Homeಕರ್ನಾಟಕತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ತಮ್ಮ ರಾಜಿನಾಮೆ ಅಂಗೀಕಾರವಾಗುವುದು ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿಯವರಿಗೆ ಬೇಕಿಲ್ಲವೇ?

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೌದು ಇಂದು ಬೆಳಿಗ್ಗೆಯಿಂದಲೇ ಟಿವಿ ವಾಹಿನಿಗಳಲ್ಲಿ ಎರಡು ವಿಕೆಟ್ ಪತನ ಎಂಬ ಜೋರು ಸುದ್ದಿಗಳು ಅಬ್ಬರದ ರೀತಿಯಲ್ಲಿ ಕೇಳಿಬರುತ್ತಿದ್ದರೂ ಸಹ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಕೊಟ್ಟಿರುವ ರಾಜೀನಾಮೆ ಅಸಿಂಧುವಾಗಿವೆ. ಏಕೆಂದರೆ ಅವರಿಬ್ಬರೂ ರಾಜಿನಾಮೆ ಕೊಟ್ಟ ರೀತಿಯೇ ಅದು ಅಂಗೀಕಾರವಾಗಬಾರದು ಎಂಬ ರೀತಿಯಲ್ಲಿದೆ.

ನೇರವಾಗಿ ಹೇಳುವುದಾದರೆ ಶಾಸಕ ಆನಂದ್ ಸಿಂಗ್ ತಮ್ಮ ರಾಜಿನಾಮೆಯನ್ನು ಸ್ಪೀಕರ್‍ರವರಿಗೆ ಕೊಡುವುದು ಬಿಟ್ಟು ರಾಜ್ಯಪಾಲರಿಗೆ ನೀಡಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ನೇರವಾಗಿ ಸ್ಪೀಕರ್‍ಗೆ ರಾಜಿನಾಮೆ ಕೊಡುವುದು ಬಿಟ್ಟು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಛೇರಿಕೆ ಫ್ಯಾಕ್ಸ್ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ರಮೇಶ್ ಕುಮಾರ್ ರವರು ಯಾರು ರಾಜಿನಾಮೆ ಕೊಟ್ಟರೂ ಸ್ವೀಕರಿಸಿ ಅಂಗೀಕರಿಸುತ್ತೇನೆ. ಆದರೆ ಯಾರೊಬ್ಬರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಅಂದರೆ ಇಂದಿನ ರಾಜಿನಾಮೆ ಪ್ರಹಸನ ಕೂಡ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ತಂತ್ರವಲ್ಲದೇ ಬೇರೆನಲ್ಲ. ಆದರೆ ಇದರ ಕುರಿತು ಚಕಾರವೆತ್ತದೇ ಎಲ್ಲಾ ಮಾಧ್ಯಮಗಳು ಸಹ ಕೇವಲ ವಿಕೆಟ್ ಪತನ ಎಂಬುದರ ಹಿಂದೆ ಬಿದ್ದಿರುವುದು ದುರಂತ.

ಇದಕ್ಕೆ ಒಂದು ಉದಾಹರಣೆ ಕೊಡುವುದಾದರೆ ಹಾಲಿ ಸಂಸದ ಉಮೇಶ್ ಜಾಧವ್‍ರವರು ಚಿಂಚೊಳ್ಳಿ ಶಾಸಕರಾಗಿದ್ದ ವೇಳೆ ರಾಜಿನಾಮೆ ನೀಡಲು ಬಯಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್‍ರವರು ಬೆಂಗಳೂರಿನಲ್ಲಿರಲಿಲ್ಲ. ಆಗ ಅನಿವಾರ್ಯವಾಗಿ ಉಮೇಶ್ ಜಾಧವ್‍ರವರು ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮಕ್ಕೆ ತೆರಳಿ ನೇರವಾಗಿ ಸ್ಪೀಕರ್‍ರವರಿಗೆ ರಾಜಿನಾಮೆ ನೀಡಿದ್ದರು ಏಕೆಂದರೆ ಅವರಿಗೆ ಬೇಗ ರಾಜಿನಾಮೆ ಅಂಗೀಕಾರವಾಗಬೇಕಿತ್ತು. ಏಕೆಂದರೆ ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ಅವರು ಬಿಜೆಪಿಯಿಂದ ಸಂಸತ್ ಸ್ಥಾನಕ್ಕೆ ಸ್ಪರ್ಧಿಸಲು ಸಾಧ್ಯವಾಗುತ್ತಿತ್ತು. ಹಾಗೆ ಆಯಿತು ಕೂಡ.

