Homeಅಂತರಾಷ್ಟ್ರೀಯಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಬಾಬರಿ ಮಸೀದಿ ಧ್ವಂಸ ಕುರಿತ ಆನಂದ್‌ ಅವರ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರವನ್ನು ಅನುಮತಿ ನಿರಾಕರಣೆ ನಡುವೆಯೂ ವಿದ್ಯಾರ್ಥಿಗಳು ಜೆಎನ್‌ಯುವಿನಲ್ಲಿ ಪ್ರದರ್ಶಿಸಿದ್ದರು

- Advertisement -
- Advertisement -

ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರು ಕೆನಡಾದ ಟೊರೊಂಟೊದ ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾರ್ಯವೈಖರಿಗಾಗಿ ಅವರು ಈ ಗೌರವಕ್ಕೆ ಬಾಜನರಾಗಿದ್ದರೆ. ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಹುಸಂಖ್ಯಾತವಾದದ ಕುರಿತ ಅವರ ಕೆಲವು ಚಲನಚಿತ್ರಗಳನ್ನು ಪ್ರದರ್ಶಿಸಲಾತ್ತದೆ.

ಏಪ್ರಿಲ್ 28 ರಂದು ಪ್ರಾರಂಭವಾಗಲಿರುವ ಹಾಟ್ ಡಾಕ್ಸ್ ಫೆಸ್ಟಿವಲ್, ಉತ್ತರ ಅಮೆರಿಕಾದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವವಾಗಿದೆ. ಅಲ್ಲದೆ ಈ ಕಾರ್ಯಕ್ರಮವು ಆಸ್ಕರ್‌ಗಾಗಿ ಸಾಕ್ಷ್ಯಚಿತ್ರಗಳ ಅರ್ಹತಾ ಕಾರ್ಯಕ್ರಮವು ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

72 ವರ್ಷ ವಯಸ್ಸಿನ ಚಲನಚಿತ್ರ ನಿರ್ಮಾಪಕರಾದ ಆನಂದ್‌ ಅವರು ತಮ್ಮ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರಗಳಾದ, ಸ್ಲಂ ನಿವಾಸಿಗಳ ಕುರಿತ ‘ಬಾಂಬೆ: ಅವರ್ ಸಿಟಿ’ (1985), ಪಂಜಾಬ್ ಬಂಡಾಯದ ಕುರಿತ ‘ಇನ್ ಮೆಮೊರಿ ಆಫ್ ಫ್ರೆಂಡ್ಸ್’ (1990), ಬಾಬರಿ ಮಸೀದಿ ಧ್ವಂಸದ ಕುರಿತ ‘ಇನ್ ದ ನೇಮ್ ಆಫ್ ಗಾಡ್’ (1992), ಹಿಂದುತ್ವದ ಕುರಿತ ಫಾದರ್‌‌, ‘ಸನ್‌ ಆಂಡ್‌ ಹೋಲಿ ವಾರ್‌’ (1995), ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ 1998 ರ ಪರಮಾಣು ಪರೀಕ್ಷೆಗಳ ಕುರಿತ, ‘ವಾರ್‌ ಆಂಡ್‌ ಪೀಸ್‌’ (2002) ಮೇಲೆ ಮತ್ತು 1997 ರ ಮುಂಬೈನಲ್ಲಿ ದಲಿತರ ಮೇಲೆ ನಡೆದ ಪೋಲಿಸ್ ಗುಂಡಿನ ದಾಳಿಯ ಕುರಿತ ‘ಜೈ ಭೀಮ್ ಕಾಮ್ರೇಡ್’ (2011) ಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ಆನಂದ್‌ ಅವರ ‘ಫಾದರ್, ಸನ್ ಅಂಡ್ ಹೋಲಿ ವಾರ್’ ಮತ್ತು ‘ವಾರ್ ಅಂಡ್ ಪೀಸ್’ ಜೊತೆಗೆ, ಕೆನಡಾದ ರೈತರ ಕುರಿತ ಅವರ 1981 ರ ಸಾಕ್ಷ್ಯಚಿತ್ರವಾದ ‘ಎ ಟೈಮ್ ಟು ರೈಸ್’ ಮತ್ತು ಭಾರತದಲ್ಲಿನ ಸಂಖ್ಯಾತವಾದದ ಇತಿಹಾಸದ ಕುರಿತ ಅವರ ಇತ್ತೀಚಿನ ಚಲನಚಿತ್ರ ‘ರೀಸನ್’ (2018) ಅನ್ನು ಕೂಡಾ ಪ್ರದರ್ಶಿಸಲಾಗುತ್ತದೆ.

“ಇಂತಹ ಪ್ರಶಸ್ತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೂ ವೀಕ್ಷಕರನ್ನು ಹೆಚ್ಚಿಸುತ್ತದೆ. ಆದರೆ ಜನರು ಏನು ನೋಡಬೇಕು ಮತ್ತು ಏನು ನೋಡಬಾರದು ಎಂಬುದನ್ನು ನಿಯಂತ್ರಿಸಲು ಬೇಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಆಡಳಿತದ ಅಡಿಯಲ್ಲಿ ನಾವು ವಾಸಿಸುತ್ತೇವೆ” ಎಂದು ಆನಂದ್‌ ಅವರು ದಿ ಟೆಲಿಗ್ರಾಫ್‌ಗೆ ಹೇಳಿದ್ದಾರೆ.

