Homeಕರ್ನಾಟಕಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

ಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ: ಸುಧೀರ್‌ ಕುಮಾರ್‌ ಮುರೊಳ್ಳಿ

- Advertisement -
- Advertisement -

ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕೇವಲ ಟಿಕೆಟ್‌ ಗಿಟ್ಟಿಸುವುದಕ್ಕಾಗಿ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಲ್ಲ. ಬದಲಿಗೆ ಅಂಬೇಡ್ಕರ್‌ ಮತ್ತು ಗಾಂಧಿ ಬಗೆಗಿನ ದ್ವೇಷ ಆರ್‌ಎಸ್‌ಎಸ್‌ ವ್ಯಕ್ತಿಗಳ ರಕ್ತದಲ್ಲಿಯೇ ಅಂತರ್ಗತವಾಗಿದೆ ಎಂದು ಚಿಂತಕ ಸುಧೀರ್‌ ಕುಮಾರ್‌ ಮುರೊಳ್ಳಿ ಹೇಳಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮಂಗಳವಾರ ಹಮ್ಮಿಕೊಂಡಿದ್ದ ‘ಕರ್ನಾಟಕ ಪಣ–ನಾಡ ಅರಿವು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಆರಂಭದಲ್ಲಿ ನಾವೆಲ್ಲರೂ ಆರ್‌ಎಸ್‌ಎಸ್‌ನ ಕಾಲಾಳುಗಳಾಗಿದ್ದೆವು. ಮೆದುಳಿನ ಭಾಗವಾಗಿ ಎಂ.ಜಿ ಹೆಗ್ಡೆಯವರು, ಲಕ್ಷ್ಮೀಶ ಗಬ್ಬಲಡ್ಕ ಕೆಲಸ ಮಾಡಿದರು. ಆದರೆ, ಆರ್‌ಎಸ್‌ಎಸ್‌ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವುದಿಲ್ಲ. ನಮ್ಮ ಧರ್ಮದ ವಕ್ತಾರರು, ಧರ್ಮ ರಕ್ಷಕರು ಅವರಲ್ಲ ಎಂಬುವುದು ತಿಳಿದು ಅದರಿಂದ ಹೊರಬಂದೆವು” ಎಂದರು.

“ನಾವು ಭಾರತೀಯರು ಪ್ರಪಂಚದ ಎಲ್ಲರನ್ನೂ ಸ್ವೀಕರಿಸಿದ್ದೇವೆ. ಇಲ್ಲಿನ ಶ್ರಮಿಕರು, ಮಹಿಳೆಯರು, ರೈತರು ನಮ್ಮ ಪಾಲಿನ ಭಾರತಾಂಬೆ ಆಗಿದ್ದಾರೆ. ಇವರು ಯಾರೂ ಆರ್‌ಎಸ್‌ಎಸ್‌ನವರಿಗೆ ಬೇಕಿಲ್ಲ. ಕೇವಲ ಭಾರತಾಂಬೆಯ ಫೋಟೊ ತೋರಿಸುವುದು ಮಾತ್ರ ಆರ್‌ಎಸ್‌ಎಸ್‌ನ ದೇಶಭಕ್ತಿ” ಎಂದು ಟೀಕಿಸಿದರು.

“ಏನಾದರೂ ಅನ್ಯಾಯ ನಡೆದರೆ ನಾವು ಅಯ್ಯೋ ರಾಮನೇ, ಅಯ್ಯೋ ಶಿವನೆ ಎಂದು ಹೇಳುತ್ತೇವೆ. ಇದು ನಮ್ಮ ಧರ್ಮ. ಆದರೆ ಇನ್ನೊಬ್ಬರ ವಿರುದ್ಧ ದ್ವೇಷ ಸಾಧಿಸಲು ಘೋಷಣೆ ಕೂಗಿಸಲು ಮಾತ್ರ ಆರ್‌ಎಸ್‌ಎಸ್‌ ರಾಮನ ಹೆಸರು ಬಳಸಿಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

