Homeಕರ್ನಾಟಕಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

ಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

- Advertisement -
- Advertisement -

ಕಾರವಾರದ ವಾಣಿಜ್ಯ ಬಂದರು ವಿಸ್ತರಿಸುವ “ಸಂಕಷ್ಟ ಮಾಲಾ” ಯೋಜನೆ ತಮ್ಮ ಬದುಕನ್ನೇ ಬರ್ಬಾದ್ ಮಾಡಿಬಿಡುತ್ತದೆಂಬ ಆತಂಕದಲ್ಲಿ ಸ್ಥಳೀಯರೆಲ್ಲಾ ಒಂದಾಗಿ ಬೀದಿಗಿಳಿದಿದ್ದಾರೆ! ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಹೆಸರಿನ ಚಂದದ ಕಡಲ ತೀರ, ಬಡ ಬೆಸ್ತರ ತುತ್ತಿನಾಧಾರವಾಗಿದ್ದ ಕಸಬು ಮತ್ತು ಕಾರವಾರದ ನೆಮ್ಮದಿ-ಸ್ವಾಸ್ಥ್ಯ ಎಲ್ಲವನ್ನು ಒಂದೇ ಬಾರಿಗೆ ಆಪೋಷನ ಪಡೆಯುವ ಈ ಯೋಜನೆ ಬೇಡವೇ ಬೇಡವೆಂದು ಆಗ್ರಹಿಸಿ ಮೊನ್ನೆ (16-01-2020) ಹತ್ತಾರು ಸಾವಿರ ಮಂದಿ ಸೇರಿ ಕಾರವಾರ ಬಂದ್ ಮಾಡಿ ಆಳುವ ಖೂಳರಿಗೆ “ಸಣ್ಣ” ಎಚ್ಚರಿಕೆ ರವಾನಿಸಿದ್ದಾರೆ!! ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಶೋ ಮ್ಯಾಮ್ ಶಾಸಕಿ ರೂಪಾಲಿ ನಾಯ್ಕ್ ಒಣ ಪ್ರತಿಷ್ಠೆಯ ಸದ್ರಿ ಕಾಮಗಾರಿ ಕಾರವಾರ ತಾಲ್ಲೂಕಿನ ಅಷ್ಟೂ ಮೀನುಗಾರರನ್ನು ಜೀವನ್ಮರಣದ ಜಂಜಾಟವಾಗಿ ಕಾಡುತ್ತಿದೆ…

ಬರೋಬ್ಬರಿ 125 ಕೋಟಿ ರೂಪಾಯಿಗಳ ಈ ಪ್ರಾಜೆಕ್ಟ್ ಮೋದಿ ಮಾಮ ತನ್ನ ಪರಮಾಪ್ತ ಬಂದರು ದಂಧೆದಾರ ಆದಾನಿಗಾಗಿಯೇ ಕೈಗೆತ್ತಿಕೊಂಡಿರುವ “ಅಭಿವೃದ್ಧಿ” ಕಾಮಗಾರಿ. ಕೇಂದ್ರ-ರಾಜ್ಯ ಸರ್ಕಾರಗಳ ಸಹಭಾಗಿತ್ವದ ಕಾರವಾರ ಬಂದರು ವಿಸ್ತರಣೆಗೆ ಅಡಿಗಲ್ಲು ಹಾಕಿಸಿದ್ದು ಅಂದಿನ ಕಾಂಗ್ರೆಸ್ ಎಮ್ಮೆಲ್ಲೆ ಸತೀಶ್ ಸೈಲ್, ಪಕ್ಕಾ ಪಾಯ್ದೆಕೋರ ಉದ್ಯಮಿಯಾದ ಈ ಅದಿರು ಕಳ್ಳಸಾಗಾಣಿಕೆದಾರ ಅಂದು ಅದ್ಯಾವ ಕನಸು ಕಂಡಿದ್ದನೋ ಏನೋ? ಬಂದರು ಕಾಮಗಾರಿಯ ಅಲೆ ತಡೆಗೋಡೆಗೆ ಬೇಕಾದ ದೊಡ್ಡಗಾತ್ರದ ಶಿಲೆಕಲ್ಲು ಪೂರೈಕೆಯ ರಹಸ್ಯ ಬೇನಾಮಿ ಒಪ್ಪಂದ ಸೈಲ್ ಮಾಡಿಕೊಂಡಿದ್ದ. ಕಾಮಗಾರಿ ಗುತ್ತಿಗೆ ಪಡೆದಿರುವ ಮುಂಬೈನ ಡಿವಿಪಿ ಇನ್ಫ್ರಾ ಪ್ರಾಜೆಕ್ಟ್‍ಸ್ ಪ್ರೈ.ಲಿ. ಕೆಲಸ ಶುರುಹಚ್ಚಿಕೊಂಡ ಎರಡೇ ದಿನದಲ್ಲಿ ನೂರಾರು ಲೋಡ್ ಕಲ್ಲು ಬೀಚ್‍ಗೆ ಬಂದು ಬಿದ್ದಿದೆ. ಬಂದರು ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆರಂಭಿಸಿದ ಕಾಮಗಾರಿ ಹೇಗಿತ್ತೆಂದರೆ, ಮೀನುಗಾರರು ಶಾಶ್ವತವಾಗಿ ಹೊಟ್ಟೆಪಾಡಿನ ಸಮುದ್ರ ಕೃಷಿ ಮಾಡಲಾಗದಂತಿತ್ತು!!

