Homeಕರ್ನಾಟಕಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

ಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

- Advertisement -
- Advertisement -

ಕಾರವಾರದ ವಾಣಿಜ್ಯ ಬಂದರು ವಿಸ್ತರಿಸುವ “ಸಂಕಷ್ಟ ಮಾಲಾ” ಯೋಜನೆ ತಮ್ಮ ಬದುಕನ್ನೇ ಬರ್ಬಾದ್ ಮಾಡಿಬಿಡುತ್ತದೆಂಬ ಆತಂಕದಲ್ಲಿ ಸ್ಥಳೀಯರೆಲ್ಲಾ ಒಂದಾಗಿ ಬೀದಿಗಿಳಿದಿದ್ದಾರೆ! ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಹೆಸರಿನ ಚಂದದ ಕಡಲ ತೀರ, ಬಡ ಬೆಸ್ತರ ತುತ್ತಿನಾಧಾರವಾಗಿದ್ದ ಕಸಬು ಮತ್ತು ಕಾರವಾರದ ನೆಮ್ಮದಿ-ಸ್ವಾಸ್ಥ್ಯ ಎಲ್ಲವನ್ನು ಒಂದೇ ಬಾರಿಗೆ ಆಪೋಷನ ಪಡೆಯುವ ಈ ಯೋಜನೆ ಬೇಡವೇ ಬೇಡವೆಂದು ಆಗ್ರಹಿಸಿ ಮೊನ್ನೆ (16-01-2020) ಹತ್ತಾರು ಸಾವಿರ ಮಂದಿ ಸೇರಿ ಕಾರವಾರ ಬಂದ್ ಮಾಡಿ ಆಳುವ ಖೂಳರಿಗೆ “ಸಣ್ಣ” ಎಚ್ಚರಿಕೆ ರವಾನಿಸಿದ್ದಾರೆ!! ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಶೋ ಮ್ಯಾಮ್ ಶಾಸಕಿ ರೂಪಾಲಿ ನಾಯ್ಕ್ ಒಣ ಪ್ರತಿಷ್ಠೆಯ ಸದ್ರಿ ಕಾಮಗಾರಿ ಕಾರವಾರ ತಾಲ್ಲೂಕಿನ ಅಷ್ಟೂ ಮೀನುಗಾರರನ್ನು ಜೀವನ್ಮರಣದ ಜಂಜಾಟವಾಗಿ ಕಾಡುತ್ತಿದೆ…

ಬರೋಬ್ಬರಿ 125 ಕೋಟಿ ರೂಪಾಯಿಗಳ ಈ ಪ್ರಾಜೆಕ್ಟ್ ಮೋದಿ ಮಾಮ ತನ್ನ ಪರಮಾಪ್ತ ಬಂದರು ದಂಧೆದಾರ ಆದಾನಿಗಾಗಿಯೇ ಕೈಗೆತ್ತಿಕೊಂಡಿರುವ “ಅಭಿವೃದ್ಧಿ” ಕಾಮಗಾರಿ. ಕೇಂದ್ರ-ರಾಜ್ಯ ಸರ್ಕಾರಗಳ ಸಹಭಾಗಿತ್ವದ ಕಾರವಾರ ಬಂದರು ವಿಸ್ತರಣೆಗೆ ಅಡಿಗಲ್ಲು ಹಾಕಿಸಿದ್ದು ಅಂದಿನ ಕಾಂಗ್ರೆಸ್ ಎಮ್ಮೆಲ್ಲೆ ಸತೀಶ್ ಸೈಲ್, ಪಕ್ಕಾ ಪಾಯ್ದೆಕೋರ ಉದ್ಯಮಿಯಾದ ಈ ಅದಿರು ಕಳ್ಳಸಾಗಾಣಿಕೆದಾರ ಅಂದು ಅದ್ಯಾವ ಕನಸು ಕಂಡಿದ್ದನೋ ಏನೋ? ಬಂದರು ಕಾಮಗಾರಿಯ ಅಲೆ ತಡೆಗೋಡೆಗೆ ಬೇಕಾದ ದೊಡ್ಡಗಾತ್ರದ ಶಿಲೆಕಲ್ಲು ಪೂರೈಕೆಯ ರಹಸ್ಯ ಬೇನಾಮಿ ಒಪ್ಪಂದ ಸೈಲ್ ಮಾಡಿಕೊಂಡಿದ್ದ. ಕಾಮಗಾರಿ ಗುತ್ತಿಗೆ ಪಡೆದಿರುವ ಮುಂಬೈನ ಡಿವಿಪಿ ಇನ್ಫ್ರಾ ಪ್ರಾಜೆಕ್ಟ್‍ಸ್ ಪ್ರೈ.ಲಿ. ಕೆಲಸ ಶುರುಹಚ್ಚಿಕೊಂಡ ಎರಡೇ ದಿನದಲ್ಲಿ ನೂರಾರು ಲೋಡ್ ಕಲ್ಲು ಬೀಚ್‍ಗೆ ಬಂದು ಬಿದ್ದಿದೆ. ಬಂದರು ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆರಂಭಿಸಿದ ಕಾಮಗಾರಿ ಹೇಗಿತ್ತೆಂದರೆ, ಮೀನುಗಾರರು ಶಾಶ್ವತವಾಗಿ ಹೊಟ್ಟೆಪಾಡಿನ ಸಮುದ್ರ ಕೃಷಿ ಮಾಡಲಾಗದಂತಿತ್ತು!!

