Homeಕರ್ನಾಟಕಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

ಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

- Advertisement -
- Advertisement -

ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕೇವಲ ಟಿಕೆಟ್‌ ಗಿಟ್ಟಿಸುವುದಕ್ಕಾಗಿ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಲ್ಲ. ಬದಲಿಗೆ ಅಂಬೇಡ್ಕರ್‌ ಮತ್ತು ಗಾಂಧಿ ಬಗೆಗಿನ ದ್ವೇಷ ಆರ್‌ಎಸ್‌ಎಸ್‌ ವ್ಯಕ್ತಿಗಳ ರಕ್ತದಲ್ಲಿಯೇ ಅಂತರ್ಗತವಾಗಿದೆ ಎಂದು ಚಿಂತಕ ಸುಧೀರ್‌ ಕುಮಾರ್‌ ಮುರೊಳ್ಳಿ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮಂಗಳವಾರ ಹಮ್ಮಿಕೊಂಡಿದ್ದ ‘ಕರ್ನಾಟಕ ಪಣ–ನಾಡ ಅರಿವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಆರಂಭದಲ್ಲಿ ನಾವೆಲ್ಲರೂ ಆರ್‌ಎಸ್‌ಎಸ್‌ನ ಕಾಲಾಳುಗಳಾಗಿದ್ದೆವು. ಮೆದುಳಿನ ಭಾಗವಾಗಿ ಎಂ.ಜಿ ಹೆಗ್ಡೆಯವರು, ಲಕ್ಷ್ಮೀಶ ಗಬ್ಬಲಡ್ಕ ಕೆಲಸ ಮಾಡಿದರು. ಆದರೆ, ಆರ್‌ಎಸ್‌ಎಸ್‌ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವುದಿಲ್ಲ. ನಮ್ಮ ಧರ್ಮದ ವಕ್ತಾರರು, ಧರ್ಮ ರಕ್ಷಕರು ಅವರಲ್ಲ ಎಂಬುವುದು ತಿಳಿದು ಅದರಿಂದ ಹೊರಬಂದೆವು” ಎಂದರು.

“ನಾವು ಭಾರತೀಯರು ಪ್ರಪಂಚದ ಎಲ್ಲರನ್ನೂ ಸ್ವೀಕರಿಸಿದ್ದೇವೆ. ಇಲ್ಲಿನ ಶ್ರಮಿಕರು, ಮಹಿಳೆಯರು, ರೈತರು ನಮ್ಮ ಪಾಲಿನ ಭಾರತಾಂಬೆ ಆಗಿದ್ದಾರೆ. ಇವರು ಯಾರೂ ಆರ್‌ಎಸ್‌ಎಸ್‌ನವರಿಗೆ ಬೇಕಿಲ್ಲ. ಕೇವಲ ಭಾರತಾಂಬೆಯ ಫೋಟೊ ತೋರಿಸುವುದು ಮಾತ್ರ ಆರ್‌ಎಸ್‌ಎಸ್‌ನ ದೇಶಭಕ್ತಿ” ಎಂದು ಟೀಕಿಸಿದರು.

“ಏನಾದರೂ ಅನ್ಯಾಯ ನಡೆದರೆ ನಾವು ಅಯ್ಯೋ ರಾಮನೇ, ಅಯ್ಯೋ ಶಿವನೆ ಎಂದು ಹೇಳುತ್ತೇವೆ. ಇದು ನಮ್ಮ ಧರ್ಮ. ಆದರೆ ಇನ್ನೊಬ್ಬರ ವಿರುದ್ಧ ದ್ವೇಷ ಸಾಧಿಸಲು ಘೋಷಣೆ ಕೂಗಿಸಲು ಮಾತ್ರ ಆರ್‌ಎಸ್‌ಎಸ್‌ ರಾಮನ ಹೆಸರು ಬಳಸಿಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

