Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....