Homeಕರ್ನಾಟಕಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

ಸಂಸದ-ಶಾಸಕಿ ಎಡವಟ್ಟು ಬಂದರು ಯೋಜನೆ ಭಂಡಾಟಕ್ಕೆ ಕೆಂಡವಾದ ಕಾರವಾರ!!

- Advertisement -
- Advertisement -

ಕಾರವಾರದ ವಾಣಿಜ್ಯ ಬಂದರು ವಿಸ್ತರಿಸುವ “ಸಂಕಷ್ಟ ಮಾಲಾ” ಯೋಜನೆ ತಮ್ಮ ಬದುಕನ್ನೇ ಬರ್ಬಾದ್ ಮಾಡಿಬಿಡುತ್ತದೆಂಬ ಆತಂಕದಲ್ಲಿ ಸ್ಥಳೀಯರೆಲ್ಲಾ ಒಂದಾಗಿ ಬೀದಿಗಿಳಿದಿದ್ದಾರೆ! ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಹೆಸರಿನ ಚಂದದ ಕಡಲ ತೀರ, ಬಡ ಬೆಸ್ತರ ತುತ್ತಿನಾಧಾರವಾಗಿದ್ದ ಕಸಬು ಮತ್ತು ಕಾರವಾರದ ನೆಮ್ಮದಿ-ಸ್ವಾಸ್ಥ್ಯ ಎಲ್ಲವನ್ನು ಒಂದೇ ಬಾರಿಗೆ ಆಪೋಷನ ಪಡೆಯುವ ಈ ಯೋಜನೆ ಬೇಡವೇ ಬೇಡವೆಂದು ಆಗ್ರಹಿಸಿ ಮೊನ್ನೆ (16-01-2020) ಹತ್ತಾರು ಸಾವಿರ ಮಂದಿ ಸೇರಿ ಕಾರವಾರ ಬಂದ್ ಮಾಡಿ ಆಳುವ ಖೂಳರಿಗೆ “ಸಣ್ಣ” ಎಚ್ಚರಿಕೆ ರವಾನಿಸಿದ್ದಾರೆ!! ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಶೋ ಮ್ಯಾಮ್ ಶಾಸಕಿ ರೂಪಾಲಿ ನಾಯ್ಕ್ ಒಣ ಪ್ರತಿಷ್ಠೆಯ ಸದ್ರಿ ಕಾಮಗಾರಿ ಕಾರವಾರ ತಾಲ್ಲೂಕಿನ ಅಷ್ಟೂ ಮೀನುಗಾರರನ್ನು ಜೀವನ್ಮರಣದ ಜಂಜಾಟವಾಗಿ ಕಾಡುತ್ತಿದೆ…

ಬರೋಬ್ಬರಿ 125 ಕೋಟಿ ರೂಪಾಯಿಗಳ ಈ ಪ್ರಾಜೆಕ್ಟ್ ಮೋದಿ ಮಾಮ ತನ್ನ ಪರಮಾಪ್ತ ಬಂದರು ದಂಧೆದಾರ ಆದಾನಿಗಾಗಿಯೇ ಕೈಗೆತ್ತಿಕೊಂಡಿರುವ “ಅಭಿವೃದ್ಧಿ” ಕಾಮಗಾರಿ. ಕೇಂದ್ರ-ರಾಜ್ಯ ಸರ್ಕಾರಗಳ ಸಹಭಾಗಿತ್ವದ ಕಾರವಾರ ಬಂದರು ವಿಸ್ತರಣೆಗೆ ಅಡಿಗಲ್ಲು ಹಾಕಿಸಿದ್ದು ಅಂದಿನ ಕಾಂಗ್ರೆಸ್ ಎಮ್ಮೆಲ್ಲೆ ಸತೀಶ್ ಸೈಲ್, ಪಕ್ಕಾ ಪಾಯ್ದೆಕೋರ ಉದ್ಯಮಿಯಾದ ಈ ಅದಿರು ಕಳ್ಳಸಾಗಾಣಿಕೆದಾರ ಅಂದು ಅದ್ಯಾವ ಕನಸು ಕಂಡಿದ್ದನೋ ಏನೋ? ಬಂದರು ಕಾಮಗಾರಿಯ ಅಲೆ ತಡೆಗೋಡೆಗೆ ಬೇಕಾದ ದೊಡ್ಡಗಾತ್ರದ ಶಿಲೆಕಲ್ಲು ಪೂರೈಕೆಯ ರಹಸ್ಯ ಬೇನಾಮಿ ಒಪ್ಪಂದ ಸೈಲ್ ಮಾಡಿಕೊಂಡಿದ್ದ. ಕಾಮಗಾರಿ ಗುತ್ತಿಗೆ ಪಡೆದಿರುವ ಮುಂಬೈನ ಡಿವಿಪಿ ಇನ್ಫ್ರಾ ಪ್ರಾಜೆಕ್ಟ್‍ಸ್ ಪ್ರೈ.ಲಿ. ಕೆಲಸ ಶುರುಹಚ್ಚಿಕೊಂಡ ಎರಡೇ ದಿನದಲ್ಲಿ ನೂರಾರು ಲೋಡ್ ಕಲ್ಲು ಬೀಚ್‍ಗೆ ಬಂದು ಬಿದ್ದಿದೆ. ಬಂದರು ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆರಂಭಿಸಿದ ಕಾಮಗಾರಿ ಹೇಗಿತ್ತೆಂದರೆ, ಮೀನುಗಾರರು ಶಾಶ್ವತವಾಗಿ ಹೊಟ್ಟೆಪಾಡಿನ ಸಮುದ್ರ ಕೃಷಿ ಮಾಡಲಾಗದಂತಿತ್ತು!!

