Homeಮುಖಪುಟಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ...

ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!

- Advertisement -
- Advertisement -

ಡಿಸೆಂಬರ್ 3, 2024ರಂದು ದಕ್ಷಿಣ ಕೊರಿಯಾದಲ್ಲಿ ಏಕಾಏಕಿ ‘ತುರ್ತು ಮಿಲಿಟರಿ ಆಡಳಿತ’ ಘೋಷಣೆ ಮಾಡಿದ ಬಳಿಕ ಉಂಟಾಗಿರುವ ರಾಜಕೀಯ ಅರಾಜಕತೆ, ದಿನಕ್ಕೊಂದು ಬೆಳವಣಿಗೆಗೆ ಕಾರಣವಾಗುತ್ತಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಡಿ.3 ಮಂಗಳವಾರ ಸಂಜೆ (ಭಾರತೀಯ ಕಾಲಮಾನ ಸಂಜೆ 6.57 ನಿಮಿಷ) ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದರು.

ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಕೇವಲ 6 ಗಂಟೆಗಳಲ್ಲೇ ಹಿಂಪಡೆದರು.

ಮಿಟಲಿರಿ ಆಡಳಿತ ಘೋಷಣೆ ಬಳಿ ಏನಾಯಿತು? 

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದರು. ಇದರಿಂದ ಬೆದರಿದ ಅಧ್ಯಕ್ಷ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದರು.

ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು, ಸಂಸದರು ಅಸೆಂಬ್ಲಿ ಕಟ್ಟಡ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ಜನರ ಆಕ್ರೋಶಕ್ಕೆ ಮಣಿದು ತನ್ನ ಆದೇಶವನ್ನು ಹಿಂಪಡೆದ ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅಧ್ಯಕ್ಷ ಯೋಲ್, “ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ವಾಗ್ದಂಡನೆ ಗೊತ್ತುವಳಿ 

ವಿಪಕ್ಷಗಳನ್ನು ಹತ್ತಿಕ್ಕಲು ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿತ್ತು. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಬಂತು. ಆದರೆ, ಸೂಕ್ತ ಬೆಂಬಲ ದೊರೆಯದ ಹಿನ್ನೆಲೆ ವಿಫಲವಾಯಿತು.

ಅಸೆಂಬ್ಲಿಯಲ್ಲಿ ಒಟ್ಟು 195 ಸದಸ್ಯರು ಮತ ಚಲಾಯಿಸಿದ್ದಾರೆ. ಆದರೆ, ಮತ ಚಲಾಯಿಸಿದ ಸದಸ್ಯರ ಸಂಖ್ಯೆಯು ಒಟ್ಟು ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ತಲುಪಲಿಲ್ಲ. ಆದ್ದರಿಂದ ಈ ವಿಷಯದ ಮೇಲಿನ ಮತವು ಮಾನ್ಯವಾಗಿಲ್ಲ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ವೂ ವೊನ್-ಶಿಕ್ ಹೇಳಿದ್ದಾರೆ.

300 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಮೂರನೇ ಎರಡರಷ್ಟು ಅಂದರೆ 200 ಮತಗಳ ಅಗತ್ಯವಿತ್ತು. ಸದನದಲ್ಲಿ ವಿಪಕ್ಷಗಳು 192 ಸದಸ್ಯರನ್ನು ಹೊಂದಿದ್ದು, ಆಡಳಿತಾರೂಢ ಮೈತ್ರಿಕೂಟದ ಮೂವರು ನಿರ್ಣಯದ ಪರ ಮತ ಹಾಕಿದ್ದರು. ಅಧ್ಯಕ್ಷ ಯೂನ್ ಅವರ ಪೀಪಲ್ ಪವರ್ ಪಾರ್ಟಿ(ಪಿಪಿಪಿ)ಯ ಸದಸ್ಯರು ಮತದಾನವನ್ನು ಬಹಿಷ್ಕರಿಸಿದ್ದರು.

ಅಧ್ಯಕ್ಷರ ವಿರುದ್ಧ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸಲು ವಿಪಕ್ಷಗಳಿಗೆ ಡಿಸೆಂಬರ್ 11ರ ಬಳಿಕವಷ್ಟೇ ಅವಕಾಶವಿತ್ತು. ಹಾಗಾಗಿ, ಮುಂದಿನ ಶನಿವಾರ (ಡಿ.15) ಪದಚ್ಯುತಿಗೆ ಆಗ್ರಹಿಸಿ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸುವ ಸಾಧ್ಯತೆ ಇದೆ.

