Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...