Homeಅಂತರಾಷ್ಟ್ರೀಯಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕ ಆನಂದ್‌ ಪಟವರ್ಧನ್‌ಗೆ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’

ಬಾಬರಿ ಮಸೀದಿ ಧ್ವಂಸ ಕುರಿತ ಆನಂದ್‌ ಅವರ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರವನ್ನು ಅನುಮತಿ ನಿರಾಕರಣೆ ನಡುವೆಯೂ ವಿದ್ಯಾರ್ಥಿಗಳು ಜೆಎನ್‌ಯುವಿನಲ್ಲಿ ಪ್ರದರ್ಶಿಸಿದ್ದರು

- Advertisement -
- Advertisement -

ಖ್ಯಾತ ಸಾಕ್ಷ್ಯಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರು ಕೆನಡಾದ ಟೊರೊಂಟೊದ ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ‘2022 ರ ಅತ್ಯುತ್ತಮ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಲಿದ್ದಾರೆ. ತಮ್ಮ ಕಾರ್ಯವೈಖರಿಗಾಗಿ ಅವರು ಈ ಗೌರವಕ್ಕೆ ಬಾಜನರಾಗಿದ್ದರೆ. ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಹುಸಂಖ್ಯಾತವಾದದ ಕುರಿತ ಅವರ ಕೆಲವು ಚಲನಚಿತ್ರಗಳನ್ನು ಪ್ರದರ್ಶಿಸಲಾತ್ತದೆ.

ಏಪ್ರಿಲ್ 28 ರಂದು ಪ್ರಾರಂಭವಾಗಲಿರುವ ಹಾಟ್ ಡಾಕ್ಸ್ ಫೆಸ್ಟಿವಲ್, ಉತ್ತರ ಅಮೆರಿಕಾದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವವಾಗಿದೆ. ಅಲ್ಲದೆ ಈ ಕಾರ್ಯಕ್ರಮವು ಆಸ್ಕರ್‌ಗಾಗಿ ಸಾಕ್ಷ್ಯಚಿತ್ರಗಳ ಅರ್ಹತಾ ಕಾರ್ಯಕ್ರಮವು ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

72 ವರ್ಷ ವಯಸ್ಸಿನ ಚಲನಚಿತ್ರ ನಿರ್ಮಾಪಕರಾದ ಆನಂದ್‌ ಅವರು ತಮ್ಮ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರಗಳಾದ, ಸ್ಲಂ ನಿವಾಸಿಗಳ ಕುರಿತ ‘ಬಾಂಬೆ: ಅವರ್ ಸಿಟಿ’ (1985), ಪಂಜಾಬ್ ಬಂಡಾಯದ ಕುರಿತ ‘ಇನ್ ಮೆಮೊರಿ ಆಫ್ ಫ್ರೆಂಡ್ಸ್’ (1990), ಬಾಬರಿ ಮಸೀದಿ ಧ್ವಂಸದ ಕುರಿತ ‘ಇನ್ ದ ನೇಮ್ ಆಫ್ ಗಾಡ್’ (1992), ಹಿಂದುತ್ವದ ಕುರಿತ ಫಾದರ್‌‌, ‘ಸನ್‌ ಆಂಡ್‌ ಹೋಲಿ ವಾರ್‌’ (1995), ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆದ 1998 ರ ಪರಮಾಣು ಪರೀಕ್ಷೆಗಳ ಕುರಿತ, ‘ವಾರ್‌ ಆಂಡ್‌ ಪೀಸ್‌’ (2002) ಮೇಲೆ ಮತ್ತು 1997 ರ ಮುಂಬೈನಲ್ಲಿ ದಲಿತರ ಮೇಲೆ ನಡೆದ ಪೋಲಿಸ್ ಗುಂಡಿನ ದಾಳಿಯ ಕುರಿತ ‘ಜೈ ಭೀಮ್ ಕಾಮ್ರೇಡ್’ (2011) ಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ಹಾಟ್ ಡಾಕ್ಸ್ ಫೆಸ್ಟಿವಲ್‌ನಲ್ಲಿ ಆನಂದ್‌ ಅವರ ‘ಫಾದರ್, ಸನ್ ಅಂಡ್ ಹೋಲಿ ವಾರ್’ ಮತ್ತು ‘ವಾರ್ ಅಂಡ್ ಪೀಸ್’ ಜೊತೆಗೆ, ಕೆನಡಾದ ರೈತರ ಕುರಿತ ಅವರ 1981 ರ ಸಾಕ್ಷ್ಯಚಿತ್ರವಾದ ‘ಎ ಟೈಮ್ ಟು ರೈಸ್’ ಮತ್ತು ಭಾರತದಲ್ಲಿನ ಸಂಖ್ಯಾತವಾದದ ಇತಿಹಾಸದ ಕುರಿತ ಅವರ ಇತ್ತೀಚಿನ ಚಲನಚಿತ್ರ ‘ರೀಸನ್’ (2018) ಅನ್ನು ಕೂಡಾ ಪ್ರದರ್ಶಿಸಲಾಗುತ್ತದೆ.

“ಇಂತಹ ಪ್ರಶಸ್ತಿಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲದೆ ಭಾರತದಲ್ಲಿಯೂ ವೀಕ್ಷಕರನ್ನು ಹೆಚ್ಚಿಸುತ್ತದೆ. ಆದರೆ ಜನರು ಏನು ನೋಡಬೇಕು ಮತ್ತು ಏನು ನೋಡಬಾರದು ಎಂಬುದನ್ನು ನಿಯಂತ್ರಿಸಲು ಬೇಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳುವ ಆಡಳಿತದ ಅಡಿಯಲ್ಲಿ ನಾವು ವಾಸಿಸುತ್ತೇವೆ” ಎಂದು ಆನಂದ್‌ ಅವರು ದಿ ಟೆಲಿಗ್ರಾಫ್‌ಗೆ ಹೇಳಿದ್ದಾರೆ.