ಕ್ಷಮೆ ಯಾಚಿಸಿದ ಅಧ್ಯಕ್ಷ ಯೋಲ್

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಘೋಷಿಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ದೇಶದ ಜನರ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕವಾಗಿ ಗದ್ದಲ ಸೃಷ್ಟಿಯಾಗುವಂತೆ ಆದೇಶ ಹೊರಡಿಸಿದ್ದಕಾಗಿ ಕ್ಷಮೆ ಕೋರುತ್ತಿರುವುದಾಗಿ ದೂರದರ್ಶನದ ಭಾಷಣದಲ್ಲಿ ಅವರು ಶನಿವಾರ (ಡಿ.7) ಹೇಳಿದ್ದಾರೆ. ಸೇನಾ ಆಡಳಿತ ಜಾರಿಯಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಯೋಲ್ ವಿರುದ್ದ ತನಿಖೆ 

ದೇಶದಲ್ಲಿ ಮಿಲಿಟರಿ ಆಡಳಿತ ಹೇರಿಕೆ ಮಾಡಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ಆಂತರಿಕ ಇಲಾಖೆ ಸಚಿವ ಮತ್ತು ರಕ್ಷಣಾ ಇಲಾಖೆಯ ಮಾಜಿ ಸಚಿವರ ವಿರುದ್ಧ ದಕ್ಷಿಣ ಕೊರಿಯಾ ಪ್ರಾಸಿಕ್ಯೂಟರ್‌ಗಳು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮಂಗಳವಾರ (ಡಿ.10) ಯೋಲ್ ಅವರ ಕಚೇರಿಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಯೋಲ್ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಅವರನ್ನು ಬಂಧಿಸಿರುವ ಪೊಲೀಸರು ಕಸ್ಟಡಿಯಲ್ಲಿಟ್ಟಿದ್ದಾರೆ. ಅಲ್ಲಿ ಕಿಮ್ ಯೋಂಗ್-ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್ ಯೋಂಗ್-ಹ್ಯುನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ಅಧ್ಯಕ್ಷ ಯೋಲ್ ನೇಮಿಸಿದ್ದಾರೆ.

ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ಸಾಧ್ಯತೆ

ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿರುವ ಅಧ್ಯಕ್ಷ
ಯೂನ್ ಸುಕ್ ಯೋಲ್ ಅವರು ಫೆಬ್ರವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಏಪ್ರಿಲ್-ಮೇನಲ್ಲಿ ದೇಶದಲ್ಲಿ ಚುನಾವಣೆ ನಡೆಯಬಹುದು ಎಂದು ದಕ್ಷಿಣ ಕೊರಿಯಾದ ಆಡಳಿತ ಪಕ್ಷ ಪೀಪಲ್ ಪವರ್ ಪಾರ್ಟಿ (ಪಿಪಿಪಿ) ಹೇಳಿದೆ. ಆದರೆ, ಅದಕ್ಕೂ ಮುನ್ನ ಸಂಸತ್ತಿನಲ್ಲಿ ಅಧ್ಯಕ್ಷರ ಪದಚ್ಯುತಿಗೆ ಚುನಾವಣೆ ನಡೆದರೆ ಯೋಲ್ ತನ್ನ ಸ್ಥಾನ ಕಳೆದುಕೊಳ್ಳಬಹುದು.

ಅಸೆಂಬ್ಲಿ ಮುಂದೆ ಬೃಹತ್ ಪ್ರತಿಭಟನೆ

ಮಿಲಿಟರಿ ಆಡಳಿತದ ವಿಫಲ ಯತ್ನದ ಬಳಿಕ ಅಧ್ಯಕ್ಷ ಯೋನ್ ಸುಕ್ ಯೋಲ್ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಮಂಗಳವಾರ (ಡಿ.10) ರಾಜಧಾನಿ ಸಿಯೋಲ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಜಮಾಯಿಸಿದ ಸಾವಿರಾರು ಜನರು ಕೈಯ್ಯಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದರು. ಯೋಲ್ ಪದಚ್ಯುತಿಗೆ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಸುಮಾರು 40 ಸಾವಿರ ಜನರು ಭಾಗವಹಿಸಿದ್ದಾರೆ ಎಂದು ಅದರ ಸಂಘಟಕರು ತಿಳಿಸಿದ್ದಾರೆ.

ಪ್ರಸ್ತುತ ದಕ್ಷಿಣ ಕೊರಿಯಾದಲ್ಲಿ ಯೋನ್ ಸುಕ್ ಯೋಲ್ ವಿರುದ್ದ ಜನಾಕ್ರೋಶವಿದೆ. ರಾಜೀನಾಮೆಗೆ ಒತ್ತಾಯಗಳು ಹೆಚ್ಚಾಗುತ್ತಿದೆ. ದೇಶದ ಅಲ್ಲಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದೆ. ದಿನಕ್ಕೊಬ್ಬರು ಸಂಪುಟ ಸಚಿವರು ರಾಜೀನಾಮೆ ಕೊಡುತ್ತಿದ್ದಾರೆ. ಅಧ್ಯಕ್ಷ ತುರ್ತು ಪರಿಸ್ಥಿತಿ ಹೇರಲು ಯತ್ನಿಸಿ ತಪ್ಪು ಮಾಡಿದರು ಎಂಬ ಅಸಮಾಧಾನ ಅವರ ಸ್ವಪಕ್ಷದಲ್ಲೇ ಇದೆ.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ : ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...