ಕಾರವಾರದಲ್ಲಿ ಮೀನುಗಾರ ಸಂಕುಲ ರಾಜಕೀಯವಾಗಿ ನಿರ್ಣಾಯಕ. ಎಡವಟ್ಟು ಕಾಮಗಾರಿ ಕಂಡದ್ದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಸ್ತರೆಲ್ಲಾ ಅಹೋರಾತ್ರಿ ಪ್ರತಿಭಟನೆ ನಡೆಸತೊಡಗಿದರು. ಪೇಚಿಗೆ ಸಿಲುಕಿದ ಮಾಜಿ ಶಾಸಕ ಸೈಲ್ ತಕ್ಷಣ ಬಣ್ಣ ಬದಲಿಸಿಬಿಟ್ಟ. ಊರವರ ಹಿತೈಷಿ ಎಂಬಂತೆ ಪೋಸು ಕೊಡುತ್ತಾ ಬಂದರು ಕಾಮಗಾರಿ ವಿರುದ್ಧ ಹೇಳಿಕೆ ಒಗಾಯಿಸತೊಡಗಿದೆ. ಪ್ರತಿಭಟನಾಕಾರರ ಮಧ್ಯೆ ಸಾವಕಾಶವಾಗಿ ತೂರಿಕೊಂಡು ಬೀಚನ್ನು ಬೆಳಗ್ಗೆಯ ವಾಕಿಂಗ್, ಸಂಜೆಯ ವಿಹಾರ, ನೆಮ್ಮದಿಗಾಗಿ ಬಳಸುತ್ತಿದ್ದ ಜನರೂ ಮೀನುಗಾರರ ಜತೆ ಸೇರಿಕೊಂಡು ಪ್ರತಿಭಟನೆ ಬಿರುಸುಗೊಳಿಸಿದರು. ಬಂದರು ವಿರೋಧಿ ಹೋರಾಟಗಾರರ ಆಕ್ರೋಶ ತಮ್ಮ ನೋವಿಗೆ ಸ್ಪಂದಿಸದ ಸಂಸದ ಅನಂತ್ಮಾಣಿ ಮತ್ತು ಶಾಸಕಿ ರೂಪಾಲಿ ಮೇಲೆ ಕೇಂದ್ರೀಕೃತವಾಗಿತ್ತು. ಈ ಇಬ್ಬರು ನಾಲಾಯಕ್ ಜನಪ್ರತಿನಿಧಿಗಳ ಫೋಟೋಕ್ಕೆ ಪ್ರತಿಭಟನಾಕಾರರು ಚಪ್ಪಲಿ ಹಾರಹಾಕಿ, ಸಗಣಿ ಮೆತ್ತಿ ಸಹಜ ಸಿಟ್ಟು ವ್ಯಕ್ತಡಿಸಿದ್ದರು.

