಸ್‌ ಸೋಲಿಗೆ ಟಿಎಂಸಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...