ಕಾರವಾರದಲ್ಲಿ ಮೀನುಗಾರ ಸಂಕುಲ ರಾಜಕೀಯವಾಗಿ ನಿರ್ಣಾಯಕ. ಎಡವಟ್ಟು ಕಾಮಗಾರಿ ಕಂಡದ್ದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಸ್ತರೆಲ್ಲಾ ಅಹೋರಾತ್ರಿ ಪ್ರತಿಭಟನೆ ನಡೆಸತೊಡಗಿದರು. ಪೇಚಿಗೆ ಸಿಲುಕಿದ ಮಾಜಿ ಶಾಸಕ ಸೈಲ್ ತಕ್ಷಣ ಬಣ್ಣ ಬದಲಿಸಿಬಿಟ್ಟ. ಊರವರ ಹಿತೈಷಿ ಎಂಬಂತೆ ಪೋಸು ಕೊಡುತ್ತಾ ಬಂದರು ಕಾಮಗಾರಿ ವಿರುದ್ಧ ಹೇಳಿಕೆ ಒಗಾಯಿಸತೊಡಗಿದೆ. ಪ್ರತಿಭಟನಾಕಾರರ ಮಧ್ಯೆ ಸಾವಕಾಶವಾಗಿ ತೂರಿಕೊಂಡು ಬೀಚನ್ನು ಬೆಳಗ್ಗೆಯ ವಾಕಿಂಗ್, ಸಂಜೆಯ ವಿಹಾರ, ನೆಮ್ಮದಿಗಾಗಿ ಬಳಸುತ್ತಿದ್ದ ಜನರೂ ಮೀನುಗಾರರ ಜತೆ ಸೇರಿಕೊಂಡು ಪ್ರತಿಭಟನೆ ಬಿರುಸುಗೊಳಿಸಿದರು. ಬಂದರು ವಿರೋಧಿ ಹೋರಾಟಗಾರರ ಆಕ್ರೋಶ ತಮ್ಮ ನೋವಿಗೆ ಸ್ಪಂದಿಸದ ಸಂಸದ ಅನಂತ್ಮಾಣಿ ಮತ್ತು ಶಾಸಕಿ ರೂಪಾಲಿ ಮೇಲೆ ಕೇಂದ್ರೀಕೃತವಾಗಿತ್ತು. ಈ ಇಬ್ಬರು ನಾಲಾಯಕ್ ಜನಪ್ರತಿನಿಧಿಗಳ ಫೋಟೋಕ್ಕೆ ಪ್ರತಿಭಟನಾಕಾರರು ಚಪ್ಪಲಿ ಹಾರಹಾಕಿ, ಸಗಣಿ ಮೆತ್ತಿ ಸಹಜ ಸಿಟ್ಟು ವ್ಯಕ್ತಡಿಸಿದ್ದರು.

