Homeಅಂತರಾಷ್ಟ್ರೀಯಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಬಾಬರಿ ಮಸೀದಿ ಧ್ವಂಸ ಕುರಿತ ಆನಂದ್‌ ಅವರ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರವನ್ನು ಅನುಮತಿ ನಿರಾಕರಣೆ ನಡುವೆಯೂ ವಿದ್ಯಾರ್ಥಿಗಳು ಜೆಎನ್‌ಯುವಿನಲ್ಲಿ ಪ್ರದರ್ಶಿಸಿದ್ದರು

- Advertisement -
- Advertisement -

ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರು ಕೆನಡಾದ ಟೊರೊಂಟೊದ ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾರ್ಯವೈಖರಿಗಾಗಿ ಅವರು ಈ ಗೌರವಕ್ಕೆ ಬಾಜನರಾಗಿದ್ದರೆ. ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಹುಸಂಖ್ಯಾತವಾದದ ಕುರಿತ ಅವರ ಕೆಲವು ಚಲನಚಿತ್ರಗಳನ್ನು ಪ್ರದರ್ಶಿಸಲಾತ್ತದೆ.

ಏಪ್ರಿಲ್ 28 ರಂದು ಪ್ರಾರಂಭವಾಗಲಿರುವ ಹಾಟ್ ಡಾಕ್ಸ್ ಫೆಸ್ಟಿವಲ್, ಉತ್ತರ ಅಮೆರಿಕಾದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವವಾಗಿದೆ. ಅಲ್ಲದೆ ಈ ಕಾರ್ಯಕ್ರಮವು ಆಸ್ಕರ್‌ಗಾಗಿ ಸಾಕ್ಷ್ಯಚಿತ್ರಗಳ ಅರ್ಹತಾ ಕಾರ್ಯಕ್ರಮವು ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

72 ವರ್ಷ ವಯಸ್ಸಿನ ಚಲನಚಿತ್ರ ನಿರ್ಮಾಪಕರಾದ ಆನಂದ್‌ ಅವರು ತಮ್ಮ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರಗಳಾದ, ಸ್ಲಂ ನಿವಾಸಿಗಳ ಕುರಿತ ‘ಬಾಂಬೆ: ಅವರ್ ಸಿಟಿ’ (1985), ಪಂಜಾಬ್ ಬಂಡಾಯದ ಕುರಿತ ‘ಇನ್ ಮೆಮೊರಿ ಆಫ್ ಫ್ರೆಂಡ್ಸ್’ (1990), ಬಾಬರಿ ಮಸೀದಿ ಧ್ವಂಸದ ಕುರಿತ ‘ಇನ್ ದ ನೇಮ್ ಆಫ್ ಗಾಡ್’ (1992), ಹಿಂದುತ್ವದ ಕುರಿತ ಫಾದರ್‌‌, ‘ಸನ್‌ ಆಂಡ್‌ ಹೋಲಿ ವಾರ್‌’ (1995), ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ 1998 ರ ಪರಮಾಣು ಪರೀಕ್ಷೆಗಳ ಕುರಿತ, ‘ವಾರ್‌ ಆಂಡ್‌ ಪೀಸ್‌’ (2002) ಮೇಲೆ ಮತ್ತು 1997 ರ ಮುಂಬೈನಲ್ಲಿ ದಲಿತರ ಮೇಲೆ ನಡೆದ ಪೋಲಿಸ್ ಗುಂಡಿನ ದಾಳಿಯ ಕುರಿತ ‘ಜೈ ಭೀಮ್ ಕಾಮ್ರೇಡ್’ (2011) ಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ಆನಂದ್‌ ಅವರ ‘ಫಾದರ್, ಸನ್ ಅಂಡ್ ಹೋಲಿ ವಾರ್’ ಮತ್ತು ‘ವಾರ್ ಅಂಡ್ ಪೀಸ್’ ಜೊತೆಗೆ, ಕೆನಡಾದ ರೈತರ ಕುರಿತ ಅವರ 1981 ರ ಸಾಕ್ಷ್ಯಚಿತ್ರವಾದ ‘ಎ ಟೈಮ್ ಟು ರೈಸ್’ ಮತ್ತು ಭಾರತದಲ್ಲಿನ ಸಂಖ್ಯಾತವಾದದ ಇತಿಹಾಸದ ಕುರಿತ ಅವರ ಇತ್ತೀಚಿನ ಚಲನಚಿತ್ರ ‘ರೀಸನ್’ (2018) ಅನ್ನು ಕೂಡಾ ಪ್ರದರ್ಶಿಸಲಾಗುತ್ತದೆ.

“ಇಂತಹ ಪ್ರಶಸ್ತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೂ ವೀಕ್ಷಕರನ್ನು ಹೆಚ್ಚಿಸುತ್ತದೆ. ಆದರೆ ಜನರು ಏನು ನೋಡಬೇಕು ಮತ್ತು ಏನು ನೋಡಬಾರದು ಎಂಬುದನ್ನು ನಿಯಂತ್ರಿಸಲು ಬೇಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಆಡಳಿತದ ಅಡಿಯಲ್ಲಿ ನಾವು ವಾಸಿಸುತ್ತೇವೆ” ಎಂದು ಆನಂದ್‌ ಅವರು ದಿ ಟೆಲಿಗ್ರಾಫ್‌ಗೆ ಹೇಳಿದ್ದಾರೆ.