“ಆರ್‌ಎಸ್‌ಎಸ್‌ ಹುಟ್ಟಿ ಕೇವಲ 99 ವರ್ಷ ಆಗಿದೆ. ಆದರೆ ನಮ್ಮ ಕರ್ನಾಟಕಕ್ಕೆ ಹಲವು ಶತಮಾನಗಳ ಇತಿಹಾಸವಿದೆ. ಈ ಆರ್‌ಎಸ್‌ಎಸ್‌ನ ಇಡೀ ವಿಚಾರಧಾರೆಗೆ ನಮ್ಮ ಕರ್ನಾಟಕ ಹಿಂದಿನಿಂದಲೂ ಮುಖಾಮುಖಿಯಾಗಿದೆ. ಸಾವಿರಾರು ವರ್ಷಗಳಿಂದ ಮನುಷ್ಯತ್ವವೇ ಮುಖ್ಯ ಎಂದು ಕನ್ನಡ ಪರಂಪರೆ ಹೇಳಿದೆ. ಕನ್ನಡದ ಪಂಪ ಮನುಷ್ಯ ಜಾತಿ ತಾನೋಂದೆ ವಲಂ ಎಂದರು. ಕಲಬೇಡ, ಕೊಲಬೇಡ ಎಂದು ಬಸವಣ್ಣ ಹೇಳಿದರು. ಅಂಬೇಡ್ಕರ್‌ ಸಂವಿಧಾನ, ಕನಕದಾಸರ ತತ್ವಗಳು ಈ ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ಸಂಪೂರ್ಣ ತದ್ವಿರುದ್ದವಾಗಿರುವುದನ್ನು ಗಮನಿಸಬೇಕು” ಎಂದರು.

“ಭಾರತದ ಮಣ್ಣಿನ ಮಗ ಅಂಬೇಡ್ಕರ್‌ ಕೊಟ್ಟ ಸಂವಿಧಾನ ನಮಗೆ ದಾರಿ ದೀಪವಾಗಿದೆ. ಕನ್ನಡದ ನೆಲ ಅಂಬೇಡ್ಕರ್‌ ಮತ್ತು ಗಾಂಧಿಯನ್ನು ಸ್ವೀಕಾರ ಮಾಡಿಕೊಂಡಿದೆ. ಆದರೆ, ಆರ್‌ಎಸ್‌ಎಸ್‌ನವರಿಗೆ ಅಂಬೇಡ್ಕರ್‌, ಗಾಂಧಿ ಮೇಲೆ ದ್ವೇಷ ಇದೆ. ಅವರು ಪಠ್ಯದಲ್ಲಿ ಕುವೆಂಪು ಅವರನ್ನು ತಿರುಚಿ ಅಪಮಾನ ಮಾಡಿದವರು. ಏಕೆಂದರೆ ಕನ್ನಡದ ಮಣ್ಣಿನ ಮಗ ಕುವೆಂಪು ಅವರಿಗೆ ಬೇಡ” ಎಂದು ಹೇಳಿದರು.

“ಏಕ ಅನ್ನುವುದೇ ಅವಿವೇಕ, ಅದು ವಿದೇಶಿ ಸಂಸ್ಕೃತಿಯಾಗಿದೆ. ಭಾರತ ಅನೇಕವಾದುದು. ಅನೇಕವಾದುದ್ದನ್ನು ವಿರೋಧ ಮಾಡುವುದೇ ಆರ್‌ಎಸ್‌ಎಸ್‌ ತಂತ್ರ. ಆದರೆ ವಿವಿಧತೆಯಲ್ಲಿ ಏಕತೆ, ಭಾರತದ ರಾಷ್ಟ್ರಧ್ವಜ, ಕನ್ನಡ ಧ್ವಜ ನಮ್ಮ ಅಸ್ಮಿತೆ” ಎಂದರು.