ಮೀನುಗಾರರ ಹುಡುಗ-ಹೊನ್ನಾವರದ ಪರೇಶ್ ಮೇಸ್ತನ ಸಂಶಯಾಸ್ಪದ ಸಾವನ್ನು ಸಾಬರಿಂದಾದ ಕೊಲೆ ಎಂದು ಬಿಂಬಿಸಿದ ಬಿಜೆಪಿಯ ಕೋಮು ರಾಜಕಾರಣದ ಫಲಾನುಭವಿಯಾದ ರೂಪಾಲಿಗೆ ಮೀನುಗಾರರ ತಿರುಗಿಬಿದ್ದದ್ದು ನಿದ್ದೆಗೆಡಿಸಿಬಿಟ್ಟಿತ್ತು. ಕಾರವಾರ ಬಂದ್ ದಿನ ರೂಪಾಲಿಗೆ ಕ್ಷೇತ್ರದಲ್ಲಿರುವ ಧೈರ್ಯವೇ ಇರಲಿಲ್ಲ. ಹಾಗಾಗಿ ಆಕೆ ರಾತ್ರೋರಾತ್ರಿ ಬೆಂಗಳೂರಿಗೆ ಓಡಿದ್ದಾರೆ. ಇತ್ತ ಜನರು ಪ್ರತಿಭಟನಾ ರ್ಯಾಲಿ ಹೊರಟಿದ್ದರೆ, ಅತ್ತ ಬೆಂಗಳೂರಲ್ಲಿ ರೂಪಾಲಿ ಮೇಡಮ್ಮು ಮೀನುಗಾರರ ಮಂತ್ರಿ ಶ್ರೀನಿವಾಸ ಪೂಜಾರಿ ಜತೆ ಕುಳಿತು ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಬಂದರ ವಿಸ್ತರಣೆಯಿಂದ ಮೀನುಗಾರರಿಗೆ ತೊಂದರೆ ಆಗುವುದಿಲ್ಲ, ಬೀಚ್ ಬಂದರಿಗೆ ಬಳಕೆಯಾಗುವುದಿಲ್ಲ. ಮುಗ್ಧ ಮೀನುಗಾರರನ್ನು ಮಾಜಿ ಶಾಸಕರಾದ ಸೈಲ್ ಮತ್ತ ಅಸ್ನೋಟಿಕರ್ ದಾರಿ ತಪ್ಪಿಸುತ್ತಿದ್ದಾರೆಂದು ಪೂಜಾರಿ-ರೂಪಾಲಿ ಒಂದೇ ಸ್ವರದಲ್ಲಿ ಯುಗಳ ಆಲಾಪ ಮಾಡಿದ್ದಾರೆ. ಸುಳ್ಳು ಹೇಳಿ ತಮ್ಮ ಜನದ್ರೋಹ ಮುಚ್ಚಿಡಲು ಹವಣಿಸಿದ್ದಾರೆ.

ವಾಸ್ತವವೆಂದರೆ, ಬಂದರು ವಿರೋಧಿಗಳು ಸೈಲ್-ಅಸ್ನೋಟಿಕರ್‍ನನ್ನೂ ನಂಬುತ್ತಿಲ್ಲ. ಈ ಇಬ್ಬರು ಸಮಯಸಾಧಕರನ್ನು ಹೊರಗಿಟ್ಟೇ ಜನರು ಕಟ್ಟಿದ ಅಖಂಡ ಹೋರಾಟವಿದು. ಸೈಲ್-ಅಸ್ನೋಟಿಕರ್ ತಮ್ಮ ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಷ್ಟೇ. ಆದರೆ ಜನರು ಮಾತ್ರ ಈ ಮಾಜಿದ್ವಯರಿಗೆ ಸಭೆಗಳಲ್ಲಿ ಭಾಷಣ ಮಾಡಲಿಕ್ಕೂ ಬಿಡುತ್ತಿಲ್ಲ. ಕಾರವಾರಕ್ಕೆ ಬಂದು ಜನರಿಗೆ ಮುಖ ತೋರಿಸುವ ನೈತಿಕ ಧೈರ್ಯವೂ ಇಲ್ಲದೆ ಚಡಪಡಿಸುತ್ತಿರುವ ಶಾಸಕಿಯಮ್ಮ ಒಂದೆಡೆಯಾದರೆ, ಮತ್ತೊಂದೆಡೆ ಹಲ್ಲೆಕೋರ ಮನಸ್ಥಿತಿಯ ಸಂಸದ ಅನಂತ್ಮಾಣಿ ಬಂದರು ವಿರೋಧಿಗಳನ್ನು ಆರಂಭಿದಲ್ಲೇ ಹೊಸಕಿ ಹಾಕಬೇಕು….. ನಂಗೆ ಮತ್ತೆ ಎಂಪಿ ಆಗೋ ಆಸೆಯಿಲ್ಲ….. ಬಂದರು ಕಟ್ಟಿಯೇ ತೀರುತ್ತೇನೆ….” ಎಂದೆಲ್ಲಾ ಅಭಿವೃದ್ಧಿ ಆಟಾಟೋಪ ಪ್ರದರ್ಶಿಸುತ್ತಿದ್ದಾನೆ.

