Homeಮುಖಪುಟಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ...

ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!

- Advertisement -
- Advertisement -

ಡಿಸೆಂಬರ್ 3, 2024ರಂದು ದಕ್ಷಿಣ ಕೊರಿಯಾದಲ್ಲಿ ಏಕಾಏಕಿ ‘ತುರ್ತು ಮಿಲಿಟರಿ ಆಡಳಿತ’ ಘೋಷಣೆ ಮಾಡಿದ ಬಳಿಕ ಉಂಟಾಗಿರುವ ರಾಜಕೀಯ ಅರಾಜಕತೆ, ದಿನಕ್ಕೊಂದು ಬೆಳವಣಿಗೆಗೆ ಕಾರಣವಾಗುತ್ತಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಡಿ.3 ಮಂಗಳವಾರ ಸಂಜೆ (ಭಾರತೀಯ ಕಾಲಮಾನ ಸಂಜೆ 6.57 ನಿಮಿಷ) ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದರು.

ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಕೇವಲ 6 ಗಂಟೆಗಳಲ್ಲೇ ಹಿಂಪಡೆದರು.

ಮಿಟಲಿರಿ ಆಡಳಿತ ಘೋಷಣೆ ಬಳಿ ಏನಾಯಿತು? 

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದರು. ಇದರಿಂದ ಬೆದರಿದ ಅಧ್ಯಕ್ಷ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದರು.

ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು, ಸಂಸದರು ಅಸೆಂಬ್ಲಿ ಕಟ್ಟಡ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ಜನರ ಆಕ್ರೋಶಕ್ಕೆ ಮಣಿದು ತನ್ನ ಆದೇಶವನ್ನು ಹಿಂಪಡೆದ ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅಧ್ಯಕ್ಷ ಯೋಲ್, “ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ವಾಗ್ದಂಡನೆ ಗೊತ್ತುವಳಿ 

ವಿಪಕ್ಷಗಳನ್ನು ಹತ್ತಿಕ್ಕಲು ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿತ್ತು. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಬಂತು. ಆದರೆ, ಸೂಕ್ತ ಬೆಂಬಲ ದೊರೆಯದ ಹಿನ್ನೆಲೆ ವಿಫಲವಾಯಿತು.

ಅಸೆಂಬ್ಲಿಯಲ್ಲಿ ಒಟ್ಟು 195 ಸದಸ್ಯರು ಮತ ಚಲಾಯಿಸಿದ್ದಾರೆ. ಆದರೆ, ಮತ ಚಲಾಯಿಸಿದ ಸದಸ್ಯರ ಸಂಖ್ಯೆಯು ಒಟ್ಟು ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ತಲುಪಲಿಲ್ಲ. ಆದ್ದರಿಂದ ಈ ವಿಷಯದ ಮೇಲಿನ ಮತವು ಮಾನ್ಯವಾಗಿಲ್ಲ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ವೂ ವೊನ್-ಶಿಕ್ ಹೇಳಿದ್ದಾರೆ.

300 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಮೂರನೇ ಎರಡರಷ್ಟು ಅಂದರೆ 200 ಮತಗಳ ಅಗತ್ಯವಿತ್ತು. ಸದನದಲ್ಲಿ ವಿಪಕ್ಷಗಳು 192 ಸದಸ್ಯರನ್ನು ಹೊಂದಿದ್ದು, ಆಡಳಿತಾರೂಢ ಮೈತ್ರಿಕೂಟದ ಮೂವರು ನಿರ್ಣಯದ ಪರ ಮತ ಹಾಕಿದ್ದರು. ಅಧ್ಯಕ್ಷ ಯೂನ್ ಅವರ ಪೀಪಲ್ ಪವರ್ ಪಾರ್ಟಿ(ಪಿಪಿಪಿ)ಯ ಸದಸ್ಯರು ಮತದಾನವನ್ನು ಬಹಿಷ್ಕರಿಸಿದ್ದರು.

ಅಧ್ಯಕ್ಷರ ವಿರುದ್ಧ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸಲು ವಿಪಕ್ಷಗಳಿಗೆ ಡಿಸೆಂಬರ್ 11ರ ಬಳಿಕವಷ್ಟೇ ಅವಕಾಶವಿತ್ತು. ಹಾಗಾಗಿ, ಮುಂದಿನ ಶನಿವಾರ (ಡಿ.15) ಪದಚ್ಯುತಿಗೆ ಆಗ್ರಹಿಸಿ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸುವ ಸಾಧ್ಯತೆ ಇದೆ.