“ಆರ್‌ಎಸ್‌ಎಸ್‌ ಹುಟ್ಟಿ ಕೇವಲ 99 ವರ್ಷ ಆಗಿದೆ. ಆದರೆ ನಮ್ಮ ಕರ್ನಾಟಕಕ್ಕೆ ಹಲವು ಶತಮಾನಗಳ ಇತಿಹಾಸವಿದೆ. ಈ ಆರ್‌ಎಸ್‌ಎಸ್‌ನ ಇಡೀ ವಿಚಾರಧಾರೆಗೆ ನಮ್ಮ ಕರ್ನಾಟಕ ಹಿಂದಿನಿಂದಲೂ ಮುಖಾಮುಖಿಯಾಗಿದೆ. ಸಾವಿರಾರು ವರ್ಷಗಳಿಂದ ಮನುಷ್ಯತ್ವವೇ ಮುಖ್ಯ ಎಂದು ಕನ್ನಡ ಪರಂಪರೆ ಹೇಳಿದೆ. ಕನ್ನಡದ ಪಂಪ ಮನುಷ್ಯ ಜಾತಿ ತಾನೋಂದೆ ವಲಂ ಎಂದರು. ಕಲಬೇಡ, ಕೊಲಬೇಡ ಎಂದು ಬಸವಣ್ಣ ಹೇಳಿದರು. ಅಂಬೇಡ್ಕರ್‌ ಸಂವಿಧಾನ, ಕನಕದಾಸರ ತತ್ವಗಳು ಈ ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ಸಂಪೂರ್ಣ ತದ್ವಿರುದ್ದವಾಗಿರುವುದನ್ನು ಗಮನಿಸಬೇಕು” ಎಂದರು.

“ಭಾರತದ ಮಣ್ಣಿನ ಮಗ ಅಂಬೇಡ್ಕರ್‌ ಕೊಟ್ಟ ಸಂವಿಧಾನ ನಮಗೆ ದಾರಿ ದೀಪವಾಗಿದೆ. ಕನ್ನಡದ ನೆಲ ಅಂಬೇಡ್ಕರ್‌ ಮತ್ತು ಗಾಂಧಿಯನ್ನು ಸ್ವೀಕಾರ ಮಾಡಿಕೊಂಡಿದೆ. ಆದರೆ, ಆರ್‌ಎಸ್‌ಎಸ್‌ನವರಿಗೆ ಅಂಬೇಡ್ಕರ್‌, ಗಾಂಧಿ ಮೇಲೆ ದ್ವೇಷ ಇದೆ. ಅವರು ಪಠ್ಯದಲ್ಲಿ ಕುವೆಂಪು ಅವರನ್ನು ತಿರುಚಿ ಅಪಮಾನ ಮಾಡಿದವರು. ಏಕೆಂದರೆ ಕನ್ನಡದ ಮಣ್ಣಿನ ಮಗ ಕುವೆಂಪು ಅವರಿಗೆ ಬೇಡ” ಎಂದು ಹೇಳಿದರು.

“ಏಕ ಅನ್ನುವುದೇ ಅವಿವೇಕ, ಅದು ವಿದೇಶಿ ಸಂಸ್ಕೃತಿಯಾಗಿದೆ. ಭಾರತ ಅನೇಕವಾದುದು. ಅನೇಕವಾದುದ್ದನ್ನು ವಿರೋಧ ಮಾಡುವುದೇ ಆರ್‌ಎಸ್‌ಎಸ್‌ ತಂತ್ರ. ಆದರೆ ವಿವಿಧತೆಯಲ್ಲಿ ಏಕತೆ, ಭಾರತದ ರಾಷ್ಟ್ರಧ್ವಜ, ಕನ್ನಡ ಧ್ವಜ ನಮ್ಮ ಅಸ್ಮಿತೆ” ಎಂದರು.