ಮೀನುಗಾರರ ಹುಡುಗ-ಹೊನ್ನಾವರದ ಪರೇಶ್ ಮೇಸ್ತನ ಸಂಶಯಾಸ್ಪದ ಸಾವನ್ನು ಸಾಬರಿಂದಾದ ಕೊಲೆ ಎಂದು ಬಿಂಬಿಸಿದ ಬಿಜೆಪಿಯ ಕೋಮು ರಾಜಕಾರಣದ ಫಲಾನುಭವಿಯಾದ ರೂಪಾಲಿಗೆ ಮೀನುಗಾರರ ತಿರುಗಿಬಿದ್ದದ್ದು ನಿದ್ದೆಗೆಡಿಸಿಬಿಟ್ಟಿತ್ತು. ಕಾರವಾರ ಬಂದ್ ದಿನ ರೂಪಾಲಿಗೆ ಕ್ಷೇತ್ರದಲ್ಲಿರುವ ಧೈರ್ಯವೇ ಇರಲಿಲ್ಲ. ಹಾಗಾಗಿ ಆಕೆ ರಾತ್ರೋರಾತ್ರಿ ಬೆಂಗಳೂರಿಗೆ ಓಡಿದ್ದಾರೆ. ಇತ್ತ ಜನರು ಪ್ರತಿಭಟನಾ ರ್ಯಾಲಿ ಹೊರಟಿದ್ದರೆ, ಅತ್ತ ಬೆಂಗಳೂರಲ್ಲಿ ರೂಪಾಲಿ ಮೇಡಮ್ಮು ಮೀನುಗಾರರ ಮಂತ್ರಿ ಶ್ರೀನಿವಾಸ ಪೂಜಾರಿ ಜತೆ ಕುಳಿತು ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಬಂದರ ವಿಸ್ತರಣೆಯಿಂದ ಮೀನುಗಾರರಿಗೆ ತೊಂದರೆ ಆಗುವುದಿಲ್ಲ, ಬೀಚ್ ಬಂದರಿಗೆ ಬಳಕೆಯಾಗುವುದಿಲ್ಲ. ಮುಗ್ಧ ಮೀನುಗಾರರನ್ನು ಮಾಜಿ ಶಾಸಕರಾದ ಸೈಲ್ ಮತ್ತ ಅಸ್ನೋಟಿಕರ್ ದಾರಿ ತಪ್ಪಿಸುತ್ತಿದ್ದಾರೆಂದು ಪೂಜಾರಿ-ರೂಪಾಲಿ ಒಂದೇ ಸ್ವರದಲ್ಲಿ ಯುಗಳ ಆಲಾಪ ಮಾಡಿದ್ದಾರೆ. ಸುಳ್ಳು ಹೇಳಿ ತಮ್ಮ ಜನದ್ರೋಹ ಮುಚ್ಚಿಡಲು ಹವಣಿಸಿದ್ದಾರೆ.

ವಾಸ್ತವವೆಂದರೆ, ಬಂದರು ವಿರೋಧಿಗಳು ಸೈಲ್-ಅಸ್ನೋಟಿಕರ್‍ನನ್ನೂ ನಂಬುತ್ತಿಲ್ಲ. ಈ ಇಬ್ಬರು ಸಮಯಸಾಧಕರನ್ನು ಹೊರಗಿಟ್ಟೇ ಜನರು ಕಟ್ಟಿದ ಅಖಂಡ ಹೋರಾಟವಿದು. ಸೈಲ್-ಅಸ್ನೋಟಿಕರ್ ತಮ್ಮ ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಷ್ಟೇ. ಆದರೆ ಜನರು ಮಾತ್ರ ಈ ಮಾಜಿದ್ವಯರಿಗೆ ಸಭೆಗಳಲ್ಲಿ ಭಾಷಣ ಮಾಡಲಿಕ್ಕೂ ಬಿಡುತ್ತಿಲ್ಲ. ಕಾರವಾರಕ್ಕೆ ಬಂದು ಜನರಿಗೆ ಮುಖ ತೋರಿಸುವ ನೈತಿಕ ಧೈರ್ಯವೂ ಇಲ್ಲದೆ ಚಡಪಡಿಸುತ್ತಿರುವ ಶಾಸಕಿಯಮ್ಮ ಒಂದೆಡೆಯಾದರೆ, ಮತ್ತೊಂದೆಡೆ ಹಲ್ಲೆಕೋರ ಮನಸ್ಥಿತಿಯ ಸಂಸದ ಅನಂತ್ಮಾಣಿ ಬಂದರು ವಿರೋಧಿಗಳನ್ನು ಆರಂಭಿದಲ್ಲೇ ಹೊಸಕಿ ಹಾಕಬೇಕು….. ನಂಗೆ ಮತ್ತೆ ಎಂಪಿ ಆಗೋ ಆಸೆಯಿಲ್ಲ….. ಬಂದರು ಕಟ್ಟಿಯೇ ತೀರುತ್ತೇನೆ….” ಎಂದೆಲ್ಲಾ ಅಭಿವೃದ್ಧಿ ಆಟಾಟೋಪ ಪ್ರದರ್ಶಿಸುತ್ತಿದ್ದಾನೆ.

