Homeಮುಖಪುಟ₹ 371 ಕೋಟಿಯ ಬೃಹತ್ ಹಗರಣ | ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್ ಕೊಟ್ಟ ಇಡಿ

₹ 371 ಕೋಟಿಯ ಬೃಹತ್ ಹಗರಣ | ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್ ಕೊಟ್ಟ ಇಡಿ

ಮೋದಿಯ ವಾಷಿಂಗ್‌ ಮೆಷಿನ್‌ನಲ್ಲಿ ಸ್ವಚ್ಛಗೊಂಡ ನಾಯ್ಡು ಎಂದ ಕಾಂಗ್ರೆಸ್

- Advertisement -
- Advertisement -

ಕೌಶಲ್ಯಾಭಿವೃದ್ಧಿ ನಿಗಮದ 371 ಕೋಟಿ ರೂಪಾಯಿ ಹಗರಣದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಜಗನ್‌ಮೋಹನ್‌ ರೆಡ್ಡಿ ಸರ್ಕಾರ ರಚಿಸಿದ್ದ ಸಿಐಡಿ ತನಿಖೆ ಆಧರಿಸಿ ಚಂದ್ರಬಾಬು ನಾಯ್ಡು ಅವರನ್ನು 2023ರಲ್ಲಿ ಬಂಧಿಸಲಾಗಿತ್ತು. 53 ದಿನಗಳ ಕಾಲ ಜೈಲಿನಲ್ಲಿದ್ದ ಅವರು ಅಕ್ಟೋಬರ್ 31, 2023ರಂದು ರಂದು ಜಾಮೀನು ಪಡೆದು ಹೊರ ಬಂದಿದ್ದರು.

ಪ್ರಕರಣ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಡಿಸೈನ್‌ಟೆಕ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮತ್ತು ಇತರರಿಗೆ ಸೇರಿದ 23.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆಯಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಇಡಿಯ ಹೈದರಾಬಾದ್ ಘಟಕ ಮುಂದಾಗಿದೆ.

ಆದರೆ, ಸೀಮೆನ್ಸ್ ಕಂಪನಿಯ ಸಹಭಾಗಿತ್ವದ ಸರ್ಕಾರದ ಕೌಶಲ್ಯ ಮತ್ತು ಉದ್ಯಮಶೀಲತೆ ಅಭಿವೃದ್ಧಿಯ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಪಾತ್ರವಿಲ್ಲ ಎಂದಿದೆ.

ಕಳೆದ ಜೂನ್‌ನಲ್ಲಿ ಪ್ರಕಟಗೊಂಡ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮತ್ತು ಲೋಕಸಭೆಯ ಚುನಾವಣೆಯ ಫಲಿತಾಂಶದಲ್ಲಿ ಚಂದ್ರಬಾಬು ನಾಯ್ದು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಅಭೂತಪೂರ್ವ ಜಯಗಳಿಸಿದೆ. ಪ್ರಸ್ತುತ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಸಿಎಂ ಆಗಿದ್ದಾರೆ. ಕೇಂದ್ರದಲ್ಲಿ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ.

ಇದಕ್ಕೂ ಎರಡು ತಿಂಗಳ ಮುಂದೆ, ಅಂದರೆ ಏಪ್ರಿಲ್ 5ರಂದು ಚಂದ್ರಬಾಬು ನಾಯ್ದು ಮತ್ತು ಇತರರ ವಿರುದ್ದ ವಿಜಯವಾಡದ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಕೋರ್ಟ್‌ಗೆ ಸಿಐಡಿ ಚಾರ್ಜ್‌ಶೀಟ್ ಸಲ್ಲಿಸಿದೆ.

ಸೀಮೆನ್ಸ್ ಯೋಜನೆಯಲ್ಲಿ ರಾಜ್ಯವು ಹೂಡಿಕೆ ಮಾಡಿದ ಹಣವನ್ನು ಬೇರೆಡೆಗೆ ತಿರುಗಿಸುವ ಮೂಲಕ ಆಂಧ್ರ ಸರ್ಕಾರವನ್ನು ವಂಚಿಸಿದ ಆರೋಪದ ಮೇಲೆ ಡಿಸೈನ್‌ಟೆಕ್ ಸಿಸ್ಟಮ್ಸ್ ಮತ್ತು ಇತರರ ವಿರುದ್ಧ ಸಿಐಡಿ ದಾಖಲಿಸಿದ ಎಫ್‌ಐಆರ್ ಆಧರಿಸಿ ಇಡಿ ತನಿಖೆ ಪ್ರಾರಂಭಿಸಿತ್ತು.