ಆನಂದ್‌ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಬಿಜೆಪಿ ಪ್ರೇರಿತ ಸಂಘ ಪರಿವಾರದ ಗುಂಪುಗಳು ಆಗಾಗ್ಗೆ ಅಡ್ಡಿಪಡಿಸುತ್ತಿವೆ. ದೂರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ಅರ್ಹತೆ ಇದ್ದು ಕೂಡಾ ಅದರ ಪ್ರದರ್ಶನಕ್ಕೆ ಅವರು ಹಲವಾರು ಬಾರಿ ನ್ಯಾಯಾಲಯಕ್ಕೆ ಹೋಗಬೇಕಾಯಿತು.

“ಒಂದೆಡೆ ಈ ದೇಶದ ಪ್ರಧಾನಿ ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರದ ಮಾರಾಟದ ಏಜೆಂಟ್‌ನಂತೆ ವರ್ತಿಸುತ್ತಾರೆ. ಆಡಳಿತವು ಈ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗುವುದನ್ನು ಖಚಿತಪಡಿಸುತ್ತದೆ. ಮತ್ತೊಂದೆಡೆ, ‘ಯೂನಿವರ್ಸಲ್'(ಎಲ್ಲರೂ ನೋಡಬಹುದಾದಂತಹ) ವೀಕ್ಷಣೆಗೆ ಅವಕಾಶ ನೀಡುವ ಸೆನ್ಸಾರ್ ಪ್ರಮಾಣ ಪತ್ರಗಳನ್ನು ಗೆದ್ದ ನನ್ನ ಹಳೆಯ ಚಲನಚಿತ್ರಗಳ ಪ್ರದರ್ಶನಗಳ ಮೇಲೆ ಗೂಂಡಾಗಳು ದೈಹಿಕವಾಗಿ ದಾಳಿ ಮಾಡುತ್ತಾರೆ. ಈ ಸಂದರ್ಭಗಳಲ್ಲಿ, ಹಾಟ್ ಡಾಕ್ಸ್ ಪ್ರಶಸ್ತಿಯು ಪ್ರಪಂಚದಾದ್ಯಂತ ಮೌನವಾಗಿ ಬೆದರಿಸಲು ನಿರಾಕರಿಸುವ ಚಲನಚಿತ್ರಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವ ಜನರಿದ್ದಾರೆ ಎಂಬುದಕ್ಕೆ ದೃಢೀಕರಣವಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

2019 ರ ಕೇರಳದ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದಲ್ಲಿ ಆನಂದ್‌ ಅವರ ‘ರೀಸನ್‌’ ಪ್ರದರ್ಶನವನ್ನು ಒಕ್ಕೂಟ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಚಲನಚಿತ್ರೋತ್ಸವವು ಆಸ್ಕರ್‌ಗೆ ಅರ್ಹತೆ ಪಡೆಯುವ ಏಕೈಕ ಭಾರತೀಯ ಫಿಲ್ಮ್‌ ಫೆಸ್ಟಿವಲ್ ಆಗಿದೆ.

ಪಿಲ್ಮ್‌ ಫೆಸ್ಟಿವಲ್‌ನ ಆಯೋಜಕರಾಗಿದ್ದ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಮತ್ತು ಆನಂದ್ ಅವರು ಕೇರಳ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿ, ಚಲನ ಚಿತ್ರವನ್ನು ಪ್ರದರ್ಶಿಸುವ ಹಕ್ಕನ್ನು ಗೆದ್ದಿದ್ದರು. ಇದರ ನಂತರ ಈ ಚಿತ್ರವು ಲಾಂಗ್ ಡಾಕ್ಯುಮೆಂಟರಿ ವಿಭಾಗದಲ್ಲಿ ರನ್ನರ್ ಅಪ್ ಆಗಿತ್ತು.

2020 ರ ಮುಂಬೈ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗೆ ಇದನ್ನು ಆಯ್ಕೆ ಮಾಡಲಾಗಿರಲಿಲ್ಲ. ಒಕ್ಕೂಟ ಸರ್ಕಾರವು ಈ ಚಿತ್ರಕ್ಕೆ “ಹಿಂಬಾಗಿಲಿನ ಮೂಲಕ ಸೆನ್ಸಾರ್‌ ಶಿಪ್‌” ಮಾಡುತ್ತಿದೆ ಎಂದು ಆನಂದ್‌ ಆರೋಪಿಸಿದ್ದರು.

2019 ರಲ್ಲಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನಿರಾಕರಣೆ ಮತ್ತು ಮಧ್ಯದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಹಿಂದಿಯಲ್ಲಿ ‘ರಾಮ್ ಕೆ ನಾಮ್’ ಎಂದು ಕರೆಯಲ್ಪಡುವ ‘ಇನ್ ದಿ ನೇಮ್ ಆಫ್ ಗಾಡ್’ ಅನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಇಷ್ಟೆ ಅಲ್ಲದೆ, ಅನುಮತಿ ನಿರಾಕರಣೆ ನಡುವೆಯೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ವರ್ಷ ಈ ಚಿತ್ರವನ್ನು ಪ್ರದರ್ಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...