“ವಿಶಾಲ ಹಿಂದೂ ಧರ್ಮವನ್ನು ಕಟ್ಟುತ್ತೇವೆ. ವಿಶ್ವವ್ಯಾಪಕವಾದುದ್ದನ್ನು ಕಟ್ಟುತ್ತೇವೆ ಎನ್ನುವ ನೀವು ಹೆಡಗೇವಾರ್‌, ಗೋಳ್ವಾಕರ್‌, ಸಾವರ್ಕರ್‌ರನ್ನು ಆರಾಧಿಸುತ್ತೀರಿ. ನಿಜವಾದ ಆಧ್ಯಾತ್ಮ ನಾಯಕರಾದ ರಾಮಕೃಷ್ಣ ಪರಮಹಂಸ, ವಿವೇಕಾನಂದ, ಕುವೆಂಪು ರವರನ್ನು ವಿರೋಧಿಸುತ್ತೀರಿ” ಎಂದು ಕಿಡಿಕಾರಿದರು.

ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ – ನಿಕೇತ್‌ ರಾಜ್‌ ಮೌರ್ಯ

“ಆಧ್ಯಾತ್ಮಿಕ ಅರಿವು ಇದ್ದವರು ಮಾತ್ರ ಆರ್‌ಎಸ್‌ಎಸ್‌ನಿಂದ ಹೊರಬರಲು ಸಾಧ್ಯ. ನಾವು ಉಪನಿಷತ್ತುಗಳ ವಿರೋಧಿಗಳಲ್ಲ, ದಾಸರು, ಶರಣರು ಸೂಫಿಗಳು ಧರ್ಮವನ್ನು ಅರಿತಿದ್ದರು. ನಾನು ನೀನು ಬೇರೆಯಲ್ಲ, ಒಂದೇ ಎಂಬ ಅರಿವು ಆಳವಾಗಿ ಯಾರಿಗೂ ಮೂಡುತ್ತೋ ಅವರು ಮಾತ್ರ ಧರ್ಮ ಅರ್ಥವಾಗುತ್ತದೆ. ಇದು ಆರ್‌ಎಸ್‌ಎಸ್‌ನವರಿಗೆ ಸಾಧ್ಯವಿಲ್ಲ” ಎಂದು ಯುವ ವಾಗ್ಮಿ ನಿಕೇತ್‌ ರಾಜ್‌ ಮೌರ್ಯ ಹೇಳಿದರು.

“ಈ ಸಭೆಯಲ್ಲಿ ಭಾರಿಸಿದ ಗಂಟೆ ನನ್ನದೇ ಸರಿ, ಬೇರೆಯದೆಲ್ಲವೂ ತಪ್ಪು ಎನ್ನುವ ಅಲ್ಪ ಮತಿಗಳಿಗೆ ಸಾವಿನ ಕರೆಗಂಟೆಯಾಗಬೇಕು ಎಂದು ಚಿಕಾಗೋ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಸಾರಿದರು. ಭಾರತ ದೇಶದ ಆಧ್ಯಾತ್ಮ ಪ್ರತಿನಿಧಿಯಾಗಿದ್ದ ಅವರು ಅಲ್ಲಿ ನೆರೆದಿದ್ದ ವಿಭಿನ್ನ ಸಂಸ್ಕೃತಿಯ ಜನರನ್ನು ಅವರನ್ನು ಸಹೋದರ, ಸಹೋದರಿಯರೆ ಎಂದು ಸಂಭೋದಿಸಿದರು. ಅಂತಹ ವಿವೇಕಾನಂದರ ವಿಚಾರಗಳನ್ನು ಈ ಆರ್‌ಎಸ್‌ಎಸ್‌ ಮಾತನಾಡುವುದಿಲ್ಲ” ಎಂದರು.

