Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...