ಕಂಪನಿಯ ಎಂಡಿ ವಿಕಾಸ್ ವಿನಾಯಕ್ ಖಾನ್‌ವಾಲ್ಕರ್, ಸೌಮ್ಯಾದ್ರಿ ಶೇಖರ್ ಬೋಸ್, ಅಲಿಯಾಸ್ ಸುಮನ್ ಬೋಸ್ (ಸೀಮೆನ್ಸ್ ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಮಾಜಿ ಎಂಡಿ), ಮತ್ತು ಅವರ ಸಹಚರರಾದ ಮುಕುಲ್ ಚಂದ್ರ ಅಗರ್ವಾಲ್ ಮತ್ತು ಸುರೇಶ್ ಗೋಯಲ್ ಅವರು, ಸಾಮಾಗ್ರಿ/ಸೇವೆಗಳನ್ನು ಪೂರೈಸುವ ನೆಪದಲ್ಲಿ ನಕಲಿ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡು ಬಹು-ಪದರದ ವಹಿವಾಟುಗಳ ಮೂಲಕ ಶೆಲ್ ಕಂಪನಿಗಳು ಅಥವಾ ನಿಷ್ಕ್ರಿಯ ಘಟಕಗಳ ಮೂಲಕ ಸರ್ಕಾರಿ ಹಣವನ್ನು ಬೇರೆಡೆಗೆ ತಿರುಗಿಸಿದ್ದಾರೆ ಎಂಬುವುದು ತನಿಖೆಯಿಂದ ತಿಳಿದು ಬಂದಿರುವುದಾಗಿ ಇಡಿ ಹೇಳಿದೆ.

ಡಿಸೈನ್‌ಟೆಕ್ ಕಂಪನಿಯ 31.2 ಕೋಟಿ ಮೊತ್ತದ ಸ್ಥಿರ ಠೇವಣಿಯನ್ನು ಈ ಹಿಂದೆಯೇ ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಖಾನ್‌ವಾಲ್ಕರ್, ಬೋಸ್, ಅಗರ್ವಾಲ್ ಮತ್ತು ಗೋಯಲ್ ಅವರನ್ನು ಬಂಧಿಸಿದೆ. ವಿಶಾಖಪಟ್ಟಣ ಪಿಎಂಎಲ್ಎ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.

ಮೋದಿಯ ವಾಷಿಂಗ್‌ ಮೆಷಿನ್‌ನಲ್ಲಿ ಸ್ವಚ್ಛಗೊಂಡ ನಾಯ್ಡು – ಕಾಂಗ್ರೆಸ್

ಬಿಜೆಪಿಯನ್ನು ಬೆಂಬಲಿಸಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಅವರಿಗೆ ಇಡಿ ಕ್ಲೀನ್ ಚಿಟ್‌ ನೀಡಿರುವುದಕ್ಕೆ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಕಾಂಗ್ರೆಸ್ “ಮೋದಿಯವರ ವಾಷಿಂಗ್ ಮೆಷಿನ್ ಬಗ್ಗೆ ನಿಮಗೆ ಗೊತ್ತಾ? ಈ ವಾಷಿಂಗ್ ಮೆಷಿನ್‌ನಲ್ಲಿ ಭ್ರಷ್ಟಾಚಾರಿಗಳನ್ನು ಹಾಕಿದರೆ ಕೊಳೆಯೆಲ್ಲ ಹೋಗುತ್ತದೆ. ಈ ಬಾರಿ ಚಂದ್ರಬಾಬು ನಾಯ್ಡು ಅವರ ಸರದಿ. ಅವರ ವಿರುದ್ದ ಭ್ರಷ್ಟಾಚಾರದ ಕೊಳೆ ಹೋಗಿದೆ. ಇದು ಬಿಜೆಪಿ ವಾಷಿಂಗ್ ಮೆಷಿನ್” ಎಂದಿದೆ.

ಇದನ್ನೂ ಓದಿ : ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ | ಸೆಕ್ಷನ್ 6ಎ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...