Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...