ಆನಂದ್‌ ಅವರ ಚಲನಚಿತ್ರಗಳ ಪ್ರದರ್ಶನಕ್ಕೆ ಬಿಜೆಪಿ ಪ್ರೇರಿತ ಸಂಘ ಪರಿವಾರದ ಗುಂಪುಗಳು ಆಗಾಗ್ಗೆ ಅಡ್ಡಿಪಡಿಸುತ್ತಿವೆ. ದೂರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ಅರ್ಹತೆ ಇದ್ದು ಕೂಡಾ ಅದರ ಪ್ರದರ್ಶನಕ್ಕೆ ಅವರು ಹಲವಾರು ಬಾರಿ ನ್ಯಾಯಾಲಯಕ್ಕೆ ಹೋಗಬೇಕಾಯಿತು.

“ಒಂದೆಡೆ ಈ ದೇಶದ ಪ್ರಧಾನಿ ದಿ ಕಾಶ್ಮೀರ್ ಫೈಲ್ಸ್‌ನಂತಹ ಚಲನಚಿತ್ರದ ಮಾರಾಟದ ಏಜೆಂಟ್‌ನಂತೆ ವರ್ತಿಸುತ್ತಾರೆ. ಆಡಳಿತವು ಈ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗುವುದನ್ನು ಖಚಿತಪಡಿಸುತ್ತದೆ. ಮತ್ತೊಂದೆಡೆ, ‘ಯೂನಿವರ್ಸಲ್'(ಎಲ್ಲರೂ ನೋಡಬಹುದಾದಂತಹ) ವೀಕ್ಷಣೆಗೆ ಅವಕಾಶ ನೀಡುವ ಸೆನ್ಸಾರ್ ಪ್ರಮಾಣ ಪತ್ರಗಳನ್ನು ಗೆದ್ದ ನನ್ನ ಹಳೆಯ ಚಲನಚಿತ್ರಗಳ ಪ್ರದರ್ಶನಗಳ ಮೇಲೆ ಗೂಂಡಾಗಳು ದೈಹಿಕವಾಗಿ ದಾಳಿ ಮಾಡುತ್ತಾರೆ. ಈ ಸಂದರ್ಭಗಳಲ್ಲಿ, ಹಾಟ್ ಡಾಕ್ಸ್ ಪ್ರಶಸ್ತಿಯು ಪ್ರಪಂಚದಾದ್ಯಂತ ಮೌನವಾಗಿ ಬೆದರಿಸಲು ನಿರಾಕರಿಸುವ ಚಲನಚಿತ್ರಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವ ಜನರಿದ್ದಾರೆ ಎಂಬುದಕ್ಕೆ ದೃಢೀಕರಣವಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

2019 ರ ಕೇರಳದ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಮತ್ತು ಕಿರು ಚಲನಚಿತ್ರೋತ್ಸವದಲ್ಲಿ ಆನಂದ್‌ ಅವರ ‘ರೀಸನ್‌’ ಪ್ರದರ್ಶನವನ್ನು ಒಕ್ಕೂಟ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಚಲನಚಿತ್ರೋತ್ಸವವು ಆಸ್ಕರ್‌ಗೆ ಅರ್ಹತೆ ಪಡೆಯುವ ಏಕೈಕ ಭಾರತೀಯ ಫಿಲ್ಮ್‌ ಫೆಸ್ಟಿವಲ್ ಆಗಿದೆ.

ಪಿಲ್ಮ್‌ ಫೆಸ್ಟಿವಲ್‌ನ ಆಯೋಜಕರಾಗಿದ್ದ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಮತ್ತು ಆನಂದ್ ಅವರು ಕೇರಳ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಿ, ಚಲನ ಚಿತ್ರವನ್ನು ಪ್ರದರ್ಶಿಸುವ ಹಕ್ಕನ್ನು ಗೆದ್ದಿದ್ದರು. ಇದರ ನಂತರ ಈ ಚಿತ್ರವು ಲಾಂಗ್ ಡಾಕ್ಯುಮೆಂಟರಿ ವಿಭಾಗದಲ್ಲಿ ರನ್ನರ್ ಅಪ್ ಆಗಿತ್ತು.

2020 ರ ಮುಂಬೈ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗೆ ಇದನ್ನು ಆಯ್ಕೆ ಮಾಡಲಾಗಿರಲಿಲ್ಲ. ಒಕ್ಕೂಟ ಸರ್ಕಾರವು ಈ ಚಿತ್ರಕ್ಕೆ “ಹಿಂಬಾಗಿಲಿನ ಮೂಲಕ ಸೆನ್ಸಾರ್‌ ಶಿಪ್‌” ಮಾಡುತ್ತಿದೆ ಎಂದು ಆನಂದ್‌ ಆರೋಪಿಸಿದ್ದರು.

2019 ರಲ್ಲಿ, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಅನುಮತಿ ನಿರಾಕರಣೆ ಮತ್ತು ಮಧ್ಯದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ ಸಹ ಹಿಂದಿಯಲ್ಲಿ ‘ರಾಮ್ ಕೆ ನಾಮ್’ ಎಂದು ಕರೆಯಲ್ಪಡುವ ‘ಇನ್ ದಿ ನೇಮ್ ಆಫ್ ಗಾಡ್’ ಅನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಇಷ್ಟೆ ಅಲ್ಲದೆ, ಅನುಮತಿ ನಿರಾಕರಣೆ ನಡುವೆಯೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ವರ್ಷ ಈ ಚಿತ್ರವನ್ನು ಪ್ರದರ್ಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....