ಆನಂದ್‌ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಬಿಜೆಪಿ ಪ್ರೇರಿತ ಸಂಘ ಪರಿವಾರದ ಗುಂಪುಗಳು ಆಗಾಗ್ಗೆ ಅಡ್ಡಿಪಡಿಸುತ್ತಿವೆ. ದೂರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ಅರ್ಹತೆ ಇದ್ದು ಕೂಡಾ ಅದರ ಪ್ರದರ್ಶನಕ್ಕೆ ಅವರು ಹಲವಾರು ಬಾರಿ ನ್ಯಾಯಾಲಯಕ್ಕೆ ಹೋಗಬೇಕಾಯಿತು.

“ಒಂದೆಡೆ ಈ ದೇಶದ ಪ್ರಧಾನಿ ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರದ ಮಾರಾಟದ ಏಜೆಂಟ್‌ನಂತೆ ವರ್ತಿಸುತ್ತಾರೆ. ಆಡಳಿತವು ಈ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗುವುದನ್ನು ಖಚಿತಪಡಿಸುತ್ತದೆ. ಮತ್ತೊಂದೆಡೆ, ‘ಯೂನಿವರ್ಸಲ್'(ಎಲ್ಲರೂ ನೋಡಬಹುದಾದಂತಹ) ವೀಕ್ಷಣೆಗೆ ಅವಕಾಶ ನೀಡುವ ಸೆನ್ಸಾರ್ ಪ್ರಮಾಣ ಪತ್ರಗಳನ್ನು ಗೆದ್ದ ನನ್ನ ಹಳೆಯ ಚಲನಚಿತ್ರಗಳ ಪ್ರದರ್ಶನಗಳ ಮೇಲೆ ಗೂಂಡಾಗಳು ದೈಹಿಕವಾಗಿ ದಾಳಿ ಮಾಡುತ್ತಾರೆ. ಈ ಸಂದರ್ಭಗಳಲ್ಲಿ, ಹಾಟ್ ಡಾಕ್ಸ್ ಪ್ರಶಸ್ತಿಯು ಪ್ರಪಂಚದಾದ್ಯಂತ ಮೌನವಾಗಿ ಬೆದರಿಸಲು ನಿರಾಕರಿಸುವ ಚಲನಚಿತ್ರಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವ ಜನರಿದ್ದಾರೆ ಎಂಬುದಕ್ಕೆ ದೃಢೀಕರಣವಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

2019 ರ ಕೇರಳದ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದಲ್ಲಿ ಆನಂದ್‌ ಅವರ ‘ರೀಸನ್‌’ ಪ್ರದರ್ಶನವನ್ನು ಒಕ್ಕೂಟ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಚಲನಚಿತ್ರೋತ್ಸವವು ಆಸ್ಕರ್‌ಗೆ ಅರ್ಹತೆ ಪಡೆಯುವ ಏಕೈಕ ಭಾರತೀಯ ಫಿಲ್ಮ್‌ ಫೆಸ್ಟಿವಲ್ ಆಗಿದೆ.

ಪಿಲ್ಮ್‌ ಫೆಸ್ಟಿವಲ್‌ನ ಆಯೋಜಕರಾಗಿದ್ದ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಮತ್ತು ಆನಂದ್ ಅವರು ಕೇರಳ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿ, ಚಲನ ಚಿತ್ರವನ್ನು ಪ್ರದರ್ಶಿಸುವ ಹಕ್ಕನ್ನು ಗೆದ್ದಿದ್ದರು. ಇದರ ನಂತರ ಈ ಚಿತ್ರವು ಲಾಂಗ್ ಡಾಕ್ಯುಮೆಂಟರಿ ವಿಭಾಗದಲ್ಲಿ ರನ್ನರ್ ಅಪ್ ಆಗಿತ್ತು.

2020 ರ ಮುಂಬೈ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗೆ ಇದನ್ನು ಆಯ್ಕೆ ಮಾಡಲಾಗಿರಲಿಲ್ಲ. ಒಕ್ಕೂಟ ಸರ್ಕಾರವು ಈ ಚಿತ್ರಕ್ಕೆ “ಹಿಂಬಾಗಿಲಿನ ಮೂಲಕ ಸೆನ್ಸಾರ್‌ ಶಿಪ್‌” ಮಾಡುತ್ತಿದೆ ಎಂದು ಆನಂದ್‌ ಆರೋಪಿಸಿದ್ದರು.

2019 ರಲ್ಲಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನಿರಾಕರಣೆ ಮತ್ತು ಮಧ್ಯದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಹಿಂದಿಯಲ್ಲಿ ‘ರಾಮ್ ಕೆ ನಾಮ್’ ಎಂದು ಕರೆಯಲ್ಪಡುವ ‘ಇನ್ ದಿ ನೇಮ್ ಆಫ್ ಗಾಡ್’ ಅನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಇಷ್ಟೆ ಅಲ್ಲದೆ, ಅನುಮತಿ ನಿರಾಕರಣೆ ನಡುವೆಯೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ವರ್ಷ ಈ ಚಿತ್ರವನ್ನು ಪ್ರದರ್ಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....