Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...