Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...