ಆದರೆ ಇಂದು ಇದರ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಮಾತಾಡದೇ ಕೇವಲ ರಾಜಿನಾಮೆ ಹಿಂದೆ ಬಿದ್ದಿವೆ. ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಾಮಾಜಿಕ ಕಾರ್ಯಕರ್ತ ಅನಿಲ್ ಕುಮಾರ್ ಚಿಕ್ಕದಾಳವಟ್ಟರವರನ್ನು ಮಾತನಾಡಿಸಲಾಯಿತು. ಅವರು “ಈ ಮಾಧ್ಯಮಗಳು ಅವರು ರಾಜಿನಾಮೆ ಕೊಟ್ಟಿದ್ದಾರೆ, ಇವರು ರಾಜಿನಾಮೆ ಕೊಟ್ಟಿದ್ದಾರೆ, ನೀವು ಯಾವಾಗ ಕೊಡುತ್ತೀರಿ ಎಂದು ಸಿಕ್ಕ ಸಿಕ್ಕ ಶಾಸಕರನ್ನೆಲ್ಲಾ ಕೇಳುತ್ತಾ ಹೋಗುತ್ತಿರುವುದು ನೋಡಿದರೆ ಈ ಸರ್ಕಾರ ಬೀಳಿಸಲು ಮಾಧ್ಯಮದವರೇ ಸುಪಾರಿ ಪಡೆದಂತಿದೆ” ಎಂದು ಆರೋಪಿಸಿದ್ದಾರೆ.

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಪೀಕರ್ ಹತ್ತಿರ ಸಮಯ ಕೇಳಿದ್ದಾರೆ ಎಂದು ವರದಿಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಾನುಗೌರಿ.ಕಾಂ ನಿಂದ ಸ್ಪೀಕರ್ ಕಛೇರಿಯನ್ನು ಸಂಪರ್ಕಿಸಲಾಯಿತಾದರೂ ಸಂಪರ್ಕ ಲಭ್ಯವಾಗಿಲ್ಲ.

ಇನ್ನು ಇದೇ ಜುಲೈ 12ಕ್ಕೆ ವಿಧಾನಸಭಾ ಅಧಿವೇಶನ ಆರಂಭವಾಗುತ್ತಿದೆ. ಅಲ್ಲಿ ಈ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬರುವ ಸಂಭವವಿದೆ. ಇನ್ನು

ಶಾಸಕರಾದ ಭೀಮಾನಾಯ್ಕ್ ಮತ್ತು ಅಮರೇಗೌಡ ಬಯ್ಯಾಪುರರವರು ನಮ್ಮ ಹೆಸರನ್ನು ನಿಮ್ಮ ಅತೃಪ್ತ ಶಾಸಕರ ಪಟ್ಟಿಯಿಂದ ಕೈಬಿಡಿ ಎಂದು ಮಾಧ್ಯಮಗಳಿಗೆ ಬೇಸರದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ನೀವು ಯಾವಾಗ ರಾಜಿನಾಮೆ ಕೊಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಈ ರೀತಿಯ ಅಸಮಾಧಾನದ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಮಹೇಶ್ ಕುಮಟಳ್ಳಿ ರವರಿಗೆ ಸತೀಶ್ ಜಾರಕಿಹೊಳಿಯವರು ಮಾಧ್ಯಮದ ಎದುರೇ ಫೋನ್ ಮಾಡಿ ನೀವು ಹೋಗುತ್ತೀರಾ ಎಂದು ಕೇಳಿದರು. ಆಗ ಮಹೇಶ್ ಕುಮಟಳ್ಳಿ ಇಲ್ಲ ಎಂದಿದ್ದಾರೆ.

ಎಚ್.ವಿಶ್ವನಾಥ್ ನವರು ಕಾಳಿದೇವಿಯ ದರ್ಶನಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಮಾಧ್ಯಮಗಳು ಏರ್ ಪೋರ್ಟ್ ನಲ್ಲಿಯೂ ಬೆನ್ನು ಬಿದ್ದಾಗ, ಅತೃಪ್ತ ಶಾಸಕರ ನಾಯಕ ನಾನಲ್ಲ ಮತ್ತು ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...