Homeಅಂತರಾಷ್ಟ್ರೀಯಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಬಾಬರಿ ಮಸೀದಿ ಧ್ವಂಸ ಕುರಿತ ಆನಂದ್‌ ಅವರ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರವನ್ನು ಅನುಮತಿ ನಿರಾಕರಣೆ ನಡುವೆಯೂ ವಿದ್ಯಾರ್ಥಿಗಳು ಜೆಎನ್‌ಯುವಿನಲ್ಲಿ ಪ್ರದರ್ಶಿಸಿದ್ದರು

- Advertisement -
- Advertisement -

ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರು ಕೆನಡಾದ ಟೊರೊಂಟೊದ ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾರ್ಯವೈಖರಿಗಾಗಿ ಅವರು ಈ ಗೌರವಕ್ಕೆ ಬಾಜನರಾಗಿದ್ದರೆ. ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಹುಸಂಖ್ಯಾತವಾದದ ಕುರಿತ ಅವರ ಕೆಲವು ಚಲನಚಿತ್ರಗಳನ್ನು ಪ್ರದರ್ಶಿಸಲಾತ್ತದೆ.

ಏಪ್ರಿಲ್ 28 ರಂದು ಪ್ರಾರಂಭವಾಗಲಿರುವ ಹಾಟ್ ಡಾಕ್ಸ್ ಫೆಸ್ಟಿವಲ್, ಉತ್ತರ ಅಮೆರಿಕಾದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವವಾಗಿದೆ. ಅಲ್ಲದೆ ಈ ಕಾರ್ಯಕ್ರಮವು ಆಸ್ಕರ್‌ಗಾಗಿ ಸಾಕ್ಷ್ಯಚಿತ್ರಗಳ ಅರ್ಹತಾ ಕಾರ್ಯಕ್ರಮವು ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

72 ವರ್ಷ ವಯಸ್ಸಿನ ಚಲನಚಿತ್ರ ನಿರ್ಮಾಪಕರಾದ ಆನಂದ್‌ ಅವರು ತಮ್ಮ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರಗಳಾದ, ಸ್ಲಂ ನಿವಾಸಿಗಳ ಕುರಿತ ‘ಬಾಂಬೆ: ಅವರ್ ಸಿಟಿ’ (1985), ಪಂಜಾಬ್ ಬಂಡಾಯದ ಕುರಿತ ‘ಇನ್ ಮೆಮೊರಿ ಆಫ್ ಫ್ರೆಂಡ್ಸ್’ (1990), ಬಾಬರಿ ಮಸೀದಿ ಧ್ವಂಸದ ಕುರಿತ ‘ಇನ್ ದ ನೇಮ್ ಆಫ್ ಗಾಡ್’ (1992), ಹಿಂದುತ್ವದ ಕುರಿತ ಫಾದರ್‌‌, ‘ಸನ್‌ ಆಂಡ್‌ ಹೋಲಿ ವಾರ್‌’ (1995), ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ 1998 ರ ಪರಮಾಣು ಪರೀಕ್ಷೆಗಳ ಕುರಿತ, ‘ವಾರ್‌ ಆಂಡ್‌ ಪೀಸ್‌’ (2002) ಮೇಲೆ ಮತ್ತು 1997 ರ ಮುಂಬೈನಲ್ಲಿ ದಲಿತರ ಮೇಲೆ ನಡೆದ ಪೋಲಿಸ್ ಗುಂಡಿನ ದಾಳಿಯ ಕುರಿತ ‘ಜೈ ಭೀಮ್ ಕಾಮ್ರೇಡ್’ (2011) ಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ಆನಂದ್‌ ಅವರ ‘ಫಾದರ್, ಸನ್ ಅಂಡ್ ಹೋಲಿ ವಾರ್’ ಮತ್ತು ‘ವಾರ್ ಅಂಡ್ ಪೀಸ್’ ಜೊತೆಗೆ, ಕೆನಡಾದ ರೈತರ ಕುರಿತ ಅವರ 1981 ರ ಸಾಕ್ಷ್ಯಚಿತ್ರವಾದ ‘ಎ ಟೈಮ್ ಟು ರೈಸ್’ ಮತ್ತು ಭಾರತದಲ್ಲಿನ ಸಂಖ್ಯಾತವಾದದ ಇತಿಹಾಸದ ಕುರಿತ ಅವರ ಇತ್ತೀಚಿನ ಚಲನಚಿತ್ರ ‘ರೀಸನ್’ (2018) ಅನ್ನು ಕೂಡಾ ಪ್ರದರ್ಶಿಸಲಾಗುತ್ತದೆ.

“ಇಂತಹ ಪ್ರಶಸ್ತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೂ ವೀಕ್ಷಕರನ್ನು ಹೆಚ್ಚಿಸುತ್ತದೆ. ಆದರೆ ಜನರು ಏನು ನೋಡಬೇಕು ಮತ್ತು ಏನು ನೋಡಬಾರದು ಎಂಬುದನ್ನು ನಿಯಂತ್ರಿಸಲು ಬೇಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಆಡಳಿತದ ಅಡಿಯಲ್ಲಿ ನಾವು ವಾಸಿಸುತ್ತೇವೆ” ಎಂದು ಆನಂದ್‌ ಅವರು ದಿ ಟೆಲಿಗ್ರಾಫ್‌ಗೆ ಹೇಳಿದ್ದಾರೆ.

