Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...