ಕಾರವಾರದಲ್ಲಿ ಮೀನುಗಾರ ಸಂಕುಲ ರಾಜಕೀಯವಾಗಿ ನಿರ್ಣಾಯಕ. ಎಡವಟ್ಟು ಕಾಮಗಾರಿ ಕಂಡದ್ದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಸ್ತರೆಲ್ಲಾ ಅಹೋರಾತ್ರಿ ಪ್ರತಿಭಟನೆ ನಡೆಸತೊಡಗಿದರು. ಪೇಚಿಗೆ ಸಿಲುಕಿದ ಮಾಜಿ ಶಾಸಕ ಸೈಲ್ ತಕ್ಷಣ ಬಣ್ಣ ಬದಲಿಸಿಬಿಟ್ಟ. ಊರವರ ಹಿತೈಷಿ ಎಂಬಂತೆ ಪೋಸು ಕೊಡುತ್ತಾ ಬಂದರು ಕಾಮಗಾರಿ ವಿರುದ್ಧ ಹೇಳಿಕೆ ಒಗಾಯಿಸತೊಡಗಿದೆ. ಪ್ರತಿಭಟನಾಕಾರರ ಮಧ್ಯೆ ಸಾವಕಾಶವಾಗಿ ತೂರಿಕೊಂಡು ಬೀಚನ್ನು ಬೆಳಗ್ಗೆಯ ವಾಕಿಂಗ್, ಸಂಜೆಯ ವಿಹಾರ, ನೆಮ್ಮದಿಗಾಗಿ ಬಳಸುತ್ತಿದ್ದ ಜನರೂ ಮೀನುಗಾರರ ಜತೆ ಸೇರಿಕೊಂಡು ಪ್ರತಿಭಟನೆ ಬಿರುಸುಗೊಳಿಸಿದರು. ಬಂದರು ವಿರೋಧಿ ಹೋರಾಟಗಾರರ ಆಕ್ರೋಶ ತಮ್ಮ ನೋವಿಗೆ ಸ್ಪಂದಿಸದ ಸಂಸದ ಅನಂತ್ಮಾಣಿ ಮತ್ತು ಶಾಸಕಿ ರೂಪಾಲಿ ಮೇಲೆ ಕೇಂದ್ರೀಕೃತವಾಗಿತ್ತು. ಈ ಇಬ್ಬರು ನಾಲಾಯಕ್ ಜನಪ್ರತಿನಿಧಿಗಳ ಫೋಟೋಕ್ಕೆ ಪ್ರತಿಭಟನಾಕಾರರು ಚಪ್ಪಲಿ ಹಾರಹಾಕಿ, ಸಗಣಿ ಮೆತ್ತಿ ಸಹಜ ಸಿಟ್ಟು ವ್ಯಕ್ತಡಿಸಿದ್ದರು.

