Homeಅಂತರಾಷ್ಟ್ರೀಯಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಬಾಬರಿ ಮಸೀದಿ ಧ್ವಂಸ ಕುರಿತ ಆನಂದ್‌ ಅವರ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರವನ್ನು ಅನುಮತಿ ನಿರಾಕರಣೆ ನಡುವೆಯೂ ವಿದ್ಯಾರ್ಥಿಗಳು ಜೆಎನ್‌ಯುವಿನಲ್ಲಿ ಪ್ರದರ್ಶಿಸಿದ್ದರು

- Advertisement -
- Advertisement -

ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರು ಕೆನಡಾದ ಟೊರೊಂಟೊದ ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾರ್ಯವೈಖರಿಗಾಗಿ ಅವರು ಈ ಗೌರವಕ್ಕೆ ಬಾಜನರಾಗಿದ್ದರೆ. ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಹುಸಂಖ್ಯಾತವಾದದ ಕುರಿತ ಅವರ ಕೆಲವು ಚಲನಚಿತ್ರಗಳನ್ನು ಪ್ರದರ್ಶಿಸಲಾತ್ತದೆ.

ಏಪ್ರಿಲ್ 28 ರಂದು ಪ್ರಾರಂಭವಾಗಲಿರುವ ಹಾಟ್ ಡಾಕ್ಸ್ ಫೆಸ್ಟಿವಲ್, ಉತ್ತರ ಅಮೆರಿಕಾದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವವಾಗಿದೆ. ಅಲ್ಲದೆ ಈ ಕಾರ್ಯಕ್ರಮವು ಆಸ್ಕರ್‌ಗಾಗಿ ಸಾಕ್ಷ್ಯಚಿತ್ರಗಳ ಅರ್ಹತಾ ಕಾರ್ಯಕ್ರಮವು ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

72 ವರ್ಷ ವಯಸ್ಸಿನ ಚಲನಚಿತ್ರ ನಿರ್ಮಾಪಕರಾದ ಆನಂದ್‌ ಅವರು ತಮ್ಮ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರಗಳಾದ, ಸ್ಲಂ ನಿವಾಸಿಗಳ ಕುರಿತ ‘ಬಾಂಬೆ: ಅವರ್ ಸಿಟಿ’ (1985), ಪಂಜಾಬ್ ಬಂಡಾಯದ ಕುರಿತ ‘ಇನ್ ಮೆಮೊರಿ ಆಫ್ ಫ್ರೆಂಡ್ಸ್’ (1990), ಬಾಬರಿ ಮಸೀದಿ ಧ್ವಂಸದ ಕುರಿತ ‘ಇನ್ ದ ನೇಮ್ ಆಫ್ ಗಾಡ್’ (1992), ಹಿಂದುತ್ವದ ಕುರಿತ ಫಾದರ್‌‌, ‘ಸನ್‌ ಆಂಡ್‌ ಹೋಲಿ ವಾರ್‌’ (1995), ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ 1998 ರ ಪರಮಾಣು ಪರೀಕ್ಷೆಗಳ ಕುರಿತ, ‘ವಾರ್‌ ಆಂಡ್‌ ಪೀಸ್‌’ (2002) ಮೇಲೆ ಮತ್ತು 1997 ರ ಮುಂಬೈನಲ್ಲಿ ದಲಿತರ ಮೇಲೆ ನಡೆದ ಪೋಲಿಸ್ ಗುಂಡಿನ ದಾಳಿಯ ಕುರಿತ ‘ಜೈ ಭೀಮ್ ಕಾಮ್ರೇಡ್’ (2011) ಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ಆನಂದ್‌ ಅವರ ‘ಫಾದರ್, ಸನ್ ಅಂಡ್ ಹೋಲಿ ವಾರ್’ ಮತ್ತು ‘ವಾರ್ ಅಂಡ್ ಪೀಸ್’ ಜೊತೆಗೆ, ಕೆನಡಾದ ರೈತರ ಕುರಿತ ಅವರ 1981 ರ ಸಾಕ್ಷ್ಯಚಿತ್ರವಾದ ‘ಎ ಟೈಮ್ ಟು ರೈಸ್’ ಮತ್ತು ಭಾರತದಲ್ಲಿನ ಸಂಖ್ಯಾತವಾದದ ಇತಿಹಾಸದ ಕುರಿತ ಅವರ ಇತ್ತೀಚಿನ ಚಲನಚಿತ್ರ ‘ರೀಸನ್’ (2018) ಅನ್ನು ಕೂಡಾ ಪ್ರದರ್ಶಿಸಲಾಗುತ್ತದೆ.

“ಇಂತಹ ಪ್ರಶಸ್ತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೂ ವೀಕ್ಷಕರನ್ನು ಹೆಚ್ಚಿಸುತ್ತದೆ. ಆದರೆ ಜನರು ಏನು ನೋಡಬೇಕು ಮತ್ತು ಏನು ನೋಡಬಾರದು ಎಂಬುದನ್ನು ನಿಯಂತ್ರಿಸಲು ಬೇಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಆಡಳಿತದ ಅಡಿಯಲ್ಲಿ ನಾವು ವಾಸಿಸುತ್ತೇವೆ” ಎಂದು ಆನಂದ್‌ ಅವರು ದಿ ಟೆಲಿಗ್ರಾಫ್‌ಗೆ ಹೇಳಿದ್ದಾರೆ.

