Homeಮುಖಪುಟಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

- Advertisement -
- Advertisement -

ಅಂಡಮಾನ್ ನಿಕೋಬಾರ್‌ನ ಉತ್ತರ ಸೆಂಟಿನೆಲ್ ದ್ವೀಪದ ನಿರ್ಬಂಧಿತ ಬುಡಕಟ್ಟು ಮೀಸಲು ಪ್ರದೇಶವನ್ನು ಪ್ರವೇಶಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ. ಆರೋಪಿಯನ್ನು 24 ವರ್ಷದ ಮೈಖೈಲೊ ವಿಕ್ಟೋರೊವಿಚ್ ಪಾಲಿಯಕೋವ್ ಎಂದು ಗುರುತಿಸಲಾಗಿದೆ.

ಆರೋಪಿಯು ಸೋಮವಾರ ಅಪರಾಧ ತನಿಖಾ ಇಲಾಖೆಯು ಅನುಮತಿಯಿಲ್ಲದೆ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿ ತಿಳಿಸಿದೆ.

ಉತ್ತರ ಸೆಂಟಿನೆಲ್ ದ್ವೀಪಕ್ಕೆ ಪರವಾನಗಿ ಇಲ್ಲದೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಸೆಂಟಿನೆಲೀಸ್ ಬುಡಕಟ್ಟು ಜನಾಂಗದ ಈ ಸಮುದಾಯದ ಜನಸಂಖ್ಯೆ 2011 ರಲ್ಲಿ ಸುಮಾರು 40 ರಷ್ಟು ಇತ್ತು. ಈ ಸಮುದಾಯವು ಹೊರಗಿನವರೊಂದಿಗೆ ಸಂಪರ್ಕವನ್ನು ವಿರೋಧಿಸುತ್ತಾರೆ.

ಆರೋಪಿ ಪಾಲಿಯಕೋವ್ ಮಾರ್ಚ್ 26 ರಂದು ಪೋರ್ಟ್ ಬ್ಲೇರ್‌ಗೆ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಶನಿವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಕುರ್ಮದೇರಾ ಬೀಚ್‌ನಿಂದ ಕೊಬ್ಬರಿ ಮತ್ತು ಕೋಕಾ-ಕೋಲಾ ಪಾನೀಯದ ಡಬ್ಬಿಯನ್ನು ತೆಗೆದುಕೊಂಡು “ಸೆಂಟಿನೆಲೀಸ್‌ಗೆ ಅರ್ಪಣೆ” ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೋಲಿಯಕೋವ್ ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಉತ್ತರ ಸೆಂಟಿನೆಲ್ ದ್ವೀಪದ ಈಶಾನ್ಯ ತೀರವನ್ನು ತಲುಪಿ ಒಂದು ಗಂಟೆ ಕಡಲಾಚೆಯಲ್ಲಿಯೇ ಇದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲಿ ಅವರು ತಿರುಗಾಡಿ ಶಿಳ್ಳೆ ಹೊಡೆದರೂ ಯಾರೊಬ್ಬರನ್ನೂ ನೋಡಲಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ನಂತರ, ಪೋಲಿಯಕೋವ್ ಸುಮಾರು ಐದು ನಿಮಿಷಗಳ ಕಾಲ ದಡಕ್ಕೆ ಇಳಿದು ತನ್ನೊಂದಿಗೆ ತಂದಿದ್ದ ಕಾಣಿಕೆಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅವರು ಮರಳಿನ ಮಾದರಿಗಳನ್ನು ಸಂಗ್ರಹಿಸಿ ವೀಡಿಯೊ ರೆಕಾರ್ಡ್ ಮಾಡಿ ತಮ್ಮ ದೋಣಿಗೆ ಹಿಂತಿರುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುರ್ಮದೇರಾ ಬೀಚ್‌ಗೆ ಹಿಂತಿರುಗುವ ಪ್ರಯಾಣವನ್ನು ಪ್ರಾರಂಭಿಸಿದ್ದ ಅವರು ಸಂಜೆ 7 ಗಂಟೆಗೆ ತಲುಪಿದ್ದರು. ಈ ವೇಳೆ ಮೀನುಗಾರರು ಅವರನ್ನು ನೋಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಯಕೋವ್ ಶನಿವಾರ ಕುರ್ಮದೇರಾ ಬೀಚ್ ಬಳಿ ಸಣ್ಣ ಎಂಜಿನ್ ಹೊಂದಿದ ಗಾಳಿ ತುಂಬಬಹುದಾದ ಏಕ ಆಸನದ ದೋಣಿಯೊಂದಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅವರ ಬಗ್ಗೆ ಮತ್ತು ಮೀಸಲು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡುವ ಅವರ ಉದ್ದೇಶದ ಬಗ್ಗೆ ನಮಗೆ ಹೆಚ್ಚಿನ ವಿವರಗಳು ಸಿಗುತ್ತಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅವರು ತಂಗಿದ್ದಾಗ ಅವರು ಬೇರೆ ಎಲ್ಲಿಗೆ ಭೇಟಿ ನೀಡಿದ್ದರು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ.” ಎಂದು ಪೊಲೀಸ್ ಮಹಾನಿರ್ದೇಶಕ ಎಚ್‌ಎಸ್ ಧಲಿವಾಲ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಪೋರ್ಟ್ ಬ್ಲೇರ್‌ನಲ್ಲಿರುವ ಹೋಟೆಲ್ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಧಲಿವಾಲ್ ಹೇಳಿದ್ದಾರೆ. ಪಾಲಿಯಕೋವ್ ಅವರ ಬಳಿ ದೊರೆತ ಕ್ಯಾಮೆರಾ ದೃಶ್ಯಾವಳಿಗಳು ಅವರು ಉತ್ತರ ಸೆಂಟಿನೆಲ್ ದ್ವೀಪದಲ್ಲಿ ಇಳಿದಿರುವುದನ್ನು ತೋರಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೂಲನಿವಾಸಿ ಬುಡಕಟ್ಟುಗಳ ರಕ್ಷಣೆ ತಿದ್ದುಪಡಿ ನಿಯಂತ್ರಣ, 2012 ರ ವಿಭಾಗಗಳೊಂದಿಗೆ ವಿದೇಶಿಯರ ಕಾಯ್ದೆ, 1946 ರ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತಿರೂರ್‌ನ ಬುಡಕಟ್ಟು ಕಲ್ಯಾಣ ಅಧಿಕಾರಿ ಪ್ರೋಣಬ್ ಸಿರ್ಕಾರ್ ಅವರು ಓಗ್ರಬ್ರಾಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅಂಡಮಾನ್ ನಿಕೋಬಾರ್‌ನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...