“ವಿಶಾಲ ಹಿಂದೂ ಧರ್ಮವನ್ನು ಕಟ್ಟುತ್ತೇವೆ. ವಿಶ್ವವ್ಯಾಪಕವಾದುದ್ದನ್ನು ಕಟ್ಟುತ್ತೇವೆ ಎನ್ನುವ ನೀವು ಹೆಡಗೇವಾರ್‌, ಗೋಳ್ವಾಕರ್‌, ಸಾವರ್ಕರ್‌ರನ್ನು ಆರಾಧಿಸುತ್ತೀರಿ. ನಿಜವಾದ ಆಧ್ಯಾತ್ಮ ನಾಯಕರಾದ ರಾಮಕೃಷ್ಣ ಪರಮಹಂಸ, ವಿವೇಕಾನಂದ, ಕುವೆಂಪು ರವರನ್ನು ವಿರೋಧಿಸುತ್ತೀರಿ” ಎಂದು ಕಿಡಿಕಾರಿದರು.

ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ – ನಿಕೇತ್‌ ರಾಜ್‌ ಮೌರ್ಯ

“ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ. ನಾವು ಉಪನಿಷತ್ತುಗಳ ವಿರೋಧಿಗಳಲ್ಲ, ದಾಸರು, ಶರಣರು ಸೂಫಿಗಳು ಧರ್ಮವನ್ನು ಅರಿತಿದ್ದರು. ನಾನು ನೀನು ಬೇರೆಯಲ್ಲ, ಒಂದೇ ಎಂಬ ಅರಿವು ಆಳವಾಗಿ ಯಾರಿಗೂ ಮೂಡುತ್ತೋ ಅವರು ಮಾತ್ರ ಧರ್ಮ ಅರ್ಥವಾಗುತ್ತದೆ. ಇದು ಆರ್‌ಎಸ್‌ಎಸ್‌ನವರಿಗೆ ಸಾಧ್ಯವಿಲ್ಲ” ಎಂದು ಯುವ ವಾಗ್ಮಿ ನಿಕೇತ್‌ ರಾಜ್‌ ಮೌರ್ಯ ಹೇಳಿದರು.

“ಈ ಸಭೆಯಲ್ಲಿ ಭಾರಿಸಿದ ಗಂಟೆ ನನ್ನದೇ ಸರಿ, ಬೇರೆಯದೆಲ್ಲವೂ ತಪ್ಪು ಎನ್ನುವ ಅಲ್ಪ ಮತಿಗಳಿಗೆ ಸಾವಿನ ಕರೆಗಂಟೆಯಾಗಬೇಕು ಎಂದು ಚಿಕಾಗೋ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಸಾರಿದರು. ಭಾರತ ದೇಶದ ಆಧ್ಯಾತ್ಮ ಪ್ರತಿನಿಧಿಯಾಗಿದ್ದ ಅವರು ಅಲ್ಲಿ ನೆರೆದಿದ್ದ ವಿಭಿನ್ನ ಸಂಸ್ಕೃತಿಯ ಜನರನ್ನು ಅವರನ್ನು ಸಹೋದರ, ಸಹೋದರಿಯರೆ ಎಂದು ಸಂಭೋದಿಸಿದರು. ಅಂತಹ ವಿವೇಕಾನಂದರ ವಿಚಾರಗಳನ್ನು ಈ ಆರ್‌ಎಸ್‌ಎಸ್‌ ಮಾತನಾಡುವುದಿಲ್ಲ” ಎಂದರು.