ಮೀನುಗಾರರು ವಾರದಿಂದ ಮೀನುಗಾರಿಕೆ ಬಂದ್ ಮಾಡಿ ಧರಣಿ ಸತ್ಯಾಗ್ರಹ ಹೂಡುತ್ತಲೇ ಇದ್ದಾರೆ. ಶಾಸಕಿ ರೂಪಾಲಿ, ಸಂಸದ ಮಾಣಿಯ ಮಳ್ಳು ಮಾತುಗಾರಿಕೆಗೆ ನಗುತ್ತಿದ್ದಾರೆ. ಹೋರಾಟಗಾರರ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಿ ಸಮಸ್ಯೆ ಪರಿಹರಿಸಬೇಕಾಗಿದ್ದ ಮಂತ್ರಿ, ಸಂಸದ, ಶಾಸಕಿ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಬಂದರು ಅಧಿಕಾರಿಗಳು ಜನರ ಮುಂದೆ ಹೇಳೋದೇ ಒಂದು ಮಾಡೋದು ಮಾತ್ರ ಮತ್ತೊಂದು. ಬಂದರು ಅಧಿಕಾರಿಗಳು ತಾತ್ಕಾಲಿಕ ಮೀನು ಮಾರುಕಟ್ಟೆ ಹಿಂದಿನಿಂದ ಕಾಮಗಾರಿ ಮಾಡಲಾಗುತ್ತದೆ ಎಂದಿದ್ದರು. ಆದರೆ ಕೆಲಸ ಆಗುತ್ತಿರುವುದು ಬೀಚ್‍ನ ದಕ್ಷಿಣಕ್ಕಿರುವ ಪ್ಯಾರಾಗೋಲಾದ ಕಡೆಯಿಂದ. ಉತ್ತರ ಬದಿಯನ್ನು ಹೊಟೇಲು, ಗಾರ್ಡನ್ ಎಂದೆಲ್ಲಾ ಹಂಚಲಾಗಿದೆ. ಹೀಗಾಗಿ ಉಳಿದಿರುವುದು ಬರೀ 1 ಕಿ.ಮೀ ಬೀಚಷ್ಟೇ. ಇದರಲ್ಲಿ ಅರ್ಧ ಅಡೆಗೋಡೆಗೆ ಬಳಿಸಿದರೆ ಬಡ ಬೆಸ್ತರಿಗೆ ಮೀನುಗಾರಿಕೆಗೆ ಅವಕಾಶವಿಲ್ಲ; ವಾಕಿಂಗ್, ವಿಹಾರ ಸಾಧ್ಯವೂ ಇಲ್ಲ.