ಮೀನುಗಾರರ ಹುಡುಗ-ಹೊನ್ನಾವರದ ಪರೇಶ್ ಮೇಸ್ತನ ಸಂಶಯಾಸ್ಪದ ಸಾವನ್ನು ಸಾಬರಿಂದಾದ ಕೊಲೆ ಎಂದು ಬಿಂಬಿಸಿದ ಬಿಜೆಪಿಯ ಕೋಮು ರಾಜಕಾರಣದ ಫಲಾನುಭವಿಯಾದ ರೂಪಾಲಿಗೆ ಮೀನುಗಾರರ ತಿರುಗಿಬಿದ್ದದ್ದು ನಿದ್ದೆಗೆಡಿಸಿಬಿಟ್ಟಿತ್ತು. ಕಾರವಾರ ಬಂದ್ ದಿನ ರೂಪಾಲಿಗೆ ಕ್ಷೇತ್ರದಲ್ಲಿರುವ ಧೈರ್ಯವೇ ಇರಲಿಲ್ಲ. ಹಾಗಾಗಿ ಆಕೆ ರಾತ್ರೋರಾತ್ರಿ ಬೆಂಗಳೂರಿಗೆ ಓಡಿದ್ದಾರೆ. ಇತ್ತ ಜನರು ಪ್ರತಿಭಟನಾ ರ್ಯಾಲಿ ಹೊರಟಿದ್ದರೆ, ಅತ್ತ ಬೆಂಗಳೂರಲ್ಲಿ ರೂಪಾಲಿ ಮೇಡಮ್ಮು ಮೀನುಗಾರರ ಮಂತ್ರಿ ಶ್ರೀನಿವಾಸ ಪೂಜಾರಿ ಜತೆ ಕುಳಿತು ಪತ್ರಿಕಾಗೋಷ್ಠಿ ನಡೆಸುತ್ತಿದ್ದರು. ಬಂದರ ವಿಸ್ತರಣೆಯಿಂದ ಮೀನುಗಾರರಿಗೆ ತೊಂದರೆ ಆಗುವುದಿಲ್ಲ, ಬೀಚ್ ಬಂದರಿಗೆ ಬಳಕೆಯಾಗುವುದಿಲ್ಲ. ಮುಗ್ಧ ಮೀನುಗಾರರನ್ನು ಮಾಜಿ ಶಾಸಕರಾದ ಸೈಲ್ ಮತ್ತ ಅಸ್ನೋಟಿಕರ್ ದಾರಿ ತಪ್ಪಿಸುತ್ತಿದ್ದಾರೆಂದು ಪೂಜಾರಿ-ರೂಪಾಲಿ ಒಂದೇ ಸ್ವರದಲ್ಲಿ ಯುಗಳ ಆಲಾಪ ಮಾಡಿದ್ದಾರೆ. ಸುಳ್ಳು ಹೇಳಿ ತಮ್ಮ ಜನದ್ರೋಹ ಮುಚ್ಚಿಡಲು ಹವಣಿಸಿದ್ದಾರೆ.

ವಾಸ್ತವವೆಂದರೆ, ಬಂದರು ವಿರೋಧಿಗಳು ಸೈಲ್-ಅಸ್ನೋಟಿಕರ್‍ನನ್ನೂ ನಂಬುತ್ತಿಲ್ಲ. ಈ ಇಬ್ಬರು ಸಮಯಸಾಧಕರನ್ನು ಹೊರಗಿಟ್ಟೇ ಜನರು ಕಟ್ಟಿದ ಅಖಂಡ ಹೋರಾಟವಿದು. ಸೈಲ್-ಅಸ್ನೋಟಿಕರ್ ತಮ್ಮ ಅಸ್ತಿತ್ವಕ್ಕಾಗಿ ಹೋರಾಟದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಷ್ಟೇ. ಆದರೆ ಜನರು ಮಾತ್ರ ಈ ಮಾಜಿದ್ವಯರಿಗೆ ಸಭೆಗಳಲ್ಲಿ ಭಾಷಣ ಮಾಡಲಿಕ್ಕೂ ಬಿಡುತ್ತಿಲ್ಲ. ಕಾರವಾರಕ್ಕೆ ಬಂದು ಜನರಿಗೆ ಮುಖ ತೋರಿಸುವ ನೈತಿಕ ಧೈರ್ಯವೂ ಇಲ್ಲದೆ ಚಡಪಡಿಸುತ್ತಿರುವ ಶಾಸಕಿಯಮ್ಮ ಒಂದೆಡೆಯಾದರೆ, ಮತ್ತೊಂದೆಡೆ ಹಲ್ಲೆಕೋರ ಮನಸ್ಥಿತಿಯ ಸಂಸದ ಅನಂತ್ಮಾಣಿ ಬಂದರು ವಿರೋಧಿಗಳನ್ನು ಆರಂಭಿದಲ್ಲೇ ಹೊಸಕಿ ಹಾಕಬೇಕು….. ನಂಗೆ ಮತ್ತೆ ಎಂಪಿ ಆಗೋ ಆಸೆಯಿಲ್ಲ….. ಬಂದರು ಕಟ್ಟಿಯೇ ತೀರುತ್ತೇನೆ….” ಎಂದೆಲ್ಲಾ ಅಭಿವೃದ್ಧಿ ಆಟಾಟೋಪ ಪ್ರದರ್ಶಿಸುತ್ತಿದ್ದಾನೆ.

