Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...