Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...