“ವಿವೇಕಾನಂದರು ಸನ್ಯಾಸ್ತತ್ವ ಸ್ವೀಕರಿಸಿದ್ದು ಕ್ರಿಸ್ತ ಹುಟ್ಟಿದ ದಿನ. ಶ್ರೀರಾಮಕೃಷ್ಣ ಪರಮಹಂಸರು ಜಗತ್ತಿನ ಎಲ್ಲಾ ಧರ್ಮಗಳ ಮೂಲಕವೂ ಮೋಕ್ಷ ಸಾಧಿಸಬಹುದು ಎಂದು ಸಾರಿದರು. ಜಿತೊ ಮತ್‌ ತತೋ ಪಂತ್‌ ಎಲ್ಲಾ ಮಾರ್ಗಗಳು ಒಂದೇ ಗುರಿಗೆ ಕರೆದುಕೊಂಡು ಹೋಗುತ್ತಿವೆ. ಒಟ್ಟಾಗಿ ಬಾಳುವುದನ್ನು ಕಲಿಸಿ ಎಂದು ಹೇಳಿದ್ದಾರೆ.  ಆದರೆ, ಅದನ್ನು ಆರ್‌ಎಸ್‌ಎಸ್‌ ಹೇಳುವುದಿಲ್ಲ” ಎಂದರು.

“ಹೊಟ್ಟೆ ಕಿಚ್ಚಿಗೆ ತಣ್ಣಿರ್‌ ಸುರಿಸು, ಒಟ್ಟಿಗೆ ಬಾಳುವ ತೆರದಲ್ಲಿ ಹರಸು’ ಎಂದು ಕುವೆಂಪು ಹೇಳಿದರು. ನಮ್ಮನ್ನು ಒಡೆಯುವ ಪ್ರಯತ್ನವೇ ಅಧರ್ಮ. ನಮ್ಮನ್ನು ಜೋಡಿಸುವುದೆ ಧರ್ಮ. ನಮ್ಮೊಳಗೆ ಇರುವ ಕೆಡುಕನ್ನು ಕಳೆದುಕೊಳ್ಳಲು ಇರುವ ಆದರ್ಶವೇ ರಾಮ. ಗಾಂಧಿಗಿಂತ ದೊಡ್ಡ ಹಿಂದೂ ಇರಲು ಸಾಧ್ಯವೇ? ಅವರನ್ನೇ ಹಿಂದೂ ವಿರೋಧಿ ಎಂದು ಈ ಆರ್‌ಎಸ್‌ಎಸ್‌ನವರು ಕರೆದರಲ್ಲ” ಎಂದು ಪ್ರಶ್ನಿಸಿದರು.

“ಪ್ರಶ್ನೆ ಮಾಡದೇ ಹೋದರೆ ಧಮಕ್ಕೆ ಅರ್ಥ ವಿದೆಯೇ? ದ್ವೇಷ ಮಾಡುವುದು ಧರ್ಮವಲ್ಲ, ದ್ವೇಷ ಕಲಿಸುವುದು ಧಾರ್ಮಿಕ ಸಂಘಟನೆಯಲ್ಲ. ಹಾಗಾಗಿ, ಗಾಂಧಿ, ಕುವೆಂಪು, ಕನಕದಾಸ, ದಾರ್ಶನಿಕರು, ಸೂಫಿಗಳು, ನಾರಾಯಣ ಗುರುಗಳು ಮಾತಾಡಿದ್ದು ನಮ್ಮ ಧರ್ಮ, ಆರ್‌ಎಸ್‌ಎಸ್‌ನದು ಅಧರ್ಮ” ಎಂದರು.

ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ: ಎಂ.ಜಿ ಹೆಗಡೆ

“ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ. ಏಕೆಂದರೆ, ಅದರಲ್ಲಿ ಬರೆದಿರುವುದು ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ವಿರುದ್ಧವಾಗಿದೆ” ಎಂದು ಎಂ.ಜಿ ಹೆಗಡೆ ಹೇಳಿದರು.

