Homeಮುಖಪುಟಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

- Advertisement -
- Advertisement -

ಅಂಡಮಾನ್ ನಿಕೋಬಾರ್‌ನ ಉತ್ತರ ಸೆಂಟಿನೆಲ್ ದ್ವೀಪದ ನಿರ್ಬಂಧಿತ ಬುಡಕಟ್ಟು ಮೀಸಲು ಪ್ರದೇಶವನ್ನು ಪ್ರವೇಶಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪಿಟಿಐ ಬುಧವಾರ ವರದಿ ಮಾಡಿದೆ. ಆರೋಪಿಯನ್ನು 24 ವರ್ಷದ ಮೈಖೈಲೊ ವಿಕ್ಟೋರೊವಿಚ್ ಪಾಲಿಯಕೋವ್ ಎಂದು ಗುರುತಿಸಲಾಗಿದೆ.

ಆರೋಪಿಯು ಸೋಮವಾರ ಅಪರಾಧ ತನಿಖಾ ಇಲಾಖೆಯು ಅನುಮತಿಯಿಲ್ಲದೆ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿ ತಿಳಿಸಿದೆ.

ಉತ್ತರ ಸೆಂಟಿನೆಲ್ ದ್ವೀಪಕ್ಕೆ ಪರವಾನಗಿ ಇಲ್ಲದೆ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಸೆಂಟಿನೆಲೀಸ್ ಬುಡಕಟ್ಟು ಜನಾಂಗದ ಈ ಸಮುದಾಯದ ಜನಸಂಖ್ಯೆ 2011 ರಲ್ಲಿ ಸುಮಾರು 40 ರಷ್ಟು ಇತ್ತು. ಈ ಸಮುದಾಯವು ಹೊರಗಿನವರೊಂದಿಗೆ ಸಂಪರ್ಕವನ್ನು ವಿರೋಧಿಸುತ್ತಾರೆ.

ಆರೋಪಿ ಪಾಲಿಯಕೋವ್ ಮಾರ್ಚ್ 26 ರಂದು ಪೋರ್ಟ್ ಬ್ಲೇರ್‌ಗೆ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಅವರು ಶನಿವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಕುರ್ಮದೇರಾ ಬೀಚ್‌ನಿಂದ ಕೊಬ್ಬರಿ ಮತ್ತು ಕೋಕಾ-ಕೋಲಾ ಪಾನೀಯದ ಡಬ್ಬಿಯನ್ನು ತೆಗೆದುಕೊಂಡು “ಸೆಂಟಿನೆಲೀಸ್‌ಗೆ ಅರ್ಪಣೆ” ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೋಲಿಯಕೋವ್ ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಉತ್ತರ ಸೆಂಟಿನೆಲ್ ದ್ವೀಪದ ಈಶಾನ್ಯ ತೀರವನ್ನು ತಲುಪಿ ಒಂದು ಗಂಟೆ ಕಡಲಾಚೆಯಲ್ಲಿಯೇ ಇದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲಿ ಅವರು ತಿರುಗಾಡಿ ಶಿಳ್ಳೆ ಹೊಡೆದರೂ ಯಾರೊಬ್ಬರನ್ನೂ ನೋಡಲಿಲ್ಲ ಎಂದು ಅವರು ಹೇಳಿದ್ದಾರೆ.

ಇದರ ನಂತರ, ಪೋಲಿಯಕೋವ್ ಸುಮಾರು ಐದು ನಿಮಿಷಗಳ ಕಾಲ ದಡಕ್ಕೆ ಇಳಿದು ತನ್ನೊಂದಿಗೆ ತಂದಿದ್ದ ಕಾಣಿಕೆಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅವರು ಮರಳಿನ ಮಾದರಿಗಳನ್ನು ಸಂಗ್ರಹಿಸಿ ವೀಡಿಯೊ ರೆಕಾರ್ಡ್ ಮಾಡಿ ತಮ್ಮ ದೋಣಿಗೆ ಹಿಂತಿರುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುರ್ಮದೇರಾ ಬೀಚ್‌ಗೆ ಹಿಂತಿರುಗುವ ಪ್ರಯಾಣವನ್ನು ಪ್ರಾರಂಭಿಸಿದ್ದ ಅವರು ಸಂಜೆ 7 ಗಂಟೆಗೆ ತಲುಪಿದ್ದರು. ಈ ವೇಳೆ ಮೀನುಗಾರರು ಅವರನ್ನು ನೋಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಯಕೋವ್ ಶನಿವಾರ ಕುರ್ಮದೇರಾ ಬೀಚ್ ಬಳಿ ಸಣ್ಣ ಎಂಜಿನ್ ಹೊಂದಿದ ಗಾಳಿ ತುಂಬಬಹುದಾದ ಏಕ ಆಸನದ ದೋಣಿಯೊಂದಿಗೆ ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅವರ ಬಗ್ಗೆ ಮತ್ತು ಮೀಸಲು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡುವ ಅವರ ಉದ್ದೇಶದ ಬಗ್ಗೆ ನಮಗೆ ಹೆಚ್ಚಿನ ವಿವರಗಳು ಸಿಗುತ್ತಿವೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅವರು ತಂಗಿದ್ದಾಗ ಅವರು ಬೇರೆ ಎಲ್ಲಿಗೆ ಭೇಟಿ ನೀಡಿದ್ದರು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ.” ಎಂದು ಪೊಲೀಸ್ ಮಹಾನಿರ್ದೇಶಕ ಎಚ್‌ಎಸ್ ಧಲಿವಾಲ್ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಪೋರ್ಟ್ ಬ್ಲೇರ್‌ನಲ್ಲಿರುವ ಹೋಟೆಲ್ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಧಲಿವಾಲ್ ಹೇಳಿದ್ದಾರೆ. ಪಾಲಿಯಕೋವ್ ಅವರ ಬಳಿ ದೊರೆತ ಕ್ಯಾಮೆರಾ ದೃಶ್ಯಾವಳಿಗಳು ಅವರು ಉತ್ತರ ಸೆಂಟಿನೆಲ್ ದ್ವೀಪದಲ್ಲಿ ಇಳಿದಿರುವುದನ್ನು ತೋರಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೂಲನಿವಾಸಿ ಬುಡಕಟ್ಟುಗಳ ರಕ್ಷಣೆ ತಿದ್ದುಪಡಿ ನಿಯಂತ್ರಣ, 2012 ರ ವಿಭಾಗಗಳೊಂದಿಗೆ ವಿದೇಶಿಯರ ಕಾಯ್ದೆ, 1946 ರ ಅಡಿಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತಿರೂರ್‌ನ ಬುಡಕಟ್ಟು ಕಲ್ಯಾಣ ಅಧಿಕಾರಿ ಪ್ರೋಣಬ್ ಸಿರ್ಕಾರ್ ಅವರು ಓಗ್ರಬ್ರಾಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅಂಡಮಾನ್ ನಿಕೋಬಾರ್‌ನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...