ಕ್ಷಮೆ ಯಾಚಿಸಿದ ಅಧ್ಯಕ್ಷ ಯೋಲ್

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಘೋಷಿಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ದೇಶದ ಜನರ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕವಾಗಿ ಗದ್ದಲ ಸೃಷ್ಟಿಯಾಗುವಂತೆ ಆದೇಶ ಹೊರಡಿಸಿದ್ದಕಾಗಿ ಕ್ಷಮೆ ಕೋರುತ್ತಿರುವುದಾಗಿ ದೂರದರ್ಶನದ ಭಾಷಣದಲ್ಲಿ ಅವರು ಶನಿವಾರ (ಡಿ.7) ಹೇಳಿದ್ದಾರೆ. ಸೇನಾ ಆಡಳಿತ ಜಾರಿಯಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಯೋಲ್ ವಿರುದ್ದ ತನಿಖೆ 

ದೇಶದಲ್ಲಿ ಮಿಲಿಟರಿ ಆಡಳಿತ ಹೇರಿಕೆ ಮಾಡಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ಆಂತರಿಕ ಇಲಾಖೆ ಸಚಿವ ಮತ್ತು ರಕ್ಷಣಾ ಇಲಾಖೆಯ ಮಾಜಿ ಸಚಿವರ ವಿರುದ್ಧ ದಕ್ಷಿಣ ಕೊರಿಯಾ ಪ್ರಾಸಿಕ್ಯೂಟರ್‌ಗಳು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮಂಗಳವಾರ (ಡಿ.10) ಯೋಲ್ ಅವರ ಕಚೇರಿಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಯೋಲ್ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಅವರನ್ನು ಬಂಧಿಸಿರುವ ಪೊಲೀಸರು ಕಸ್ಟಡಿಯಲ್ಲಿಟ್ಟಿದ್ದಾರೆ. ಅಲ್ಲಿ ಕಿಮ್ ಯೋಂಗ್-ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್ ಯೋಂಗ್-ಹ್ಯುನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ಅಧ್ಯಕ್ಷ ಯೋಲ್ ನೇಮಿಸಿದ್ದಾರೆ.

ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ಸಾಧ್ಯತೆ

ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿರುವ ಅಧ್ಯಕ್ಷ
ಯೂನ್ ಸುಕ್ ಯೋಲ್ ಅವರು ಫೆಬ್ರವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಏಪ್ರಿಲ್-ಮೇನಲ್ಲಿ ದೇಶದಲ್ಲಿ ಚುನಾವಣೆ ನಡೆಯಬಹುದು ಎಂದು ದಕ್ಷಿಣ ಕೊರಿಯಾದ ಆಡಳಿತ ಪಕ್ಷ ಪೀಪಲ್ ಪವರ್ ಪಾರ್ಟಿ (ಪಿಪಿಪಿ) ಹೇಳಿದೆ. ಆದರೆ, ಅದಕ್ಕೂ ಮುನ್ನ ಸಂಸತ್ತಿನಲ್ಲಿ ಅಧ್ಯಕ್ಷರ ಪದಚ್ಯುತಿಗೆ ಚುನಾವಣೆ ನಡೆದರೆ ಯೋಲ್ ತನ್ನ ಸ್ಥಾನ ಕಳೆದುಕೊಳ್ಳಬಹುದು.

ಅಸೆಂಬ್ಲಿ ಮುಂದೆ ಬೃಹತ್ ಪ್ರತಿಭಟನೆ

ಮಿಲಿಟರಿ ಆಡಳಿತದ ವಿಫಲ ಯತ್ನದ ಬಳಿಕ ಅಧ್ಯಕ್ಷ ಯೋನ್ ಸುಕ್ ಯೋಲ್ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಮಂಗಳವಾರ (ಡಿ.10) ರಾಜಧಾನಿ ಸಿಯೋಲ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಜಮಾಯಿಸಿದ ಸಾವಿರಾರು ಜನರು ಕೈಯ್ಯಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದರು. ಯೋಲ್ ಪದಚ್ಯುತಿಗೆ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಸುಮಾರು 40 ಸಾವಿರ ಜನರು ಭಾಗವಹಿಸಿದ್ದಾರೆ ಎಂದು ಅದರ ಸಂಘಟಕರು ತಿಳಿಸಿದ್ದಾರೆ.

ಪ್ರಸ್ತುತ ದಕ್ಷಿಣ ಕೊರಿಯಾದಲ್ಲಿ ಯೋನ್ ಸುಕ್ ಯೋಲ್ ವಿರುದ್ದ ಜನಾಕ್ರೋಶವಿದೆ. ರಾಜೀನಾಮೆಗೆ ಒತ್ತಾಯಗಳು ಹೆಚ್ಚಾಗುತ್ತಿದೆ. ದೇಶದ ಅಲ್ಲಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದೆ. ದಿನಕ್ಕೊಬ್ಬರು ಸಂಪುಟ ಸಚಿವರು ರಾಜೀನಾಮೆ ಕೊಡುತ್ತಿದ್ದಾರೆ. ಅಧ್ಯಕ್ಷ ತುರ್ತು ಪರಿಸ್ಥಿತಿ ಹೇರಲು ಯತ್ನಿಸಿ ತಪ್ಪು ಮಾಡಿದರು ಎಂಬ ಅಸಮಾಧಾನ ಅವರ ಸ್ವಪಕ್ಷದಲ್ಲೇ ಇದೆ.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ : ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...