“ಯಾರೂ ಕೂಡ ಶ್ರೇಷ್ಟರಲ್ಲ, ಯಾರೂ ಕನಿಷ್ಟರಲ್ಲ ಎಂದು ಉಪನಿಷತ್ತು ಹೇಳುತ್ತದೆ. ಇವೆಲ್ಲವನ್ನೂ ಮೂಲೆಗೆ ಸರಿಸಿ, ಬದಿಗೆ ಇಟ್ಟರು. ಉಪನಿಷತ್ತು ಇರುವುದು ಪ್ರಶ್ನೆಗಳ ಆಧಾರದ ಮೇಲೆ. ಯಮನ ಹತ್ತಿರ ಹೋಗಿ ನಚಿಕೇತ ಪ್ರಶ್ನೆ ಕೇಳುತ್ತಾನೆ. ಪ್ರಶ್ನೆ ಕೇಳುವುದರಿಂದಲೇ ಚಿಂತನೆ ಹುಟ್ಟಿದ್ದು. ವೇದಗಳು ಹೇಳುವುದು ಪ್ರಕೃತಿಯ ಆರಾಧನೆ. ಇವು ಯಾವುವು ಆರ್‌ಎಸ್‌ಎಸ್‌ಗೆ ಬೇಕಿಲ್ಲ” ಎಂದರು.

“ಆರ್‌ಎಸ್‌ಎಸ್‌ನ ಯಾರೂ ಹಿಂದೂ ಧರ್ಮದ ಅಧ್ಯಯನ ಮಾಡುವುದಿಲ್ಲ. ನಮಸ್ತೆ ಸದಾ ವಸ್ತಲೇ ಎಂಬ ಪ್ರಾರ್ಥನೆ ಕೂಡ ಕೇಸರಿ ಶಾಲು ಹಾಕಿ ಓಡಾಡುವ ಕಾರ್ಯಕರ್ತರಿಗೆ ಬರುವುದಿಲ್ಲ. ರಾಜಕೀಯ ಚಳವಳಿಯಾಗಿ ಅದು ಬಂದಿದೆ” ಎಂದರು.

“ಹಿಂದೂ ಅಂದರೆ ನಮ್ಮದು ಆರಾಧನಾ ಪದ್ದತಿ. ಹಿಂದುತ್ವ ಎಂದರೆ ವ್ಯಾಪಾರ, ವ್ಯವಹಾರ ಮತ್ತು ಅಧಿಕಾರ ಅಷ್ಟೆ. ಹಿಂದೂ ನಾಯಕರು ಎನ್ನುವವರು ಈಗ 200 ಕೋಟಿ ಆಸ್ತಿಯನ್ನು ಹೇಗೆ ಮಾಡಿಕೊಂಡರು ಎಂದು ನನ್ನ ಜೊತೆಗೆ ಚರ್ಚೆಗೆ ಬರುವರೆ?” ಎಂದು ಸವಾಲು ಹಾಕಿದರು.

“ಸಮಾನವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವವರು ಹಿಂದು ಆಗಿರುತ್ತಾರೆ. ಆದರೆ ಬಡ, ಹಿಂದುಳಿದ, ದಲಿತ ಯುವಕರನ್ನು ಮುಂದೆ ತಳ್ಳಿ ಜೈಲು ಪಾಲು ಮಾಡುವವರು ಹಿಂದುತ್ವವಾದಿಗಳು. ಧರ್ಮದ ಸಮಸ್ಯೆ ಇಡೀ ಜಗತ್ತಿಗೆ ಇರಬೇಕು. ಬಡವರಿಗೆ ಮಾತ್ರ ಏಕೆ? ಇವರ ಕುರಿತು ಯುವಕರು ಎಚ್ಚರದಿಂದರಬೇಕು” ಎಂದರು.

