Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...