ಮೀನುಗಾರರು ವಾರದಿಂದ ಮೀನುಗಾರಿಕೆ ಬಂದ್ ಮಾಡಿ ಧರಣಿ ಸತ್ಯಾಗ್ರಹ ಹೂಡುತ್ತಲೇ ಇದ್ದಾರೆ. ಶಾಸಕಿ ರೂಪಾಲಿ, ಸಂಸದ ಮಾಣಿಯ ಮಳ್ಳು ಮಾತುಗಾರಿಕೆಗೆ ನಗುತ್ತಿದ್ದಾರೆ. ಹೋರಾಟಗಾರರ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಿ ಸಮಸ್ಯೆ ಪರಿಹರಿಸಬೇಕಾಗಿದ್ದ ಮಂತ್ರಿ, ಸಂಸದ, ಶಾಸಕಿ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಬಂದರು ಅಧಿಕಾರಿಗಳು ಜನರ ಮುಂದೆ ಹೇಳೋದೇ ಒಂದು ಮಾಡೋದು ಮಾತ್ರ ಮತ್ತೊಂದು. ಬಂದರು ಅಧಿಕಾರಿಗಳು ತಾತ್ಕಾಲಿಕ ಮೀನು ಮಾರುಕಟ್ಟೆ ಹಿಂದಿನಿಂದ ಕಾಮಗಾರಿ ಮಾಡಲಾಗುತ್ತದೆ ಎಂದಿದ್ದರು. ಆದರೆ ಕೆಲಸ ಆಗುತ್ತಿರುವುದು ಬೀಚ್‍ನ ದಕ್ಷಿಣಕ್ಕಿರುವ ಪ್ಯಾರಾಗೋಲಾದ ಕಡೆಯಿಂದ. ಉತ್ತರ ಬದಿಯನ್ನು ಹೊಟೇಲು, ಗಾರ್ಡನ್ ಎಂದೆಲ್ಲಾ ಹಂಚಲಾಗಿದೆ. ಹೀಗಾಗಿ ಉಳಿದಿರುವುದು ಬರೀ 1 ಕಿ.ಮೀ ಬೀಚಷ್ಟೇ. ಇದರಲ್ಲಿ ಅರ್ಧ ಅಡೆಗೋಡೆಗೆ ಬಳಿಸಿದರೆ ಬಡ ಬೆಸ್ತರಿಗೆ ಮೀನುಗಾರಿಕೆಗೆ ಅವಕಾಶವಿಲ್ಲ; ವಾಕಿಂಗ್, ವಿಹಾರ ಸಾಧ್ಯವೂ ಇಲ್ಲ.