ಹಿಂದೂ ಅನ್ನುವುದು ಮತ ಅಲ್ಲ, ಜೀವನ ಪ್ರವಾಹ : ಲಕ್ಷ್ಮೀಶ ಗಬ್ಬಲಡ್ಕ

“ನಮ್ಮೊಳಗಿನ ಬೆಂಕಿ ಕಡಿಮೆಯಾಗಿ ತಂಪು ಬಂದ ಕಾರಣ ನಾವು ಆರ್‌ಎಸ್‌ಎಸ್‌ನಿಂದ ಹೊರಗೆ ಬಂದಿದ್ದೇವೆ. ಆರ್‌ಎಸ್‌ಎಸ್‌ನಲ್ಲಿ ಆಟದ ಹೆಸರಿನಲ್ಲಿ, ಹಾಡಿನ, ಚಾರಣ, ಬೆಳದಿಂಗಳ ಊಟ, ಕಥೆ ಹೆಸರಿನಲ್ಲಿ ಒಟ್ಟು ಸೇರಿಸಿ ಒಂದು ಸಿದ್ದಾಂತ ತುಂಬಿಸುವ ಕೆಲಸ ಶುರು ಆಗುತ್ತದೆ. ಯೋಜಿತ ಕಾರ್ಯಪದ್ದತಿ ಇದೆ ಅಲ್ಲಿ. ಪೊಲೀಸ್‌, ನ್ಯಾಯಾಂಗದವರೆಗೂ ಇದು ಹಬ್ಬಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ವ್ಯವಸ್ಥಿತವಾದ ಕಾರ್ಯಯೋಜನೆ ನಮಗೆ ಬೇಕು. ನಾವು ಭಯ, ಅಸಹನೆ ಹುಟ್ಟಿಸದೇ ಭಾವ ಜಾಗೃತಿಯನ್ನು ಉಂಟು ಮಾಡಬೇಕು ಎಂದು ಅರಿತಿದ್ದೇನೆ. 15 ವರ್ಷದ ಹಿಂದೆ ಶಿರಾದಲ್ಲಿ ನನ್ನ ಭಾಷಣ ಕೇಳಿ ಜನ ಮುಸ್ಲಿಮರ ಅಂಗಡಿಗೆ ಬೆಂಕಿ ಹಾಕಿದರು. ಬೆಂಕಿ ಹಾಕಿದವರಿಗೆ ಚೂರಿ ಹಾಕಿದರು. ಆ ಪಾಪ ನನ್ನ ಮೇಲಿದೆ. ಅದಕ್ಕೆ ಪ್ರಾಯಶ್ಚಿತ ಪಟ್ಟುಕೊಳ್ಳಲು ನಾನು ಇವತ್ತು ಇಲ್ಲಿಗೆ ಬಂದಿದ್ದೇನೆ” ಎಂದರು.

ಭಾರತದ ಭವ್ಯ ಪರಂಪರೆಯನ್ನು ಕೇವಲ ಒಂದು ಮತಕ್ಕೆ ಸೀಮಿತಗೊಳಿಸಿ ಭವಿಷ್ಯದಲ್ಲಿ ಆತಂಕದಿಂದ ಬದುಕುವ ದುಸ್ಥಿತಿಯನ್ನು ಆರ್‌ಎಸ್‌ಎಸ್‌ ಸೃಷ್ಟಿಸಿದೆ. ಆರ್‌ಎಸ್‌ಎಸ್‌ ಹಿಂದ್ ಧರ್ಮದ ಪ್ರಾತಿನಿಧಿಕ ಸಂಸ್ಥೆ ಅಲ್ಲ. ಅದನ್ನು ತ್ಯಜಿಸಿ ಜಗತ್ತಿನ ಎಲ್ಲದರಿಂದ ಒಳ್ಳೇಯದನ್ನು ನಾವು ತೆಗೆದುಕೊಳ್ಳೋಣ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪಣ ಪ್ರತಿಜ್ಞೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ತೊರೆದು ಬಂದ ಎಲ್.ಎನ್‌ ಮುಕುಂದರಾಜ್‌, ಹನುಮೇಗೌಡರು ಮಾತನಾಡಿದರು. ಜಾಗೃತ ಕರ್ನಾಟಕ ರಾಜಶೇಖರ್‌ ಅಕ್ಕಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ.ವಾಸು ಹೆಚ್.ವಿ, ಹೇಮಾ ವೆಂಕಟ್‌, ಡಾ.ರಮೇಶ್‌ ಬೆಲ್ಲಂಕೊಂಡ, ಬಿ.ಸಿ ಬಸವರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ : 5,8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...