Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...