ಬಂದರು ಕಾಮಕಾರಿ ಏಕಪಕ್ಷೀಯವಾಗಿ ದಾದಾಗಿರಿಯಿಂದ ಆಡಳಿತಗಾರರು ನಡೆಸಿದ್ದಾರೆ. ಬಂದರಿನಿಂದಾಗುವ ಅರ್ಥಿಕ, ಸಾಮಾಜಿಕ ಪರಿಸರ ಪರಿಣಾಮಗಳ ಅಧ್ಯಯನವೇ ನಡೆಸಲಾಗಿಲ್ಲ. ಸಾರ್ವಜನಿಕರಿಗೆ ಉದ್ದೇಶಿತ ಬಂದರಿನ ಮಾಹಿತಿ ನೀಡಲಾಗುತ್ತಿಲ್ಲ. ಮಹತ್ವದ ಸಂಗತಿಯೆಂದರೆ, ಈ ಯೋಜನೆಗೆ ಸಿಆರ್‍ಜೆಡ್ ಸಮಿತಿಯ ಅನುಮತಿಯೇ ಸಿಕ್ಕಿಲ್ಲ. ಮರುಪರಿಶೀಲನೆಗೆ ಸಮಿತಿ ಬಂದರು ಇಲಾಖೆಗೆ ಸೂಚಿಸಿತ್ತು. ಬಂದರು ವಿಸ್ತರಣೆ ಎಂದರೆ, ದೇಶ-ವಿದೇಶದ ಬೃಹತ್ ಸರಕು ಸಾಗಾಣಿಕಾ ಹಡಗುಗಳು ಬಂದು-ಹೋಗುವ ತಾಣ. ಇಂಥ ವಾಣಿಜ್ಯ ಬಂದರಿನ ಮಗ್ಗುಲಲ್ಲಿ ಮೀನುಗಾರಿಕರ ಜೆಟ್ಟಿ ಇರಲು ಸಾಧ್ಯವೇ ಇಲ್ಲ. ವಾಣಿಜ್ಯ ಬಂದರಿನ ಸುತ್ತ ಮಜಬೂತಾದ ಆವರಣ ಗೋಡೆ, ಅದರ ಮೇಲೆ ತಂತಿ ಮುಳ್ಳಿನ ಬೇಲಿ ಹಾಕಲಾಗುತ್ತದೆ. ಸಾರ್ವಜನಿಕರ ಚಲನವಲನ. ಮೀನುಗಾರಿಕೆ ಸುತ್ತಲಿನ ಪ್ರದೇಶದಲ್ಲಿ ನಿಶೇಧಿಸಲಾಗುತ್ತದೆ. ಕಾರವಾರದ ಬಂದರು ವಿಸ್ತರಣೆಯಾದರೆ, ಬೈತ್ಕೋಲ್ ಮೀನುಗಾರಿಕಾ ಬಂದರಿಗೆ ಗಂಡಾಂತರ ಖಂಡಿತಾ.

ಪಶ್ಚಿಮ ಘಟ್ಟಗಳ ತಪ್ಪಲಲ್ಲಿರುವ ಕಾರವಾರದ 43 ಕಿ.ಮೀ ಉದ್ದದ ಕಡಲತೀರದಲ್ಲಿ ನಿರ್ಧಿಷ್ಟ ಭಾಗಗಳಷ್ಟೇ ಮೀನುಗಾರಿಕೆ ಮತ್ತು ಮೀನುಗಾರಿಕ ವಾಸ್ತವ್ಯಕ್ಕೆ ಯೋಗ್ಯವಾದವುಗಳು. ಇದರಲ್ಲಿ 33 ಕಿ.ಮೀ ತೀರಪ್ರದೇಶ ನೌಕಾನೆಲೆಗೆ ಕೊಡುವಾಗ ಮೀನುಗಾರರನ್ನು ಒಕ್ಕಲೆಬ್ಬಿಸಲಾಗಿದೆ. ಈಗಿರುವ ವಾಣಿಜ್ಯ ಬಂದರಿಗಾಗಿ 1.5 ಕಿ.ಮೀ ಕಳೆದುಕೊಳ್ಳಲಾಗಿದೆ. ಇನ್ನೊಂದು ಕಿ.ಮೀ ಕಬಳಿಸಲು ಹೊಸ ಯೋಜನೆ ಬಾಯ್ತೆರೆದು ನಿಂತಿದೆ. ಪ್ರವಾಸೋದ್ಯಮದ ನೆಪದಲ್ಲಿ ಮುನ್ಸಿಪಾಲಿಟಿ ಗಾರ್ಡನ್, ರಾಕ್-ಗಾರ್ಡನ್, ಸಾಲುಮರದ ತಿಮ್ಮಕ್ಕ ಗಾರ್ಡನ್, ದೇವಭಾಗ ಜಂಗಲ್ ರೆಸಾರ್ಟ್, ತಿಳಮಾತಿ ಬೀಚ್, ಹೋಟೆಲ್, ರೆಸಾರ್ಟ್ ಲಾಬಿಗೆ ಹಂಚಿ ಮೀನುಗಾರರ ಆಶ್ರಯ-ಕಸಬು ತಪ್ಪಿಸಲಾಗಿದೆ. ಉಳಿದಿರುವ 3.5 ಕಿ.ಮೀ ತೀರ ಪ್ರದೇಶವನ್ನು 14,500 ಮೀನುಗಾರರ ಕುಟುಂಬಗಳು ಹಂಚಿಕೊಳ್ಳಬೇಕಿದೆ. ಅಲಿಗದ್ದಾ ತೀರದಲ್ಲಿ ದೋಣಿಗಳಿಡಲಿಕ್ಕೆ ಜಾಗವಿಲ್ಲ. ಭಾರತೀಯ ಕೋಸ್ಟ್ ಗಾರ್ಡ್, ಇಂಡಿಯನ್ ಆಯಿಲ್ ಕಂಪನಿಗಳು ಕಾರವಾರ ತೀರಕ್ಕೆ ಬರುವ ಯೋಜನೆಗಳ ಸರದಿಯಲ್ಲಿವೆ. ಬೆಸ್ತರ ಪಾಲಿಗೆ ಆಪದ್ಬಾಂಧವನಂತಿದ್ದ ಕಾರವಾರ ತೀರ ಪ್ರದೇಶವನ್ನೂ ವಾಣಿಜ್ಯ ಬಂದರು ವಿಸ್ತರಣೆಗೆ ಬಲಿಗೊಟ್ಟರೆ ಸ್ಥಳೀಯ ಮೀನುಗಾರರ ಪಾಡೇನು?