“ವಿವೇಕಾನಂದರು ಸನ್ಯಾಸ್ತತ್ವ ಸ್ವೀಕರಿಸಿದ್ದು ಕ್ರಿಸ್ತ ಹುಟ್ಟಿದ ದಿನ. ಶ್ರೀರಾಮಕೃಷ್ಣ ಪರಮಹಂಸರು ಜಗತ್ತಿನ ಎಲ್ಲಾ ಧರ್ಮಗಳ ಮೂಲಕವೂ ಮೋಕ್ಷ ಸಾಧಿಸಬಹುದು ಎಂದು ಸಾರಿದರು. ಜಿತೊ ಮತ್‌ ತತೋ ಪಂತ್‌ ಎಲ್ಲಾ ಮಾರ್ಗಗಳು ಒಂದೇ ಗುರಿಗೆ ಕರೆದುಕೊಂಡು ಹೋಗುತ್ತಿವೆ. ಒಟ್ಟಾಗಿ ಬಾಳುವುದನ್ನು ಕಲಿಸಿ ಎಂದು ಹೇಳಿದ್ದಾರೆ.  ಆದರೆ, ಅದನ್ನು ಆರ್‌ಎಸ್‌ಎಸ್‌ ಹೇಳುವುದಿಲ್ಲ” ಎಂದರು.

“ಹೊಟ್ಟೆ ಕಿಚ್ಚಿಗೆ ತಣ್ಣಿರ್‌ ಸುರಿಸು, ಒಟ್ಟಿಗೆ ಬಾಳುವ ತೆರದಲ್ಲಿ ಹರಸು’ ಎಂದು ಕುವೆಂಪು ಹೇಳಿದರು. ನಮ್ಮನ್ನು ಒಡೆಯುವ ಪ್ರಯತ್ನವೇ ಅಧರ್ಮ. ನಮ್ಮನ್ನು ಜೋಡಿಸುವುದೆ ಧರ್ಮ. ನಮ್ಮೊಳಗೆ ಇರುವ ಕೆಡುಕನ್ನು ಕಳೆದುಕೊಳ್ಳಲು ಇರುವ ಆದರ್ಶವೇ ರಾಮ. ಗಾಂಧಿಗಿಂತ ದೊಡ್ಡ ಹಿಂದೂ ಇರಲು ಸಾಧ್ಯವೇ? ಅವರನ್ನೇ ಹಿಂದೂ ವಿರೋಧಿ ಎಂದು ಈ ಆರ್‌ಎಸ್‌ಎಸ್‌ನವರು ಕರೆದರಲ್ಲ” ಎಂದು ಪ್ರಶ್ನಿಸಿದರು.

“ಪ್ರಶ್ನೆ ಮಾಡದೇ ಹೋದರೆ ಧಮಕ್ಕೆ ಅರ್ಥ ವಿದೆಯೇ? ದ್ವೇಷ ಮಾಡುವುದು ಧರ್ಮವಲ್ಲ, ದ್ವೇಷ ಕಲಿಸುವುದು ಧಾರ್ಮಿಕ ಸಂಘಟನೆಯಲ್ಲ. ಹಾಗಾಗಿ, ಗಾಂಧಿ, ಕುವೆಂಪು, ಕನಕದಾಸ, ದಾರ್ಶನಿಕರು, ಸೂಫಿಗಳು, ನಾರಾಯಣ ಗುರುಗಳು ಮಾತಾಡಿದ್ದು ನಮ್ಮ ಧರ್ಮ, ಆರ್‌ಎಸ್‌ಎಸ್‌ನದು ಅಧರ್ಮ” ಎಂದರು.

ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ: ಎಂ.ಜಿ ಹೆಗಡೆ

“ಆರ್‌ಎಸ್‌ಎಸ್‌ ವೇದ ಮತ್ತು ಉಪನಿಷತ್ತನ್ನು ಹೇಳುವುದಿಲ್ಲ. ಏಕೆಂದರೆ, ಅದರಲ್ಲಿ ಬರೆದಿರುವುದು ಆರ್‌ಎಸ್‌ಎಸ್‌ ಸಿದ್ದಾಂತಕ್ಕೆ ವಿರುದ್ಧವಾಗಿದೆ” ಎಂದು ಎಂ.ಜಿ ಹೆಗಡೆ ಹೇಳಿದರು.