ಮೀನುಗಾರರು ವಾರದಿಂದ ಮೀನುಗಾರಿಕೆ ಬಂದ್ ಮಾಡಿ ಧರಣಿ ಸತ್ಯಾಗ್ರಹ ಹೂಡುತ್ತಲೇ ಇದ್ದಾರೆ. ಶಾಸಕಿ ರೂಪಾಲಿ, ಸಂಸದ ಮಾಣಿಯ ಮಳ್ಳು ಮಾತುಗಾರಿಕೆಗೆ ನಗುತ್ತಿದ್ದಾರೆ. ಹೋರಾಟಗಾರರ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಿ ಸಮಸ್ಯೆ ಪರಿಹರಿಸಬೇಕಾಗಿದ್ದ ಮಂತ್ರಿ, ಸಂಸದ, ಶಾಸಕಿ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಬಂದರು ಅಧಿಕಾರಿಗಳು ಜನರ ಮುಂದೆ ಹೇಳೋದೇ ಒಂದು ಮಾಡೋದು ಮಾತ್ರ ಮತ್ತೊಂದು. ಬಂದರು ಅಧಿಕಾರಿಗಳು ತಾತ್ಕಾಲಿಕ ಮೀನು ಮಾರುಕಟ್ಟೆ ಹಿಂದಿನಿಂದ ಕಾಮಗಾರಿ ಮಾಡಲಾಗುತ್ತದೆ ಎಂದಿದ್ದರು. ಆದರೆ ಕೆಲಸ ಆಗುತ್ತಿರುವುದು ಬೀಚ್‍ನ ದಕ್ಷಿಣಕ್ಕಿರುವ ಪ್ಯಾರಾಗೋಲಾದ ಕಡೆಯಿಂದ. ಉತ್ತರ ಬದಿಯನ್ನು ಹೊಟೇಲು, ಗಾರ್ಡನ್ ಎಂದೆಲ್ಲಾ ಹಂಚಲಾಗಿದೆ. ಹೀಗಾಗಿ ಉಳಿದಿರುವುದು ಬರೀ 1 ಕಿ.ಮೀ ಬೀಚಷ್ಟೇ. ಇದರಲ್ಲಿ ಅರ್ಧ ಅಡೆಗೋಡೆಗೆ ಬಳಿಸಿದರೆ ಬಡ ಬೆಸ್ತರಿಗೆ ಮೀನುಗಾರಿಕೆಗೆ ಅವಕಾಶವಿಲ್ಲ; ವಾಕಿಂಗ್, ವಿಹಾರ ಸಾಧ್ಯವೂ ಇಲ್ಲ.