ಆನಂದ್‌ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಬಿಜೆಪಿ ಪ್ರೇರಿತ ಸಂಘ ಪರಿವಾರದ ಗುಂಪುಗಳು ಆಗಾಗ್ಗೆ ಅಡ್ಡಿಪಡಿಸುತ್ತಿವೆ. ದೂರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ಅರ್ಹತೆ ಇದ್ದು ಕೂಡಾ ಅದರ ಪ್ರದರ್ಶನಕ್ಕೆ ಅವರು ಹಲವಾರು ಬಾರಿ ನ್ಯಾಯಾಲಯಕ್ಕೆ ಹೋಗಬೇಕಾಯಿತು.

“ಒಂದೆಡೆ ಈ ದೇಶದ ಪ್ರಧಾನಿ ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರದ ಮಾರಾಟದ ಏಜೆಂಟ್‌ನಂತೆ ವರ್ತಿಸುತ್ತಾರೆ. ಆಡಳಿತವು ಈ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗುವುದನ್ನು ಖಚಿತಪಡಿಸುತ್ತದೆ. ಮತ್ತೊಂದೆಡೆ, ‘ಯೂನಿವರ್ಸಲ್'(ಎಲ್ಲರೂ ನೋಡಬಹುದಾದಂತಹ) ವೀಕ್ಷಣೆಗೆ ಅವಕಾಶ ನೀಡುವ ಸೆನ್ಸಾರ್ ಪ್ರಮಾಣ ಪತ್ರಗಳನ್ನು ಗೆದ್ದ ನನ್ನ ಹಳೆಯ ಚಲನಚಿತ್ರಗಳ ಪ್ರದರ್ಶನಗಳ ಮೇಲೆ ಗೂಂಡಾಗಳು ದೈಹಿಕವಾಗಿ ದಾಳಿ ಮಾಡುತ್ತಾರೆ. ಈ ಸಂದರ್ಭಗಳಲ್ಲಿ, ಹಾಟ್ ಡಾಕ್ಸ್ ಪ್ರಶಸ್ತಿಯು ಪ್ರಪಂಚದಾದ್ಯಂತ ಮೌನವಾಗಿ ಬೆದರಿಸಲು ನಿರಾಕರಿಸುವ ಚಲನಚಿತ್ರಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವ ಜನರಿದ್ದಾರೆ ಎಂಬುದಕ್ಕೆ ದೃಢೀಕರಣವಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

2019 ರ ಕೇರಳದ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದಲ್ಲಿ ಆನಂದ್‌ ಅವರ ‘ರೀಸನ್‌’ ಪ್ರದರ್ಶನವನ್ನು ಒಕ್ಕೂಟ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಚಲನಚಿತ್ರೋತ್ಸವವು ಆಸ್ಕರ್‌ಗೆ ಅರ್ಹತೆ ಪಡೆಯುವ ಏಕೈಕ ಭಾರತೀಯ ಫಿಲ್ಮ್‌ ಫೆಸ್ಟಿವಲ್ ಆಗಿದೆ.

ಪಿಲ್ಮ್‌ ಫೆಸ್ಟಿವಲ್‌ನ ಆಯೋಜಕರಾಗಿದ್ದ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಮತ್ತು ಆನಂದ್ ಅವರು ಕೇರಳ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿ, ಚಲನ ಚಿತ್ರವನ್ನು ಪ್ರದರ್ಶಿಸುವ ಹಕ್ಕನ್ನು ಗೆದ್ದಿದ್ದರು. ಇದರ ನಂತರ ಈ ಚಿತ್ರವು ಲಾಂಗ್ ಡಾಕ್ಯುಮೆಂಟರಿ ವಿಭಾಗದಲ್ಲಿ ರನ್ನರ್ ಅಪ್ ಆಗಿತ್ತು.

2020 ರ ಮುಂಬೈ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗೆ ಇದನ್ನು ಆಯ್ಕೆ ಮಾಡಲಾಗಿರಲಿಲ್ಲ. ಒಕ್ಕೂಟ ಸರ್ಕಾರವು ಈ ಚಿತ್ರಕ್ಕೆ “ಹಿಂಬಾಗಿಲಿನ ಮೂಲಕ ಸೆನ್ಸಾರ್‌ ಶಿಪ್‌” ಮಾಡುತ್ತಿದೆ ಎಂದು ಆನಂದ್‌ ಆರೋಪಿಸಿದ್ದರು.

2019 ರಲ್ಲಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನಿರಾಕರಣೆ ಮತ್ತು ಮಧ್ಯದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಹಿಂದಿಯಲ್ಲಿ ‘ರಾಮ್ ಕೆ ನಾಮ್’ ಎಂದು ಕರೆಯಲ್ಪಡುವ ‘ಇನ್ ದಿ ನೇಮ್ ಆಫ್ ಗಾಡ್’ ಅನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಇಷ್ಟೆ ಅಲ್ಲದೆ, ಅನುಮತಿ ನಿರಾಕರಣೆ ನಡುವೆಯೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ವರ್ಷ ಈ ಚಿತ್ರವನ್ನು ಪ್ರದರ್ಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...