“ಯಾರೂ ಕೂಡ ಶ್ರೇಷ್ಟರಲ್ಲ, ಯಾರೂ ಕನಿಷ್ಟರಲ್ಲ ಎಂದು ಉಪನಿಷತ್ತು ಹೇಳುತ್ತದೆ. ಇವೆಲ್ಲವನ್ನೂ ಮೂಲೆಗೆ ಸರಿಸಿ, ಬದಿಗೆ ಇಟ್ಟರು. ಉಪನಿಷತ್ತು ಇರುವುದು ಪ್ರಶ್ನೆಗಳ ಆಧಾರದ ಮೇಲೆ. ಯಮನ ಹತ್ತಿರ ಹೋಗಿ ನಚಿಕೇತ ಪ್ರಶ್ನೆ ಕೇಳುತ್ತಾನೆ. ಪ್ರಶ್ನೆ ಕೇಳುವುದರಿಂದಲೇ ಚಿಂತನೆ ಹುಟ್ಟಿದ್ದು. ವೇದಗಳು ಹೇಳುವುದು ಪ್ರಕೃತಿಯ ಆರಾಧನೆ. ಇವು ಯಾವುವು ಆರ್‌ಎಸ್‌ಎಸ್‌ಗೆ ಬೇಕಿಲ್ಲ” ಎಂದರು.

“ಆರ್‌ಎಸ್‌ಎಸ್‌ನ ಯಾರೂ ಹಿಂದೂ ಧರ್ಮದ ಅಧ್ಯಯನ ಮಾಡುವುದಿಲ್ಲ. ನಮಸ್ತೆ ಸದಾ ವಸ್ತಲೇ ಎಂಬ ಪ್ರಾರ್ಥನೆ ಕೂಡ ಕೇಸರಿ ಶಾಲು ಹಾಕಿ ಓಡಾಡುವ ಕಾರ್ಯಕರ್ತರಿಗೆ ಬರುವುದಿಲ್ಲ. ರಾಜಕೀಯ ಚಳವಳಿಯಾಗಿ ಅದು ಬಂದಿದೆ” ಎಂದರು.

“ಹಿಂದೂ ಅಂದರೆ ನಮ್ಮದು ಆರಾಧನಾ ಪದ್ದತಿ. ಹಿಂದುತ್ವ ಎಂದರೆ ವ್ಯಾಪಾರ, ವ್ಯವಹಾರ ಮತ್ತು ಅಧಿಕಾರ ಅಷ್ಟೆ. ಹಿಂದೂ ನಾಯಕರು ಎನ್ನುವವರು ಈಗ 200 ಕೋಟಿ ಆಸ್ತಿಯನ್ನು ಹೇಗೆ ಮಾಡಿಕೊಂಡರು ಎಂದು ನನ್ನ ಜೊತೆಗೆ ಚರ್ಚೆಗೆ ಬರುವರೆ?” ಎಂದು ಸವಾಲು ಹಾಕಿದರು.

“ಸಮಾನವಾಗಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವವರು ಹಿಂದು ಆಗಿರುತ್ತಾರೆ. ಆದರೆ ಬಡ, ಹಿಂದುಳಿದ, ದಲಿತ ಯುವಕರನ್ನು ಮುಂದೆ ತಳ್ಳಿ ಜೈಲು ಪಾಲು ಮಾಡುವವರು ಹಿಂದುತ್ವವಾದಿಗಳು. ಧರ್ಮದ ಸಮಸ್ಯೆ ಇಡೀ ಜಗತ್ತಿಗೆ ಇರಬೇಕು. ಬಡವರಿಗೆ ಮಾತ್ರ ಏಕೆ? ಇವರ ಕುರಿತು ಯುವಕರು ಎಚ್ಚರದಿಂದರಬೇಕು” ಎಂದರು.