ಬಂದರು ಕಾಮಕಾರಿ ಏಕಪಕ್ಷೀಯವಾಗಿ ದಾದಾಗಿರಿಯಿಂದ ಆಡಳಿತಗಾರರು ನಡೆಸಿದ್ದಾರೆ. ಬಂದರಿನಿಂದಾಗುವ ಅರ್ಥಿಕ, ಸಾಮಾಜಿಕ ಪರಿಸರ ಪರಿಣಾಮಗಳ ಅಧ್ಯಯನವೇ ನಡೆಸಲಾಗಿಲ್ಲ. ಸಾರ್ವಜನಿಕರಿಗೆ ಉದ್ದೇಶಿತ ಬಂದರಿನ ಮಾಹಿತಿ ನೀಡಲಾಗುತ್ತಿಲ್ಲ. ಮಹತ್ವದ ಸಂಗತಿಯೆಂದರೆ, ಈ ಯೋಜನೆಗೆ ಸಿಆರ್‍ಜೆಡ್ ಸಮಿತಿಯ ಅನುಮತಿಯೇ ಸಿಕ್ಕಿಲ್ಲ. ಮರುಪರಿಶೀಲನೆಗೆ ಸಮಿತಿ ಬಂದರು ಇಲಾಖೆಗೆ ಸೂಚಿಸಿತ್ತು. ಬಂದರು ವಿಸ್ತರಣೆ ಎಂದರೆ, ದೇಶ-ವಿದೇಶದ ಬೃಹತ್ ಸರಕು ಸಾಗಾಣಿಕಾ ಹಡಗುಗಳು ಬಂದು-ಹೋಗುವ ತಾಣ. ಇಂಥ ವಾಣಿಜ್ಯ ಬಂದರಿನ ಮಗ್ಗುಲಲ್ಲಿ ಮೀನುಗಾರಿಕರ ಜೆಟ್ಟಿ ಇರಲು ಸಾಧ್ಯವೇ ಇಲ್ಲ. ವಾಣಿಜ್ಯ ಬಂದರಿನ ಸುತ್ತ ಮಜಬೂತಾದ ಆವರಣ ಗೋಡೆ, ಅದರ ಮೇಲೆ ತಂತಿ ಮುಳ್ಳಿನ ಬೇಲಿ ಹಾಕಲಾಗುತ್ತದೆ. ಸಾರ್ವಜನಿಕರ ಚಲನವಲನ. ಮೀನುಗಾರಿಕೆ ಸುತ್ತಲಿನ ಪ್ರದೇಶದಲ್ಲಿ ನಿಶೇಧಿಸಲಾಗುತ್ತದೆ. ಕಾರವಾರದ ಬಂದರು ವಿಸ್ತರಣೆಯಾದರೆ, ಬೈತ್ಕೋಲ್ ಮೀನುಗಾರಿಕಾ ಬಂದರಿಗೆ ಗಂಡಾಂತರ ಖಂಡಿತಾ.

ಪಶ್ಚಿಮ ಘಟ್ಟಗಳ ತಪ್ಪಲಲ್ಲಿರುವ ಕಾರವಾರದ 43 ಕಿ.ಮೀ ಉದ್ದದ ಕಡಲತೀರದಲ್ಲಿ ನಿರ್ಧಿಷ್ಟ ಭಾಗಗಳಷ್ಟೇ ಮೀನುಗಾರಿಕೆ ಮತ್ತು ಮೀನುಗಾರಿಕ ವಾಸ್ತವ್ಯಕ್ಕೆ ಯೋಗ್ಯವಾದವುಗಳು. ಇದರಲ್ಲಿ 33 ಕಿ.ಮೀ ತೀರಪ್ರದೇಶ ನೌಕಾನೆಲೆಗೆ ಕೊಡುವಾಗ ಮೀನುಗಾರರನ್ನು ಒಕ್ಕಲೆಬ್ಬಿಸಲಾಗಿದೆ. ಈಗಿರುವ ವಾಣಿಜ್ಯ ಬಂದರಿಗಾಗಿ 1.5 ಕಿ.ಮೀ ಕಳೆದುಕೊಳ್ಳಲಾಗಿದೆ. ಇನ್ನೊಂದು ಕಿ.ಮೀ ಕಬಳಿಸಲು ಹೊಸ ಯೋಜನೆ ಬಾಯ್ತೆರೆದು ನಿಂತಿದೆ. ಪ್ರವಾಸೋದ್ಯಮದ ನೆಪದಲ್ಲಿ ಮುನ್ಸಿಪಾಲಿಟಿ ಗಾರ್ಡನ್, ರಾಕ್-ಗಾರ್ಡನ್, ಸಾಲುಮರದ ತಿಮ್ಮಕ್ಕ ಗಾರ್ಡನ್, ದೇವಭಾಗ ಜಂಗಲ್ ರೆಸಾರ್ಟ್, ತಿಳಮಾತಿ ಬೀಚ್, ಹೋಟೆಲ್, ರೆಸಾರ್ಟ್ ಲಾಬಿಗೆ ಹಂಚಿ ಮೀನುಗಾರರ ಆಶ್ರಯ-ಕಸಬು ತಪ್ಪಿಸಲಾಗಿದೆ. ಉಳಿದಿರುವ 3.5 ಕಿ.ಮೀ ತೀರ ಪ್ರದೇಶವನ್ನು 14,500 ಮೀನುಗಾರರ ಕುಟುಂಬಗಳು ಹಂಚಿಕೊಳ್ಳಬೇಕಿದೆ. ಅಲಿಗದ್ದಾ ತೀರದಲ್ಲಿ ದೋಣಿಗಳಿಡಲಿಕ್ಕೆ ಜಾಗವಿಲ್ಲ. ಭಾರತೀಯ ಕೋಸ್ಟ್ ಗಾರ್ಡ್, ಇಂಡಿಯನ್ ಆಯಿಲ್ ಕಂಪನಿಗಳು ಕಾರವಾರ ತೀರಕ್ಕೆ ಬರುವ ಯೋಜನೆಗಳ ಸರದಿಯಲ್ಲಿವೆ. ಬೆಸ್ತರ ಪಾಲಿಗೆ ಆಪದ್ಬಾಂಧವನಂತಿದ್ದ ಕಾರವಾರ ತೀರ ಪ್ರದೇಶವನ್ನೂ ವಾಣಿಜ್ಯ ಬಂದರು ವಿಸ್ತರಣೆಗೆ ಬಲಿಗೊಟ್ಟರೆ ಸ್ಥಳೀಯ ಮೀನುಗಾರರ ಪಾಡೇನು?