ಬಂದರು ಕಾಮಕಾರಿ ಏಕಪಕ್ಷೀಯವಾಗಿ ದಾದಾಗಿರಿಯಿಂದ ಆಡಳಿತಗಾರರು ನಡೆಸಿದ್ದಾರೆ. ಬಂದರಿನಿಂದಾಗುವ ಅರ್ಥಿಕ, ಸಾಮಾಜಿಕ ಪರಿಸರ ಪರಿಣಾಮಗಳ ಅಧ್ಯಯನವೇ ನಡೆಸಲಾಗಿಲ್ಲ. ಸಾರ್ವಜನಿಕರಿಗೆ ಉದ್ದೇಶಿತ ಬಂದರಿನ ಮಾಹಿತಿ ನೀಡಲಾಗುತ್ತಿಲ್ಲ. ಮಹತ್ವದ ಸಂಗತಿಯೆಂದರೆ, ಈ ಯೋಜನೆಗೆ ಸಿಆರ್‍ಜೆಡ್ ಸಮಿತಿಯ ಅನುಮತಿಯೇ ಸಿಕ್ಕಿಲ್ಲ. ಮರುಪರಿಶೀಲನೆಗೆ ಸಮಿತಿ ಬಂದರು ಇಲಾಖೆಗೆ ಸೂಚಿಸಿತ್ತು. ಬಂದರು ವಿಸ್ತರಣೆ ಎಂದರೆ, ದೇಶ-ವಿದೇಶದ ಬೃಹತ್ ಸರಕು ಸಾಗಾಣಿಕಾ ಹಡಗುಗಳು ಬಂದು-ಹೋಗುವ ತಾಣ. ಇಂಥ ವಾಣಿಜ್ಯ ಬಂದರಿನ ಮಗ್ಗುಲಲ್ಲಿ ಮೀನುಗಾರಿಕರ ಜೆಟ್ಟಿ ಇರಲು ಸಾಧ್ಯವೇ ಇಲ್ಲ. ವಾಣಿಜ್ಯ ಬಂದರಿನ ಸುತ್ತ ಮಜಬೂತಾದ ಆವರಣ ಗೋಡೆ, ಅದರ ಮೇಲೆ ತಂತಿ ಮುಳ್ಳಿನ ಬೇಲಿ ಹಾಕಲಾಗುತ್ತದೆ. ಸಾರ್ವಜನಿಕರ ಚಲನವಲನ. ಮೀನುಗಾರಿಕೆ ಸುತ್ತಲಿನ ಪ್ರದೇಶದಲ್ಲಿ ನಿಶೇಧಿಸಲಾಗುತ್ತದೆ. ಕಾರವಾರದ ಬಂದರು ವಿಸ್ತರಣೆಯಾದರೆ, ಬೈತ್ಕೋಲ್ ಮೀನುಗಾರಿಕಾ ಬಂದರಿಗೆ ಗಂಡಾಂತರ ಖಂಡಿತಾ.

ಪಶ್ಚಿಮ ಘಟ್ಟಗಳ ತಪ್ಪಲಲ್ಲಿರುವ ಕಾರವಾರದ 43 ಕಿ.ಮೀ ಉದ್ದದ ಕಡಲತೀರದಲ್ಲಿ ನಿರ್ಧಿಷ್ಟ ಭಾಗಗಳಷ್ಟೇ ಮೀನುಗಾರಿಕೆ ಮತ್ತು ಮೀನುಗಾರಿಕ ವಾಸ್ತವ್ಯಕ್ಕೆ ಯೋಗ್ಯವಾದವುಗಳು. ಇದರಲ್ಲಿ 33 ಕಿ.ಮೀ ತೀರಪ್ರದೇಶ ನೌಕಾನೆಲೆಗೆ ಕೊಡುವಾಗ ಮೀನುಗಾರರನ್ನು ಒಕ್ಕಲೆಬ್ಬಿಸಲಾಗಿದೆ. ಈಗಿರುವ ವಾಣಿಜ್ಯ ಬಂದರಿಗಾಗಿ 1.5 ಕಿ.ಮೀ ಕಳೆದುಕೊಳ್ಳಲಾಗಿದೆ. ಇನ್ನೊಂದು ಕಿ.ಮೀ ಕಬಳಿಸಲು ಹೊಸ ಯೋಜನೆ ಬಾಯ್ತೆರೆದು ನಿಂತಿದೆ. ಪ್ರವಾಸೋದ್ಯಮದ ನೆಪದಲ್ಲಿ ಮುನ್ಸಿಪಾಲಿಟಿ ಗಾರ್ಡನ್, ರಾಕ್-ಗಾರ್ಡನ್, ಸಾಲುಮರದ ತಿಮ್ಮಕ್ಕ ಗಾರ್ಡನ್, ದೇವಭಾಗ ಜಂಗಲ್ ರೆಸಾರ್ಟ್, ತಿಳಮಾತಿ ಬೀಚ್, ಹೋಟೆಲ್, ರೆಸಾರ್ಟ್ ಲಾಬಿಗೆ ಹಂಚಿ ಮೀನುಗಾರರ ಆಶ್ರಯ-ಕಸಬು ತಪ್ಪಿಸಲಾಗಿದೆ. ಉಳಿದಿರುವ 3.5 ಕಿ.ಮೀ ತೀರ ಪ್ರದೇಶವನ್ನು 14,500 ಮೀನುಗಾರರ ಕುಟುಂಬಗಳು ಹಂಚಿಕೊಳ್ಳಬೇಕಿದೆ. ಅಲಿಗದ್ದಾ ತೀರದಲ್ಲಿ ದೋಣಿಗಳಿಡಲಿಕ್ಕೆ ಜಾಗವಿಲ್ಲ. ಭಾರತೀಯ ಕೋಸ್ಟ್ ಗಾರ್ಡ್, ಇಂಡಿಯನ್ ಆಯಿಲ್ ಕಂಪನಿಗಳು ಕಾರವಾರ ತೀರಕ್ಕೆ ಬರುವ ಯೋಜನೆಗಳ ಸರದಿಯಲ್ಲಿವೆ. ಬೆಸ್ತರ ಪಾಲಿಗೆ ಆಪದ್ಬಾಂಧವನಂತಿದ್ದ ಕಾರವಾರ ತೀರ ಪ್ರದೇಶವನ್ನೂ ವಾಣಿಜ್ಯ ಬಂದರು ವಿಸ್ತರಣೆಗೆ ಬಲಿಗೊಟ್ಟರೆ ಸ್ಥಳೀಯ ಮೀನುಗಾರರ ಪಾಡೇನು?