ಇದೆಲ್ಲ ಶಾಸಕಿ ರೂಪಾಲಿಯಮ್ಮ, ಅನಂತ್ಮಾಣಿಯ ಮತಾಂಧ ತಲೆಬುರುಡೆಗೆ ಅರ್ಥವಾಗುತ್ತಲ್ಲ. ಅಗತ್ಯವಿರುವ ಯಾವ ಸರ್ಕಾರಿ ಏಜೆನ್ಸಿಗಳ ಅನುಮತಿಯೂ ಇಲ್ಲದೆ ಅವಸರದಲ್ಲಿ ಶುರುವಾಗಿರುವ ಬಂದರು ಯೋಜನೆಯಿಂದ ಕಾರವಾರಿಗರಿಗೆ ಯಾವ ಲಾಭವೂ ಇಲ್ಲ. ಬಿಜೆಪಿಯ ಅಭಿವೃದ್ಧಿ ಪಂಡಿತರು ಉದ್ಯೋಗಾವಕಾಶವಿದೆ ಎಂದು ಬೊಂಬಾಡಾ ಬಜಾಯಿಸುತ್ತಿದ್ದಾರೆ. ಎಷ್ಟು ಉದ್ಯೋಗ? ಯಾವ ಉದ್ಯೋಗ? ಇದಕ್ಕೆಲ್ಲ ಉತ್ತರವಿಲ್ಲ. ಅಬ್ಬಬ್ಬಾ ಎಂದರೆ ಅಮಾಯಕರನ್ನು ಶೋಷಿಸುವ ಕೂಲಿ ಕೆಲಸ ಸಿಗಬಹುದು. ಬೃಹತ್ ಬಂದರಿನಲ್ಲಿ ಮಂಗಳೂರು-ಮುಂಬೈ ಬಂದರಿನಲ್ಲಾಗುವಂಥ ಭೂಗತ ಬಾನ್ಗಡಿ ಆಗಬಹುದು. ಸಣ್ಣ ಬಂದರಿರುವಾಗಲೇ ಅಂದಿನ ಶಾಸಕ ವಸಂತ ಅಸ್ನೋಟಿಕರ್ ಮತ್ತು ಭೂಗತ ದೊರೆ ದಿಲೀಪ್ ನಾಯ್ಕ್ ಆಮದನಿಗಾಗಿ ಹೊಡೆದಾಡಿ ಹತ್ಯೆಯಾಗಿದ್ದು ನೆನಪಿದೆಯಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...