Homeಮುಖಪುಟಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ...

ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಕಂಪೆನಿಗಳು ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಸಭಾ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್ ಮಾಲಕತ್ವದ ಆಂಧ್ರಪ್ರದೇಶ ಮೂಲದ ಮೂಲಸೌಕರ್ಯ ಕಂಪನಿಯು ಹಿಮಾಚಲ ಪ್ರದೇಶದ ಪ್ರಮುಖ ಯೋಜನೆಗೆ ಟೆಂಡರ್‌ ಪಡೆದ ಮೂರೇ ತಿಂಗಳಲ್ಲಿ 45 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎನ್ನುವುದು ಬಯಲಾಗಿದೆ.

ಹೈದರಾಬಾದ್-ಪ್ರಧಾನ ಕಛೇರಿಯ ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಹಿಮಾಚಲ ಪ್ರದೇಶದಲ್ಲಿ ಸುನ್ನಿ ಜಲವಿದ್ಯುತ್ ಯೋಜನೆಯ ಒಪ್ಪಂದದ ಪತ್ರವನ್ನು ಜನವರಿ 14, 2023ರಂದು ನೀಡಲಾಗಿದೆ. ಜನವರಿ 27, 2023ರಂದು ಈ ಕಂಪೆನಿ 5 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಮಾರ್ಚ್ 22 2023ರಂದು, ಸರಕಾರದ ಅಧೀನದ SVJN ಲಿಮಿಟೆಡ್, 1,098 ಕೋಟಿ ಮೌಲ್ಯದ ಯೋಜನೆಗೆ ರಿತ್ವಿಕ್ ಪ್ರಾಜೆಕ್ಟ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಮೂರೇ ವಾರಗಳಲ್ಲಿ ಅಂದರೆ ಏಪ್ರಿಲ್ 11, 2023ರಂದು, ರಿಥ್ವಿಕ್ ಪ್ರಾಜೆಕ್ಟ್ಸ್ ಮತ್ತೆ 40 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ. SBI ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಿದಾಗ ಮಾತ್ರ ರಿತ್ವಿಕ್ ಪ್ರಾಜೆಕ್ಟ್‌ಗಳು ಯಾವ ಪಕ್ಷಕ್ಕೆ ದೇಣಿಗೆ ನೀಡಿವೆ ಎಂಬುದು ಸ್ಪಷ್ಟವಾಗುತ್ತದೆ, ಸಧ್ಯ ರಿತ್ವಿಕ್‌ ಯಾವ ಪಕ್ಷಕ್ಕೆ ಈ ದೇಣಿಗೆ ನೀಡಿದ್ದಾರೆ ಎನ್ನವುದು ಇನ್ನೂ ಸ್ಪಷ್ಟವಾಗಿಲ್ಲ.

ರಿಥ್ವಿಕ್ ಪ್ರಾಜೆಕ್ಟ್ಸ್ ಮುಖ್ಯಸ್ಥರೂ ಆಗಿರುವ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್, 2018ರಲ್ಲಿ 74 ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಆಪಾದಿಸಿದ ಕೆಲವೇ ತಿಂಗಳ ನಂತರ, ಟಿಡಿಪಿಯಿಂದ ಬಿಜೆಪಿಗೆ ಸೇರಿದ್ದರು.

ರಿಥ್ವಿಕ್ ಪ್ರಾಜೆಕ್ಟ್ಸ್ ಗಣಿಗಾರಿಕೆ ಮತ್ತು ನೀರಾವರಿಯಿಂದ ಹೆದ್ದಾರಿಗಳು ಮತ್ತು ಮೂಲಸೌಕರ್ಯಗಳವರೆಗಿನ ಪ್ರಾಜೆಕ್ಟ್‌ಗಳನ್ನು ಮಾಡುತ್ತದೆ. ಕಂಪನಿಯು ಜಮ್ಮುವಿನ ಜಗ್ತಿ ನಗ್ರೋಟಾದಲ್ಲಿ ಕಾಶ್ಮೀರಿ ವಲಸಿಗರಿಗೆ ಮಿನಿ ಟೌನ್‌ಶಿಪ್ ಮತ್ತು ಆಂಧ್ರಪ್ರದೇಶದ ಪಲೇರು ಅಣೆಕಟ್ಟಿನಂತಹ ಯೋಜನೆಗಳ ಟೆಂಡರ್‌ ಕೂಡ ಪಡೆದಿದೆ.

2012ರಿಂದ ರಿತ್ವಿಕ್ ಪ್ರಾಜೆಕ್ಟ್‌ಗಳ ವ್ಯವಹಾರಗಳಲ್ಲಿ ಯಾವುದೇ ಭಾಗಿಯಾಗಿಲ್ಲ ಎಂದು ರಮೇಶ್ ಹೇಳಿಕೊಂಡಿದ್ದಾರೆ. ಆದರೆ, ಅವರ ಸಹೋದರ ಇನ್ನೂ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ ಮತ್ತು ಅವರ ಮಗ ರಿತ್ವಿಕ್ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ವಹಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು 2018ರಲ್ಲಿ ರಿಥ್ವಿಕ್ ಪ್ರಾಜೆಕ್ಟ್‌ಗಳು 74 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವರ್ಷ, ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಘೋಷಿತ ಸಂಪತ್ತು ಹೊಂದಿರುವ ಸಂಸದರಲ್ಲಿ ಅವರ ಹೆಸರನ್ನು ಉಲ್ಲೇಖಿಸಿತ್ತು. ರಮೇಶ್ ಅವರು 258 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...