ಇದೆಲ್ಲ ಶಾಸಕಿ ರೂಪಾಲಿಯಮ್ಮ, ಅನಂತ್ಮಾಣಿಯ ಮತಾಂಧ ತಲೆಬುರುಡೆಗೆ ಅರ್ಥವಾಗುತ್ತಲ್ಲ. ಅಗತ್ಯವಿರುವ ಯಾವ ಸರ್ಕಾರಿ ಏಜೆನ್ಸಿಗಳ ಅನುಮತಿಯೂ ಇಲ್ಲದೆ ಅವಸರದಲ್ಲಿ ಶುರುವಾಗಿರುವ ಬಂದರು ಯೋಜನೆಯಿಂದ ಕಾರವಾರಿಗರಿಗೆ ಯಾವ ಲಾಭವೂ ಇಲ್ಲ. ಬಿಜೆಪಿಯ ಅಭಿವೃದ್ಧಿ ಪಂಡಿತರು ಉದ್ಯೋಗಾವಕಾಶವಿದೆ ಎಂದು ಬೊಂಬಾಡಾ ಬಜಾಯಿಸುತ್ತಿದ್ದಾರೆ. ಎಷ್ಟು ಉದ್ಯೋಗ? ಯಾವ ಉದ್ಯೋಗ? ಇದಕ್ಕೆಲ್ಲ ಉತ್ತರವಿಲ್ಲ. ಅಬ್ಬಬ್ಬಾ ಎಂದರೆ ಅಮಾಯಕರನ್ನು ಶೋಷಿಸುವ ಕೂಲಿ ಕೆಲಸ ಸಿಗಬಹುದು. ಬೃಹತ್ ಬಂದರಿನಲ್ಲಿ ಮಂಗಳೂರು-ಮುಂಬೈ ಬಂದರಿನಲ್ಲಾಗುವಂಥ ಭೂಗತ ಬಾನ್ಗಡಿ ಆಗಬಹುದು. ಸಣ್ಣ ಬಂದರಿರುವಾಗಲೇ ಅಂದಿನ ಶಾಸಕ ವಸಂತ ಅಸ್ನೋಟಿಕರ್ ಮತ್ತು ಭೂಗತ ದೊರೆ ದಿಲೀಪ್ ನಾಯ್ಕ್ ಆಮದನಿಗಾಗಿ ಹೊಡೆದಾಡಿ ಹತ್ಯೆಯಾಗಿದ್ದು ನೆನಪಿದೆಯಾ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...