Homeಕರ್ನಾಟಕಪಕ್ಷ ಸೇರ್ಪಡೆಯಾಗಿ 24 ಗಂಟೆಯೊಳಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಸಿಂಗ್ ಸಹೋದರಿ ನೇಮಕ

ಪಕ್ಷ ಸೇರ್ಪಡೆಯಾಗಿ 24 ಗಂಟೆಯೊಳಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಸಿಂಗ್ ಸಹೋದರಿ ನೇಮಕ

- Advertisement -
- Advertisement -

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರ ಸಹೋದರಿ ರಾಣಿ ಸಂಯುಕ್ತಾ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ 24 ಗಂಟೆಯೊಳಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ರಾಣಿ ಸಂಯುಕ್ತಾ ಅವರನ್ನು ಭಾನುವಾರದಿಂದಲೇ ಜಾರಿಗೆ ಬರುವಂತೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ರಾಣಿ ಸಂಯುಕ್ತಾ ಅವರು ಬಿಜೆಪಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಆಗಿದ್ದರು. ಆದರೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಸಿಂಗ್​ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅವರ ಬದಲಿಗೆ ಕ್ಷೇತ್ರದಲ್ಲಿ ಸಂಯುಕ್ತಾ ಸಿಂಗ್ ಅಳಿಯನೂ ಆಗಿರುವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಹೀಗಾಗಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಅವರು ಬಿಜೆಪಿಗೆ ರಾಜೀನಾಮೆ ನೀಡಿ ನಿನ್ನೆಯಷ್ಟೇ (ಶನಿವಾರ) ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಶನಿವಾರ ರಾಣಿ ಸಂಯುಕ್ತಾ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ರಾಣಿ ಸಂಯುಕ್ತಾ ಸಿಂಗ್ ಕಾಂಗ್ರೆಸ್ ಸೇರಿದರು. ಶುಕ್ರವಾರ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿಯಾಗಿ‌ ಮಾತುಕತೆ ಮಾಡಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಬಳಿಕ ಬಿಜೆಪಿ ಸೇರಿದ್ದ ಆನಂದ್ ಸಿಂಗ್ ಸಚಿವ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ತಂದೆ ಆನಂದ್ ಸಿಂಗ್ ಅವರ ಎಲ್ಲಾ ರಾಜಕೀಯ ಕಾರ್ಯಕ್ರಮಗಲ್ಲಿ ಪುತ್ರ ಸಿದ್ದಾರ್ಥ್ ಕಾಣಿಸಿಕೊಳ್ಳುತ್ತಿದ್ದರು. ಸಮಾಜ ಸೇವೆ, ಗ್ರಾಮ ವಾಸ್ತವ್ಯದ ಹೆಸರಿನಲ್ಲಿ ಮಾತ್ರವಲ್ಲದೆ, ಯಾವುದೇ ಕಾರ್ಯಕ್ರಮಗಳಿದ್ದರೂ ತಪ್ಪದೇ ಹಾಜರಾಗುವ ಮೂಲಕ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು. ಇವೆಲ್ಲವನ್ನು ಗಮನಿಸಿದಾಗ ಆನಂದ್ ಸಿಂಗ್ ತಮ್ಮ ಪುತ್ರನನ್ನು ಕಣಕ್ಕಿಳಿಸುತ್ತಾರೆ ಎಂಬ ಸುದ್ದಿ ಹರಿದಾಡತೊಡಗಿತ್ತು. ಆದರೆ ಇದೇ ಕ್ಷೇತ್ರದಲ್ಲಿ ಆನಂದ್ ಸಿಂಗ್ ಸಹೋದರಿ ಬಿಜೆಪಿ ಟಿಕೆಟ್ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಕ್ಷೇತ್ರದಲ್ಲಿ ಸಿದ್ದಾರ್ಥ್ ಸಿಂಗ್​ಗೆ ಮಣೆ ಹಾಕಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದೇ ತಡ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿನ ಭಿನ್ನಮತ ಸ್ಫೋಟಗೊಂಡಿತ್ತು. ಬಿಜೆಪಿಯ ಅನೇಕ ನಾಯಕರು ಅಸಮಾಧಾನ ಹೊರಹಾಕಿದ್ದಷ್ಟೇ ಅಲ್ಲದೇ ಪಕ್ಷವನ್ನೇ ಬಿಟ್ಟು ಹೊರಬಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅದರಂತೆ ಆನಂದ್ ಸಿಂಗ್ ಸಹೋದರಿಯೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...