ಇದೆಲ್ಲ ಶಾಸಕಿ ರೂಪಾಲಿಯಮ್ಮ, ಅನಂತ್ಮಾಣಿಯ ಮತಾಂಧ ತಲೆಬುರುಡೆಗೆ ಅರ್ಥವಾಗುತ್ತಲ್ಲ. ಅಗತ್ಯವಿರುವ ಯಾವ ಸರ್ಕಾರಿ ಏಜೆನ್ಸಿಗಳ ಅನುಮತಿಯೂ ಇಲ್ಲದೆ ಅವಸರದಲ್ಲಿ ಶುರುವಾಗಿರುವ ಬಂದರು ಯೋಜನೆಯಿಂದ ಕಾರವಾರಿಗರಿಗೆ ಯಾವ ಲಾಭವೂ ಇಲ್ಲ. ಬಿಜೆಪಿಯ ಅಭಿವೃದ್ಧಿ ಪಂಡಿತರು ಉದ್ಯೋಗಾವಕಾಶವಿದೆ ಎಂದು ಬೊಂಬಾಡಾ ಬಜಾಯಿಸುತ್ತಿದ್ದಾರೆ. ಎಷ್ಟು ಉದ್ಯೋಗ? ಯಾವ ಉದ್ಯೋಗ? ಇದಕ್ಕೆಲ್ಲ ಉತ್ತರವಿಲ್ಲ. ಅಬ್ಬಬ್ಬಾ ಎಂದರೆ ಅಮಾಯಕರನ್ನು ಶೋಷಿಸುವ ಕೂಲಿ ಕೆಲಸ ಸಿಗಬಹುದು. ಬೃಹತ್ ಬಂದರಿನಲ್ಲಿ ಮಂಗಳೂರು-ಮುಂಬೈ ಬಂದರಿನಲ್ಲಾಗುವಂಥ ಭೂಗತ ಬಾನ್ಗಡಿ ಆಗಬಹುದು. ಸಣ್ಣ ಬಂದರಿರುವಾಗಲೇ ಅಂದಿನ ಶಾಸಕ ವಸಂತ ಅಸ್ನೋಟಿಕರ್ ಮತ್ತು ಭೂಗತ ದೊರೆ ದಿಲೀಪ್ ನಾಯ್ಕ್ ಆಮದನಿಗಾಗಿ ಹೊಡೆದಾಡಿ ಹತ್ಯೆಯಾಗಿದ್ದು ನೆನಪಿದೆಯಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...