Homeಮುಖಪುಟಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ...

ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಕಂಪೆನಿಗಳು ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಸಭಾ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್ ಮಾಲಕತ್ವದ ಆಂಧ್ರಪ್ರದೇಶ ಮೂಲದ ಮೂಲಸೌಕರ್ಯ ಕಂಪನಿಯು ಹಿಮಾಚಲ ಪ್ರದೇಶದ ಪ್ರಮುಖ ಯೋಜನೆಗೆ ಟೆಂಡರ್‌ ಪಡೆದ ಮೂರೇ ತಿಂಗಳಲ್ಲಿ 45 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎನ್ನುವುದು ಬಯಲಾಗಿದೆ.

ಹೈದರಾಬಾದ್-ಪ್ರಧಾನ ಕಛೇರಿಯ ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಹಿಮಾಚಲ ಪ್ರದೇಶದಲ್ಲಿ ಸುನ್ನಿ ಜಲವಿದ್ಯುತ್ ಯೋಜನೆಯ ಒಪ್ಪಂದದ ಪತ್ರವನ್ನು ಜನವರಿ 14, 2023ರಂದು ನೀಡಲಾಗಿದೆ. ಜನವರಿ 27, 2023ರಂದು ಈ ಕಂಪೆನಿ 5 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಮಾರ್ಚ್ 22 2023ರಂದು, ಸರಕಾರದ ಅಧೀನದ SVJN ಲಿಮಿಟೆಡ್, 1,098 ಕೋಟಿ ಮೌಲ್ಯದ ಯೋಜನೆಗೆ ರಿತ್ವಿಕ್ ಪ್ರಾಜೆಕ್ಟ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಮೂರೇ ವಾರಗಳಲ್ಲಿ ಅಂದರೆ ಏಪ್ರಿಲ್ 11, 2023ರಂದು, ರಿಥ್ವಿಕ್ ಪ್ರಾಜೆಕ್ಟ್ಸ್ ಮತ್ತೆ 40 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ. SBI ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಿದಾಗ ಮಾತ್ರ ರಿತ್ವಿಕ್ ಪ್ರಾಜೆಕ್ಟ್‌ಗಳು ಯಾವ ಪಕ್ಷಕ್ಕೆ ದೇಣಿಗೆ ನೀಡಿವೆ ಎಂಬುದು ಸ್ಪಷ್ಟವಾಗುತ್ತದೆ, ಸಧ್ಯ ರಿತ್ವಿಕ್‌ ಯಾವ ಪಕ್ಷಕ್ಕೆ ಈ ದೇಣಿಗೆ ನೀಡಿದ್ದಾರೆ ಎನ್ನವುದು ಇನ್ನೂ ಸ್ಪಷ್ಟವಾಗಿಲ್ಲ.

ರಿಥ್ವಿಕ್ ಪ್ರಾಜೆಕ್ಟ್ಸ್ ಮುಖ್ಯಸ್ಥರೂ ಆಗಿರುವ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್, 2018ರಲ್ಲಿ 74 ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಆಪಾದಿಸಿದ ಕೆಲವೇ ತಿಂಗಳ ನಂತರ, ಟಿಡಿಪಿಯಿಂದ ಬಿಜೆಪಿಗೆ ಸೇರಿದ್ದರು.

ರಿಥ್ವಿಕ್ ಪ್ರಾಜೆಕ್ಟ್ಸ್ ಗಣಿಗಾರಿಕೆ ಮತ್ತು ನೀರಾವರಿಯಿಂದ ಹೆದ್ದಾರಿಗಳು ಮತ್ತು ಮೂಲಸೌಕರ್ಯಗಳವರೆಗಿನ ಪ್ರಾಜೆಕ್ಟ್‌ಗಳನ್ನು ಮಾಡುತ್ತದೆ. ಕಂಪನಿಯು ಜಮ್ಮುವಿನ ಜಗ್ತಿ ನಗ್ರೋಟಾದಲ್ಲಿ ಕಾಶ್ಮೀರಿ ವಲಸಿಗರಿಗೆ ಮಿನಿ ಟೌನ್‌ಶಿಪ್ ಮತ್ತು ಆಂಧ್ರಪ್ರದೇಶದ ಪಲೇರು ಅಣೆಕಟ್ಟಿನಂತಹ ಯೋಜನೆಗಳ ಟೆಂಡರ್‌ ಕೂಡ ಪಡೆದಿದೆ.

2012ರಿಂದ ರಿತ್ವಿಕ್ ಪ್ರಾಜೆಕ್ಟ್‌ಗಳ ವ್ಯವಹಾರಗಳಲ್ಲಿ ಯಾವುದೇ ಭಾಗಿಯಾಗಿಲ್ಲ ಎಂದು ರಮೇಶ್ ಹೇಳಿಕೊಂಡಿದ್ದಾರೆ. ಆದರೆ, ಅವರ ಸಹೋದರ ಇನ್ನೂ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ ಮತ್ತು ಅವರ ಮಗ ರಿತ್ವಿಕ್ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ವಹಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು 2018ರಲ್ಲಿ ರಿಥ್ವಿಕ್ ಪ್ರಾಜೆಕ್ಟ್‌ಗಳು 74 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವರ್ಷ, ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಘೋಷಿತ ಸಂಪತ್ತು ಹೊಂದಿರುವ ಸಂಸದರಲ್ಲಿ ಅವರ ಹೆಸರನ್ನು ಉಲ್ಲೇಖಿಸಿತ್ತು. ರಮೇಶ್ ಅವರು 258 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...