Homeಮುಖಪುಟಬಾಂಗ್ಲಾ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ ಬಂಧನ

ಬಾಂಗ್ಲಾ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ ಬಂಧನ

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರಗಳನ್ನು ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ರನ್ನು ಬಂಧಿಸಲಾಗಿದೆ. ಇದು ಮತದಾರರ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಸಾ ಅವಧಿ ಮುಗಿದಿದ್ದರೂ ಬಾಂಗ್ಲಾದೇಶದ ನಯಾನ್ ಸರ್ಕಾರ್ ಮತ್ತು ಅವರ ಕುಟುಂಬ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ನಿವಾಸಿ ಪ್ರಮಾಣಪತ್ರಗಳನ್ನು ನೀಡಿದ್ದರು. ಈ ನಿವಾಸಿ ಪ್ರಮಾಣಪತ್ರಗಳು ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್

ಸರಿಯಾದ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್‌ರನ್ನೂ ಕೂಡ ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶಿಗರು ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿದ್ದರೆ, ಆ ಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿ ಮಾಡಿದ್ದಾರೆ. ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಅವರು ಭರವಸೆ ನೋಡಿದ್ದಾರೆ. ಪೊಲೀಸರು ದೂರವಾಣಿ ಸಂಖ್ಯೆ ಮತ್ತು ಈ-ಮೇಲ್ ಐಡಿ ನೀಡಿ ಮಾಹಿತಿ ನೀಡಲು ಕೋರಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಕ್ರಮವಾಗಿ ವಲಸೆ ಬಂದವರನ್ನು ಕಳೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...