ಹಿಂದೂ ಅನ್ನುವುದು ಮತ ಅಲ್ಲ, ಜೀವನ ಪ್ರವಾಹ : ಲಕ್ಷ್ಮೀಶ ಗಬ್ಬಲಡ್ಕ

“ನಮ್ಮೊಳಗಿನ ಬೆಂಕಿ ಕಡಿಮೆಯಾಗಿ ತಂಪು ಬಂದ ಕಾರಣ ನಾವು ಆರ್‌ಎಸ್‌ಎಸ್‌ನಿಂದ ಹೊರಗೆ ಬಂದಿದ್ದೇವೆ. ಆರ್‌ಎಸ್‌ಎಸ್‌ನಲ್ಲಿ ಆಟದ ಹೆಸರಿನಲ್ಲಿ, ಹಾಡಿನ, ಚಾರಣ, ಬೆಳದಿಂಗಳ ಊಟ, ಕಥೆ ಹೆಸರಿನಲ್ಲಿ ಒಟ್ಟು ಸೇರಿಸಿ ಒಂದು ಸಿದ್ದಾಂತ ತುಂಬಿಸುವ ಕೆಲಸ ಶುರು ಆಗುತ್ತದೆ. ಯೋಜಿತ ಕಾರ್ಯಪದ್ದತಿ ಇದೆ ಅಲ್ಲಿ. ಪೊಲೀಸ್‌, ನ್ಯಾಯಾಂಗದವರೆಗೂ ಇದು ಹಬ್ಬಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ವ್ಯವಸ್ಥಿತವಾದ ಕಾರ್ಯಯೋಜನೆ ನಮಗೆ ಬೇಕು. ನಾವು ಭಯ, ಅಸಹನೆ ಹುಟ್ಟಿಸದೇ ಭಾವ ಜಾಗೃತಿಯನ್ನು ಉಂಟು ಮಾಡಬೇಕು ಎಂದು ಅರಿತಿದ್ದೇನೆ. 15 ವರ್ಷದ ಹಿಂದೆ ಶಿರಾದಲ್ಲಿ ನನ್ನ ಭಾಷಣ ಕೇಳಿ ಜನ ಮುಸ್ಲಿಮರ ಅಂಗಡಿಗೆ ಬೆಂಕಿ ಹಾಕಿದರು. ಬೆಂಕಿ ಹಾಕಿದವರಿಗೆ ಚೂರಿ ಹಾಕಿದರು. ಆ ಪಾಪ ನನ್ನ ಮೇಲಿದೆ. ಅದಕ್ಕೆ ಪ್ರಾಯಶ್ಚಿತ ಪಟ್ಟುಕೊಳ್ಳಲು ನಾನು ಇವತ್ತು ಇಲ್ಲಿಗೆ ಬಂದಿದ್ದೇನೆ” ಎಂದರು.

ಭಾರತದ ಭವ್ಯ ಪರಂಪರೆಯನ್ನು ಕೇವಲ ಒಂದು ಮತಕ್ಕೆ ಸೀಮಿತಗೊಳಿಸಿ ಭವಿಷ್ಯದಲ್ಲಿ ಆತಂಕದಿಂದ ಬದುಕುವ ದುಸ್ಥಿತಿಯನ್ನು ಆರ್‌ಎಸ್‌ಎಸ್‌ ಸೃಷ್ಟಿಸಿದೆ. ಆರ್‌ಎಸ್‌ಎಸ್‌ ಹಿಂದ್ ಧರ್ಮದ ಪ್ರಾತಿನಿಧಿಕ ಸಂಸ್ಥೆ ಅಲ್ಲ. ಅದನ್ನು ತ್ಯಜಿಸಿ ಜಗತ್ತಿನ ಎಲ್ಲದರಿಂದ ಒಳ್ಳೇಯದನ್ನು ನಾವು ತೆಗೆದುಕೊಳ್ಳೋಣ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪಣ ಪ್ರತಿಜ್ಞೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ತೊರೆದು ಬಂದ ಎಲ್.ಎನ್‌ ಮುಕುಂದರಾಜ್‌, ಹನುಮೇಗೌಡರು ಮಾತನಾಡಿದರು. ಜಾಗೃತ ಕರ್ನಾಟಕ ರಾಜಶೇಖರ್‌ ಅಕ್ಕಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ.ವಾಸು ಹೆಚ್.ವಿ, ಹೇಮಾ ವೆಂಕಟ್‌, ಡಾ.ರಮೇಶ್‌ ಬೆಲ್ಲಂಕೊಂಡ, ಬಿ.ಸಿ ಬಸವರಾಜು ಉಪಸ್ಥಿತರಿದ್ದರು.

ಇದನ್ನೂ ಓದಿ : 5,8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ: ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...