Homeಮುಖಪುಟಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ...

ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಕಂಪೆನಿಗಳು ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಸಭಾ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್ ಮಾಲಕತ್ವದ ಆಂಧ್ರಪ್ರದೇಶ ಮೂಲದ ಮೂಲಸೌಕರ್ಯ ಕಂಪನಿಯು ಹಿಮಾಚಲ ಪ್ರದೇಶದ ಪ್ರಮುಖ ಯೋಜನೆಗೆ ಟೆಂಡರ್‌ ಪಡೆದ ಮೂರೇ ತಿಂಗಳಲ್ಲಿ 45 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎನ್ನುವುದು ಬಯಲಾಗಿದೆ.

ಹೈದರಾಬಾದ್-ಪ್ರಧಾನ ಕಛೇರಿಯ ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಹಿಮಾಚಲ ಪ್ರದೇಶದಲ್ಲಿ ಸುನ್ನಿ ಜಲವಿದ್ಯುತ್ ಯೋಜನೆಯ ಒಪ್ಪಂದದ ಪತ್ರವನ್ನು ಜನವರಿ 14, 2023ರಂದು ನೀಡಲಾಗಿದೆ. ಜನವರಿ 27, 2023ರಂದು ಈ ಕಂಪೆನಿ 5 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಮಾರ್ಚ್ 22 2023ರಂದು, ಸರಕಾರದ ಅಧೀನದ SVJN ಲಿಮಿಟೆಡ್, 1,098 ಕೋಟಿ ಮೌಲ್ಯದ ಯೋಜನೆಗೆ ರಿತ್ವಿಕ್ ಪ್ರಾಜೆಕ್ಟ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಮೂರೇ ವಾರಗಳಲ್ಲಿ ಅಂದರೆ ಏಪ್ರಿಲ್ 11, 2023ರಂದು, ರಿಥ್ವಿಕ್ ಪ್ರಾಜೆಕ್ಟ್ಸ್ ಮತ್ತೆ 40 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ. SBI ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಿದಾಗ ಮಾತ್ರ ರಿತ್ವಿಕ್ ಪ್ರಾಜೆಕ್ಟ್‌ಗಳು ಯಾವ ಪಕ್ಷಕ್ಕೆ ದೇಣಿಗೆ ನೀಡಿವೆ ಎಂಬುದು ಸ್ಪಷ್ಟವಾಗುತ್ತದೆ, ಸಧ್ಯ ರಿತ್ವಿಕ್‌ ಯಾವ ಪಕ್ಷಕ್ಕೆ ಈ ದೇಣಿಗೆ ನೀಡಿದ್ದಾರೆ ಎನ್ನವುದು ಇನ್ನೂ ಸ್ಪಷ್ಟವಾಗಿಲ್ಲ.

ರಿಥ್ವಿಕ್ ಪ್ರಾಜೆಕ್ಟ್ಸ್ ಮುಖ್ಯಸ್ಥರೂ ಆಗಿರುವ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್, 2018ರಲ್ಲಿ 74 ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಆಪಾದಿಸಿದ ಕೆಲವೇ ತಿಂಗಳ ನಂತರ, ಟಿಡಿಪಿಯಿಂದ ಬಿಜೆಪಿಗೆ ಸೇರಿದ್ದರು.

ರಿಥ್ವಿಕ್ ಪ್ರಾಜೆಕ್ಟ್ಸ್ ಗಣಿಗಾರಿಕೆ ಮತ್ತು ನೀರಾವರಿಯಿಂದ ಹೆದ್ದಾರಿಗಳು ಮತ್ತು ಮೂಲಸೌಕರ್ಯಗಳವರೆಗಿನ ಪ್ರಾಜೆಕ್ಟ್‌ಗಳನ್ನು ಮಾಡುತ್ತದೆ. ಕಂಪನಿಯು ಜಮ್ಮುವಿನ ಜಗ್ತಿ ನಗ್ರೋಟಾದಲ್ಲಿ ಕಾಶ್ಮೀರಿ ವಲಸಿಗರಿಗೆ ಮಿನಿ ಟೌನ್‌ಶಿಪ್ ಮತ್ತು ಆಂಧ್ರಪ್ರದೇಶದ ಪಲೇರು ಅಣೆಕಟ್ಟಿನಂತಹ ಯೋಜನೆಗಳ ಟೆಂಡರ್‌ ಕೂಡ ಪಡೆದಿದೆ.

2012ರಿಂದ ರಿತ್ವಿಕ್ ಪ್ರಾಜೆಕ್ಟ್‌ಗಳ ವ್ಯವಹಾರಗಳಲ್ಲಿ ಯಾವುದೇ ಭಾಗಿಯಾಗಿಲ್ಲ ಎಂದು ರಮೇಶ್ ಹೇಳಿಕೊಂಡಿದ್ದಾರೆ. ಆದರೆ, ಅವರ ಸಹೋದರ ಇನ್ನೂ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ ಮತ್ತು ಅವರ ಮಗ ರಿತ್ವಿಕ್ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ವಹಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು 2018ರಲ್ಲಿ ರಿಥ್ವಿಕ್ ಪ್ರಾಜೆಕ್ಟ್‌ಗಳು 74 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವರ್ಷ, ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಘೋಷಿತ ಸಂಪತ್ತು ಹೊಂದಿರುವ ಸಂಸದರಲ್ಲಿ ಅವರ ಹೆಸರನ್ನು ಉಲ್ಲೇಖಿಸಿತ್ತು. ರಮೇಶ್ ಅವರು 258 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...