Homeಮುಖಪುಟಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ...

ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಕಂಪೆನಿಗಳು ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಸಭಾ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್ ಮಾಲಕತ್ವದ ಆಂಧ್ರಪ್ರದೇಶ ಮೂಲದ ಮೂಲಸೌಕರ್ಯ ಕಂಪನಿಯು ಹಿಮಾಚಲ ಪ್ರದೇಶದ ಪ್ರಮುಖ ಯೋಜನೆಗೆ ಟೆಂಡರ್‌ ಪಡೆದ ಮೂರೇ ತಿಂಗಳಲ್ಲಿ 45 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎನ್ನುವುದು ಬಯಲಾಗಿದೆ.

ಹೈದರಾಬಾದ್-ಪ್ರಧಾನ ಕಛೇರಿಯ ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಹಿಮಾಚಲ ಪ್ರದೇಶದಲ್ಲಿ ಸುನ್ನಿ ಜಲವಿದ್ಯುತ್ ಯೋಜನೆಯ ಒಪ್ಪಂದದ ಪತ್ರವನ್ನು ಜನವರಿ 14, 2023ರಂದು ನೀಡಲಾಗಿದೆ. ಜನವರಿ 27, 2023ರಂದು ಈ ಕಂಪೆನಿ 5 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಮಾರ್ಚ್ 22 2023ರಂದು, ಸರಕಾರದ ಅಧೀನದ SVJN ಲಿಮಿಟೆಡ್, 1,098 ಕೋಟಿ ಮೌಲ್ಯದ ಯೋಜನೆಗೆ ರಿತ್ವಿಕ್ ಪ್ರಾಜೆಕ್ಟ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಮೂರೇ ವಾರಗಳಲ್ಲಿ ಅಂದರೆ ಏಪ್ರಿಲ್ 11, 2023ರಂದು, ರಿಥ್ವಿಕ್ ಪ್ರಾಜೆಕ್ಟ್ಸ್ ಮತ್ತೆ 40 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ. SBI ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಿದಾಗ ಮಾತ್ರ ರಿತ್ವಿಕ್ ಪ್ರಾಜೆಕ್ಟ್‌ಗಳು ಯಾವ ಪಕ್ಷಕ್ಕೆ ದೇಣಿಗೆ ನೀಡಿವೆ ಎಂಬುದು ಸ್ಪಷ್ಟವಾಗುತ್ತದೆ, ಸಧ್ಯ ರಿತ್ವಿಕ್‌ ಯಾವ ಪಕ್ಷಕ್ಕೆ ಈ ದೇಣಿಗೆ ನೀಡಿದ್ದಾರೆ ಎನ್ನವುದು ಇನ್ನೂ ಸ್ಪಷ್ಟವಾಗಿಲ್ಲ.

ರಿಥ್ವಿಕ್ ಪ್ರಾಜೆಕ್ಟ್ಸ್ ಮುಖ್ಯಸ್ಥರೂ ಆಗಿರುವ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್, 2018ರಲ್ಲಿ 74 ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಆಪಾದಿಸಿದ ಕೆಲವೇ ತಿಂಗಳ ನಂತರ, ಟಿಡಿಪಿಯಿಂದ ಬಿಜೆಪಿಗೆ ಸೇರಿದ್ದರು.

ರಿಥ್ವಿಕ್ ಪ್ರಾಜೆಕ್ಟ್ಸ್ ಗಣಿಗಾರಿಕೆ ಮತ್ತು ನೀರಾವರಿಯಿಂದ ಹೆದ್ದಾರಿಗಳು ಮತ್ತು ಮೂಲಸೌಕರ್ಯಗಳವರೆಗಿನ ಪ್ರಾಜೆಕ್ಟ್‌ಗಳನ್ನು ಮಾಡುತ್ತದೆ. ಕಂಪನಿಯು ಜಮ್ಮುವಿನ ಜಗ್ತಿ ನಗ್ರೋಟಾದಲ್ಲಿ ಕಾಶ್ಮೀರಿ ವಲಸಿಗರಿಗೆ ಮಿನಿ ಟೌನ್‌ಶಿಪ್ ಮತ್ತು ಆಂಧ್ರಪ್ರದೇಶದ ಪಲೇರು ಅಣೆಕಟ್ಟಿನಂತಹ ಯೋಜನೆಗಳ ಟೆಂಡರ್‌ ಕೂಡ ಪಡೆದಿದೆ.

2012ರಿಂದ ರಿತ್ವಿಕ್ ಪ್ರಾಜೆಕ್ಟ್‌ಗಳ ವ್ಯವಹಾರಗಳಲ್ಲಿ ಯಾವುದೇ ಭಾಗಿಯಾಗಿಲ್ಲ ಎಂದು ರಮೇಶ್ ಹೇಳಿಕೊಂಡಿದ್ದಾರೆ. ಆದರೆ, ಅವರ ಸಹೋದರ ಇನ್ನೂ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ ಮತ್ತು ಅವರ ಮಗ ರಿತ್ವಿಕ್ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ವಹಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು 2018ರಲ್ಲಿ ರಿಥ್ವಿಕ್ ಪ್ರಾಜೆಕ್ಟ್‌ಗಳು 74 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವರ್ಷ, ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಘೋಷಿತ ಸಂಪತ್ತು ಹೊಂದಿರುವ ಸಂಸದರಲ್ಲಿ ಅವರ ಹೆಸರನ್ನು ಉಲ್ಲೇಖಿಸಿತ್ತು. ರಮೇಶ್ ಅವರು 258 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...