ಆನಂದ್‌ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಬಿಜೆಪಿ ಪ್ರೇರಿತ ಸಂಘ ಪರಿವಾರದ ಗುಂಪುಗಳು ಆಗಾಗ್ಗೆ ಅಡ್ಡಿಪಡಿಸುತ್ತಿವೆ. ದೂರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ಅರ್ಹತೆ ಇದ್ದು ಕೂಡಾ ಅದರ ಪ್ರದರ್ಶನಕ್ಕೆ ಅವರು ಹಲವಾರು ಬಾರಿ ನ್ಯಾಯಾಲಯಕ್ಕೆ ಹೋಗಬೇಕಾಯಿತು.

“ಒಂದೆಡೆ ಈ ದೇಶದ ಪ್ರಧಾನಿ ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರದ ಮಾರಾಟದ ಏಜೆಂಟ್‌ನಂತೆ ವರ್ತಿಸುತ್ತಾರೆ. ಆಡಳಿತವು ಈ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗುವುದನ್ನು ಖಚಿತಪಡಿಸುತ್ತದೆ. ಮತ್ತೊಂದೆಡೆ, ‘ಯೂನಿವರ್ಸಲ್'(ಎಲ್ಲರೂ ನೋಡಬಹುದಾದಂತಹ) ವೀಕ್ಷಣೆಗೆ ಅವಕಾಶ ನೀಡುವ ಸೆನ್ಸಾರ್ ಪ್ರಮಾಣ ಪತ್ರಗಳನ್ನು ಗೆದ್ದ ನನ್ನ ಹಳೆಯ ಚಲನಚಿತ್ರಗಳ ಪ್ರದರ್ಶನಗಳ ಮೇಲೆ ಗೂಂಡಾಗಳು ದೈಹಿಕವಾಗಿ ದಾಳಿ ಮಾಡುತ್ತಾರೆ. ಈ ಸಂದರ್ಭಗಳಲ್ಲಿ, ಹಾಟ್ ಡಾಕ್ಸ್ ಪ್ರಶಸ್ತಿಯು ಪ್ರಪಂಚದಾದ್ಯಂತ ಮೌನವಾಗಿ ಬೆದರಿಸಲು ನಿರಾಕರಿಸುವ ಚಲನಚಿತ್ರಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವ ಜನರಿದ್ದಾರೆ ಎಂಬುದಕ್ಕೆ ದೃಢೀಕರಣವಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

2019 ರ ಕೇರಳದ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದಲ್ಲಿ ಆನಂದ್‌ ಅವರ ‘ರೀಸನ್‌’ ಪ್ರದರ್ಶನವನ್ನು ಒಕ್ಕೂಟ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಚಲನಚಿತ್ರೋತ್ಸವವು ಆಸ್ಕರ್‌ಗೆ ಅರ್ಹತೆ ಪಡೆಯುವ ಏಕೈಕ ಭಾರತೀಯ ಫಿಲ್ಮ್‌ ಫೆಸ್ಟಿವಲ್ ಆಗಿದೆ.

ಪಿಲ್ಮ್‌ ಫೆಸ್ಟಿವಲ್‌ನ ಆಯೋಜಕರಾಗಿದ್ದ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಮತ್ತು ಆನಂದ್ ಅವರು ಕೇರಳ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿ, ಚಲನ ಚಿತ್ರವನ್ನು ಪ್ರದರ್ಶಿಸುವ ಹಕ್ಕನ್ನು ಗೆದ್ದಿದ್ದರು. ಇದರ ನಂತರ ಈ ಚಿತ್ರವು ಲಾಂಗ್ ಡಾಕ್ಯುಮೆಂಟರಿ ವಿಭಾಗದಲ್ಲಿ ರನ್ನರ್ ಅಪ್ ಆಗಿತ್ತು.

2020 ರ ಮುಂಬೈ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗೆ ಇದನ್ನು ಆಯ್ಕೆ ಮಾಡಲಾಗಿರಲಿಲ್ಲ. ಒಕ್ಕೂಟ ಸರ್ಕಾರವು ಈ ಚಿತ್ರಕ್ಕೆ “ಹಿಂಬಾಗಿಲಿನ ಮೂಲಕ ಸೆನ್ಸಾರ್‌ ಶಿಪ್‌” ಮಾಡುತ್ತಿದೆ ಎಂದು ಆನಂದ್‌ ಆರೋಪಿಸಿದ್ದರು.

2019 ರಲ್ಲಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನಿರಾಕರಣೆ ಮತ್ತು ಮಧ್ಯದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಹಿಂದಿಯಲ್ಲಿ ‘ರಾಮ್ ಕೆ ನಾಮ್’ ಎಂದು ಕರೆಯಲ್ಪಡುವ ‘ಇನ್ ದಿ ನೇಮ್ ಆಫ್ ಗಾಡ್’ ಅನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಇಷ್ಟೆ ಅಲ್ಲದೆ, ಅನುಮತಿ ನಿರಾಕರಣೆ ನಡುವೆಯೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ವರ್ಷ ಈ ಚಿತ್ರವನ್ನು ಪ್ರದರ್ಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...